ಬೆಳ್ತಂಗಡಿ, : ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ. ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ.


ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಅಷ್ಟಮಂಗಲ ಪ್ರಶ್ನೆ ಇಡಲಾಗಿತ್ತು. ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ಕಳೆದ ಎರಡು ದಿನಗಳಿಂದ ನಡೆಯುತ್ತಿತ್ತು. ಈ ವೇಳೆ ಅಷ್ಟಮಂಗಲ ಪ್ರಶ್ನೆಯಲ್ಲಿ ಇದು ಶಿವಲಿಂಗ ಇರುವ ಜಾಗ, ಈ ಪರಿಸರದಲ್ಲಿ ಶಿವನ ಸಾನಿಧ್ಯ ಇದೆ ಎಂದು ದೈವಜ್ಞರು ಸೂಚನೆ ನೀಡಿದ್ದರು. ಅವರು ಸೂಚಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನ ಅಡಿ ಪುರಾತನ ಶಿವಲಿಂಗ ಪತ್ತೆಯಾಗಿದೆ.

ಸುಮಾರು 2 ರಿಂದ 3 ಅಡಿ ಉದ್ದದ ಶಿವಲಿಂಗದ ಪಾಣಿಪೀಠ ಇರುವ ಶಿವಲಿಂಗವಾಗಿದೆ.ಸುಮಾರು 400 ರಿಂದ 500 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದ್ದು ಶಿವಲಿಂಗ ಪ್ರತಿಷ್ಟೆಯಾಗಬೇಕು ಎಂದು ಕಂಡುಬಂದಿದೆ.
Discover more from Coastal Times Kannada
Subscribe to get the latest posts sent to your email.







Discussion about this post