• About us
  • Contact us
  • Disclaimer
Sunday, December 28, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜ್ಯ ಕಾಂಗ್ರೆಸ್‌ ಸಮಾವೇಶ, ನಮ್ಮ ಗ್ಯಾರಂಟಿಯನ್ನೇ ಕದ್ದು ಈಗ ಬಿಜೆಪಿಯವರು ಮೋದಿ ಗ್ಯಾರಂಟಿ ಅಂತಿದ್ದಾರೆ ; ಸಿಎಂ ಸಿದ್ದರಾಮಯ್ಯ

Coastal Times by Coastal Times
February 18, 2024
in ರಾಜಕೀಯ
ರಾಜ್ಯ ಕಾಂಗ್ರೆಸ್‌ ಸಮಾವೇಶ, ನಮ್ಮ ಗ್ಯಾರಂಟಿಯನ್ನೇ ಕದ್ದು ಈಗ ಬಿಜೆಪಿಯವರು ಮೋದಿ ಗ್ಯಾರಂಟಿ ಅಂತಿದ್ದಾರೆ ; ಸಿಎಂ ಸಿದ್ದರಾಮಯ್ಯ
40
VIEWS
WhatsappTelegramShare on FacebookShare on Twitter

ಮಂಗಳೂರು: ಲೋಕಸಭೆ ಚುನಾ ವಣೆಗೆ ದಿನ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯ ಪಾರಂಪರಿಕ ಭದ್ರಕೋಟೆ ಎನಿಸಿಕೊಂಡಿರುವ ಮಂಗಳೂರಿನಲ್ಲಿ ಕಾಂಗ್ರೆಸ್‌ ತನ್ನ ಲೋಕ ಸಮರದ ಪ್ರಚಾರಕ್ಕೆ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್‌ನ ಗ್ಯಾರಂಟಿ ಪದವನ್ನು ಬಿಜೆಪಿಯವರು ಕದ್ದು ಈಗ ಮೋದಿ ಗ್ಯಾರಂಟಿ ಅಂತಿದ್ದಾರೆ. ನಮ್ಮ ಕಾರ್ಯಕರ್ತರು ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮನೆಗಳಿಗೆ ತಲುಪಿಸದೇ ಇದ್ದರೆ ಬಿಜೆಪಿಯವರು ನಾವೇ ಮಾಡಿದ್ದು ಅನ್ನುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರ ಹೊರವಲಯದ ಅಡ್ಯಾರ್‌ನಲ್ಲಿ ಶನಿವಾರ ನಡೆದ ರಾಜ್ಯ ಕಾಂಗ್ರೆಸ್‌ ಸಮಾವೇಶ ದಲ್ಲಿ ಗ್ಯಾರಂಟಿ ಮಾರ್ಗದ ಮೂಲಕ ಚುನಾವಣೆ ಗೆಲ್ಲುವ ಸಂಕಲ್ಪವನ್ನು ಕಾಂಗ್ರೆಸ್‌ ಮಾಡಿತು. ಕರಾವಳಿ ಸಹಿತ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾರ್ಯಕರ್ತರಿಗೆ ನೀಡಲಾಯಿತು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌, ಪಕ್ಷದ ಉಸ್ತುವಾರಿ ರಣದೀಪ್‌ ಸುಜೇìವಾಲ ಅವರು ಕೇಂದ್ರ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು.

ನಾವು ಗ್ಯಾರಂಟಿ ಕೊಟ್ಟರೂ ದಿವಾಳಿಯಾಗಿಲ್ಲ : ನಮ್ಮ ಕಾರ್ಯಕರ್ತರು ಪ್ರಜ್ಞಾವಂತರಿದ್ದಾರೆ, ನುಡಿದಂತೆ ನಡೆದಿದ್ದೇವೋ ಅಂತ ವಿಮರ್ಶೆ ಮಾಡುವ ಶಕ್ತಿ ಇದೆ, ನಾವು ಆರೇ ತಿಂಗಳಲ್ಲಿ ಚುನಾವಣೆಯಲ್ಲಿ ಹೇಳಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಶಕ್ತಿ ಯೋಜನೆಯಲ್ಲಿ ಬರೋಬ್ಬರಿ 155 ಕೋಟಿ ಮಹಿಳೆಯರು ಫ್ರೀಯಾಗಿ ಪ್ರಯಾಣ ಮಾಡಿದ್ದಾರೆ. ಬಿಜೆಪಿಯವರು ಯಾವತ್ತಾದರೂ ಇಂಥ ಕೆಲಸ ಮಾಡಿದ್ರಾ.. ಒಂದು ಲಕ್ಷ ಜನರು ಯುವನಿಧಿಯನ್ನು ನೋಂದಣಿ ಮಾಡಿಸಿದ್ದಾರೆ. ಈ ವರ್ಷ ಯಾವುದೇ ಮಧ್ಯವರ್ತಿ ಇಲ್ಲದೆ 36 ಸಾವಿರ ಕೋಟಿ ರೂ. ಜನರ ಖಾತೆಗೆ ನೇರವಾಗಿ ತಲುಪಿಸಿದ್ದೇವೆ, ಬಿಜೆಪಿಯವರು ಗ್ಯಾರಂಟಿ ಕೊಡಕ್ಕಾಗಲ್ಲ, ರಾಜ್ಯ ದಿವಾಳಿಯಾಗತ್ತೆ ಎಂದಿದ್ದರು. ಗ್ಯಾರಂಟಿ ಕೊಟ್ಟು ದಿವಾಳಿ ಆಗಿಲ್ಲ, ಆರ್ಥಿಕವಾಗಿ ಸುಭದ್ರವಾಗಿದ್ದೇವೆ.

