• About us
  • Contact us
  • Disclaimer
Friday, May 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೇಶದಲ್ಲಿ ಕೈಗೆ ಸಿಗದಂತೆ ಚಿನ್ನದ ದರ ಏರಿಕೆ ಕಾಣುತ್ತಿದೆ: ಇದೇ ಮೊದಲ ಬಾರಿಗೆ 90 ಸಾವಿರದ ಗಡಿದಾಟಿದ ಚಿನ್ನ

Coastal Times by Coastal Times
March 18, 2025
in ರಾಷ್ಟ್ರೀಯ ಸುದ್ದಿ
ದೇಶದಲ್ಲಿ ಕೈಗೆ ಸಿಗದಂತೆ ಚಿನ್ನದ ದರ ಏರಿಕೆ ಕಾಣುತ್ತಿದೆ: ಇದೇ ಮೊದಲ ಬಾರಿಗೆ 90 ಸಾವಿರದ ಗಡಿದಾಟಿದ ಚಿನ್ನ
38
VIEWS
WhatsappTelegramShare on FacebookShare on Twitter

ನ್ಯೂಯಾರ್ಕ್​: ಭೌಗೋಳಿಕ ರಾಜಕೀಯ ಮತ್ತು ಆರ್ಥಿಕ ಅನಿಶ್ಚಿತತೆಯಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಚಿತ್ತ ಹರಿಸುತ್ತಿದ್ದಾರೆ. ಹೀಗಾಗಿ ಚಿನ್ನದ ದರ ನಿರಂತರ ಏರಿಕೆಯತ್ತ ಸಾಗುವಂತೆ ಮಾಡಿದೆ. ಅಮೂಲ್ಯವಾದ ಲೋಹ ಬಂಗಾರ ಇದೇ ಮೊದಲ ಬಾರಿಗೆ ಪ್ರತಿ ಔನ್ಸ್​ ಗೆ 3,000 ಡಾಲರ್​​ ಆಗಿದೆ.

ಇನ್ನು ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಂದೂ ಕೂಡಾ ಭಾರೀ ಏರಿಕೆಯಾಗಿದೆ. ಗುರುವಾರ 10 ಗ್ರಾಂ ಚಿನ್ನದ ಬೆಲೆ ರೂ.89,550 ಇದ್ದರೆ, ಶುಕ್ರವಾರ ರೂ.920 ಏರಿಕೆಯಾಗಿ ರೂ.90,470 ಆಗಿತ್ತು. ಶನಿವಾರವಾದ ಇಂದು ಮತ್ತೆ 300 ರೂಗಳಷ್ಟು ಏರಿಕೆ ಕಂಡು 90724ಕ್ಕೆ ತಲುಪಿದೆ. ಪ್ರತಿ ಕೆಜಿ ಬೆಳ್ಳಿಯ ಬೆಲೆ ಗುರುವಾರ ರೂ.1,01,29 ರಷ್ಟಿದ್ದರೆ, ಶುಕ್ರವಾರ ರೂ.1101 ಏರಿಕೆಯಾಗಿ ರೂ.1,02,400 ರಷ್ಟಿತ್ತು. ಇಂದು ಈ ಬೆಲೆ 102622ಗೆ ಮುಟ್ಟಿದ್ದು, 200 ರೂ ಹೆಚ್ಚಳವಾಗಿದೆ.

ಶುಕ್ರವಾರ ಸ್ಪಾಟ್ ಚಿನ್ನದ ದರವು ಪ್ರತಿ ಔನ್ಸ್‌ಗೆ ದಾಖಲೆಯ $3,004.86 ತಲುಪಿದೆ. ಈ ಮೂಲಕ 2025ರ ಆರಂಭದಿಂದ ಇಲ್ಲೀತನಕ ಹದಿಮೂರನೇ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಮುನ್ನುಗ್ಗುತ್ತಿದೆ. 2024 ರಲ್ಲಿ ಶೇ 27 ರಷ್ಟು ಏರಿಕೆ ಕಂಡಿದ್ದ ಬಂಗಾರ, 2025ನೇ ಇಸ್ವಿಯ ಆರಂಭಿಕ 2.5 ತಿಂಗಳಲ್ಲಿ ಶೇ 14 ಏರಿಕೆ ದಾಖಲಿಸಿದೆ.

