• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರತಿಭಟನೆ ನಿರತ ಪೌರ ಕಾರ್ಮಿಕರೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸಂಧಾನ ಯಶಸ್ವಿ

Coastal Times by Coastal Times
March 18, 2023
in ಕರಾವಳಿ
ಪ್ರತಿಭಟನೆ ನಿರತ ಪೌರ ಕಾರ್ಮಿಕರೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸಂಧಾನ ಯಶಸ್ವಿ
138
VIEWS
WhatsappTelegramShare on FacebookShare on Twitter

ಮಂಗಳೂರು: ನಗರದಲ್ಲಿ ಒಳಚರಂಡಿ ನಿರ್ವಹಣೆ ಕಾರ್ಮಿಕರ ಧರಣಿ ನಿರತ ಅಳಕೆ ಪ್ರದೇಶಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಶುಕ್ರವಾರ ಭೇಟಿ ನೀಡಿ, ಕಾರ್ಮಿಕರ ಜತೆ ಸಂಧಾನ ಮಾತುಕತೆ ನಡೆಸಿದರು.

ಮಾ.13ರಿಂದ ಪೌರ ಕಾರ್ಮಿಕರು ಹೊರಗುತ್ತಿಗೆ ನೌಕರರ ನೇರ ನೇಮಕಾತಿ/ನೇರ ಪಾವತಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ ಆರಂಭಿಸಲಾಗಿತ್ತು, ಮಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳ ಪೌರ ಕಾರ್ಮಿಕರು ಪ್ರತಿಭಟನೆ ನಿರತರಾಗಿದ್ದರು. ಇದರಿಂದ ಮಂಗಳೂರು ನಗರದಲ್ಲಿ ಒಳಚರಂಡಿ ಸಮಸ್ಯೆ ಬಿಗಡಾಯಿಸುವಂತಾಗಿತ್ತು. ಶುಕ್ರವಾರ ಮಧ್ಯಾಹ್ನದ ಒಳಗೆ ಶಾಸಕರು, ಅಧಿಕಾರಿಗಳು ಸ್ಥಳಕ್ಕೆ ಬಂದು ಭರವಸೆ ನೀಡದಿದ್ದರೆ ತ್ಯಾಜ್ಯವನ್ನು ಮೈಗೆ ಸುರಿದುಕೊಂಡು ಮಹಾನಗರ ಪಾಲಿಕೆಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿದ್ದರು.‌

ಈ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮೇಯರ್, ಕಮಿಷನರ್ ಜತೆಗೂಡಿ ಕಾರ್ಮಿಕರೊಂದಿಗೆ ಸಭೆ ನಡೆಸಿದರು. ಸಭೆಯ ಬಳಿಕ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ರಾಜ್ಯಾದ್ಯಂತ ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕಾರ್ಮಿಕರು ನ್ಯಾಯಯುತವಾಗಿಯೇ ಹೋರಾಟ ಮಾಡುತ್ತಿದ್ದಾರೆ. ಅರ್ಹವಾಗಿಯೇ ಅವರಿಗೆ ಸವಲತ್ತುಗಳು ಸಿಗಬೇಕಾಗಿದೆ. ಆದರೆ ಇದರಿಂದ ಮಂಗಳೂರು ಜನರು ಭಾರೀ ತೊಂದರೆ ಅನುಭವಿಸುತ್ತಿರುವ ಬಗ್ಗೆ ಕಾರ್ಮಿಕರಿಗೆ ಮನವರಿಕೆ ಮಾಡಲಾಗಿದೆ. ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಭರವಸೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕೂಡಲೇ ಕೊನೆಗೊಳಿಸಿ ಒಳಚರಂಡಿ ವ್ಯವಸ್ಥೆಯನ್ನು ಆರಂಭಿಸುವುದಾಗಿ ಕಾರ್ಮಿಕರು ಭರವಸೆ ನೀಡಿದ್ದಾರೆ ಎಂದರು. ಮಂಗಳೂರು ನಗರ ಆಯುಕ್ತರ ಚನ್ನಬಸಪ್ಪ ಮಾತನಾಡಿ, ಒಳಚರಂಡಿ ಕಾರ್ಮಿಕರ ಪ್ರತಿಭಟನೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ಇದರಿಂದ ಸಾರ್ವಜನಿಕರ ಮೂಲ ಸೌಕರ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಸಹಕಾರ ನೀಡಬೇಕು ಎಂದು ಆಗ್ರಹ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಮಾಜಿ ಮೇಯರ್ ದಿವಾಕರ್, ಕಾರ್ಪೊರೇಟರ್‌ಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಜಯಶ್ರೀ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಊರ್ಫಿ ತಂಗಿ ಎಂದು ನಿಯಾ ಶರ್ಮಾಗೆ ಟ್ರೋಲ್ ಮಾಡಿದ ನೆಟ್ಟಿಗರು

Next Post

ನಂತೂರಿನಲ್ಲಿ ಅಪಘಾತ; ಸ್ಕೂಟರ್ ನಲ್ಲಿದ್ದ ತಂದೆ- ಮಗಳು ಸಾವು

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
17
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ನಂತೂರಿನಲ್ಲಿ ಅಪಘಾತ; ಸ್ಕೂಟರ್ ನಲ್ಲಿದ್ದ ತಂದೆ- ಮಗಳು ಸಾವು

ನಂತೂರಿನಲ್ಲಿ ಅಪಘಾತ; ಸ್ಕೂಟರ್ ನಲ್ಲಿದ್ದ ತಂದೆ- ಮಗಳು ಸಾವು

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
17
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d