ಬಿಜೆಪಿಯವರನ್ನು ಯಾವತ್ತೂ ನಂಬಬೇಡಿ. ಅವರು ಅಧಿಕಾರಕ್ಕೆ ಬಂದಾಗ ನುಡಿದಂತೆ ನಡೆಯಲ್ಲ. 10 ವರ್ಷ ಹಿಂದೆ ನರೇಂದ್ರ ಮೋದಿ ನೀಡಿದ ಯಾವ ಪ್ರಮುಖ ಭರವಸೆಯನ್ನು ಈಡೇರಿಸಿದ್ದಾರೆ? ಕೇವಲ ಕೋಮುವಾದ, ಧರ್ಮ, ಜಾತಿಗಳ ನಡುವೆ ಬೆಂಕಿ ಹಚ್ಚೋದು, ಭಾವನಾತ್ಮಕ- ಧಾರ್ಮಿಕ ವಿಚಾರಗಳನ್ನು ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದಾರೆ. ಆದರೆ ನಾವು ನುಡಿದಂತೆ ನಡೆದಿದ್ದೇವೆ. ಎಲ್ಲ ಐದೂ ಗ್ಯಾರಂಟಿ ಭರವಸೆ ಈಡೇರಿಸಿದ್ದೇವೆ. ಮಹಿಳೆಯರು ಈವರೆಗೆ 155 ಕೋಟಿ ಬಾರಿ ಉಚಿತವಾಗಿ ಸರಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. 1.20 ಕೋಟಿ ಕುಟುಂಬಗಳಿಗೆ 5 ಕೆಜಿ ಅಕ್ಕಿಯ ಹಣವನ್ನು ನೀಡುತ್ತಿದ್ದೇವೆ. 1.17 ಕೋಟಿ ಮಹಿಳೆಯರಿಗೆ 2 ಸಾವಿರ ರೂ ಗೃಹಲಕ್ಷ್ಮೀ ಹಣ ತಲುಪುತ್ತಿದೆ. ಈ ವರ್ಷ 36 ಸಾವಿರ ಕೋಟಿ ರೂ.ಗಳು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳ ಕೈ ತಲುಪಿದೆ ಎಂದು ಲೆಕ್ಕ ಹೇಳಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಯಾವತ್ತಾದರೂ ಇಂಥ ಕೆಲಸ ಮಾಡಲು ಸಾಧ್ಯವಾಗಿದಾ ಎಂದು ಪ್ರಶ್ನಿಸಿದರು.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹೆಂಡ್ತಿ ಜತೆ ಮಲಗಿದ್ದಾಗಲೇ ರೌಡಿಶೀಟರ್ ಹತ್ಯೆ: ಮೀಸೆ ಚಿಗುರದ ಬಿಸಿ ರಕ್ತದ ಹುಡುಗರನ್ನೇ ಹತ್ಯೆಗೆ ರೆಡಿ ಮಾಡಿದ್ದ.

Next Post

ಡಾ. ಜೆರಿ ನಿಡ್ಡೊಡಿಯವರಿಗೆ ಕೊಂಕಣಿ ಲೇಖಕ್ ಸಂಘ್‌ನ ಪ್ರಶಸ್ತಿ ಪ್ರದಾನ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
50
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಡಾ. ಜೆರಿ ನಿಡ್ಡೊಡಿಯವರಿಗೆ ಕೊಂಕಣಿ ಲೇಖಕ್ ಸಂಘ್‌ನ ಪ್ರಶಸ್ತಿ ಪ್ರದಾನ

ಡಾ. ಜೆರಿ ನಿಡ್ಡೊಡಿಯವರಿಗೆ ಕೊಂಕಣಿ ಲೇಖಕ್ ಸಂಘ್‌ನ ಪ್ರಶಸ್ತಿ ಪ್ರದಾನ

Discussion about this post

Recent News

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

December 25, 2025
30
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

December 25, 2025
15
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

December 25, 2025
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

December 25, 2025
ಮಂಗಳೂರು: ಡಿ.27 ಗೋಲ್ಡ್ ಫಿಂಚ್ ಸಿಟಿಯಲ್ಲಿ 9ನೇ ವರ್ಷದ ‘ ಮಂಗಳೂರು ಕಂಬಳ ’ – ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಡಿ.27 ಗೋಲ್ಡ್ ಫಿಂಚ್ ಸಿಟಿಯಲ್ಲಿ 9ನೇ ವರ್ಷದ ‘ ಮಂಗಳೂರು ಕಂಬಳ ’ – ಕ್ಯಾ. ಬ್ರಿಜೇಶ್ ಚೌಟ

December 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d