ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡಿದ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಕರ್ನಾಟಕದ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದರು.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಈ ನಡೆಯನ್ನು ಹಿಂದೂ ಮಹಾಸಭಾ ಖಂಡಿಸುತ್ತದೆ. ಹಿಂದೂ ಮಹಾಸಭಾ ಶ್ರೀರಾಮನ ವಿಚಾರವನ್ನು ಎಂದಿಗೂ ರಾಜಕೀಯವಾಗಿ ಬಳಸಿಕೊಂಡಿಲ್ಲ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮೂಲ ವಕಾಲತ್ತುದಾರರು ಹಿಂದೂ ಮಹಾಸಭಾ ಆಗಿದ್ದು, ರಾಮಮಂದಿರ ಉದ್ಘಾಟನೆಗೆ ಹಿಂದೂ ಮಹಾಸಭಾ ಹಾಗೂ ನಿರ್ಮೂಯಿ ಅಖಾಡವನ್ನು ಆಹ್ವಾನಿಸಿಲ್ಲ. ಇದು ಕೇಂದ್ರ ಸರ್ಕಾರದ ಸ್ವಾರ್ಥ ರಾಜಕಾರಣವನ್ನು ತೋರಿಸುತ್ತದೆ’ ಎಂದು ಆರೋಪಿಸಿದರು.
ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ಎಲ್.ಕೆ. ಸುವರ್ಣ, ಖಜಾಂಚಿ ಲೋಕೇಶ್ ಉಳ್ಳಾಲ್, ಹಿಮಾಂಶು ಶರ್ಮ, ಪ್ರವೀಣ ಚಂದ್ರ ರಾವ್ ಇದ್ದರು.
Discussion about this post