ತಲೆಬಿಸಿ ತಂದಿಟ್ಟ ಟ್ರಂಪ್​ ವ್ಯಾಪಾರ ನೀತಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಶುರುವಾದಾಗಿನಿಂದ ಅವರು ತೆಗೆದುಕೊಳ್ಳುತ್ತಿರುವ ಶುಂಕ ಹೇರಿಕೆ ನಿರ್ಧಾರಗಳಿಂದಾಗಿ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ್ಲ ಕಲ್ಲೋಲ ಸೃಷ್ಟಿಯಾಗುತ್ತಿದ್ದು, ವ್ಯಾಪಾರ ಯುದ್ಧ ಆರಂಭವಾಗಿದೆ. ಚೀನಾ ಮತ್ತು ಕೆನಡಾದ ಮೇಲೆ ಸುಂಕ ಏರಿಕೆ, ಅವುಗಳಿಂದಲೂ ಪ್ರತೀಕಾರದ ಕ್ರಮ ತೆಗೆದುಕೊಳ್ಳುವಂತೆ ಮಾಡುತ್ತಿವೆ. ಹೀಗಾಗಿ ವಿಶ್ವ ಆರ್ಥಿಕ ನೀತಿಗಳಲ್ಲಿ ತ್ವರಿತ ಬದಲಾವಣೆಗಳಾಗುತ್ತಿವೆ. ಇದು ವಿಶ್ವ ಆರ್ಥಿಕ ನೀತಿ ಮೇಲೆ ಹೊಡೆತ ನೀಡಿದ್ದು ಹೂಡಿಕೆದಾರರು ಸುರಕ್ಷಿತ ಹೂಡಿಕೆ ಮಾರ್ಗವಾದ ಚಿನ್ನದತ್ತ ತಮ್ಮ ಗಮನ ಕೇಂದ್ರೀಕರಿಸಿದ್ದಾರೆ.

COMEX-ಅನುಮೋದಿತ ಗೋದಾಮುಗಳಲ್ಲಿನ ಚಿನ್ನದ ದಾಸ್ತಾನುಗಳು ದಾಖಲೆಯ 40.56 ಮಿಲಿಯನ್ ಔನ್ಸ್‌ಗಳನ್ನು ಮುಟ್ಟಿವೆ. ಏಕೆಂದರೆ ವ್ಯಾಪಾರಿಗಳು ಸುಂಕದ ಅನಿಶ್ಚಿತತೆಯ ನಡುವೆ ತಮ್ಮ ಸುರಕ್ಷಿತತೆಯ ಕಡೆ ಗಮನ ಹರಿಸಿದ್ದರಿಂದ ಬಂಗಾರದತ್ತ ಲಕ್ಷ್ಯ ನೆಟ್ಟಿದ್ದಾರೆ.

ಹೊಸ ದಾಖಲೆಯ ಮೊತ್ತಕ್ಕೆ ಬಂಗಾರ ಏರುವ ಸಾಧ್ಯತೆ: ಸೆಂಟ್ರಲ್ ಬ್ಯಾಂಕ್ ಗಳಿಂದ ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಇದೆ. ಆರ್ಥಿಕ ಅನಿಶ್ಚಿತತೆಯ ನಡುವೆ ರಾಷ್ಟ್ರಗಳು ಲೋಹವನ್ನು ಸಂಗ್ರಹಿಸುವುದನ್ನು ಮುಂದುವರಿಸುವುದರಿಂದ 2025 ರಲ್ಲಿ ಚಿನ್ನದ ಬೆಲೆಗಳು ಹೊಸ ಗರಿಷ್ಠಕ್ಕೆ ತೆಗೆದುಕೊಂಡು ಹೋಗಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇನ್ನು ಬೆಂಗಳೂರಲ್ಲಿ ಇಂದು ಚಿನ್ನದ ಬೆಲೆ 99.9 ಪ್ಯೂರಿಟಿಯ 10 ಗ್ರಾಂ ಬಂಗಾರಕ್ಕೆ 90724 ರೂಪಾಯಿ ಆಗಿದೆ. ಈ ಮೂಲಕ ಬಂಗಾರ ಇದೇ ಮೊದಲ ಬಾರಿಗೆ 90 ಸಾವಿರದ ಗಡಿ ದಾಟಿ ಮುನ್ನುಗ್ಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ 1ಲಕ್ಷ ರೂ ತಲುಪಿದರೂ ಅಚ್ಚರಿ ಪಡಬೇಕಿಲ್ಲ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರ ಅಬ್ದುಲ್ ಅಸೀರ್ ಯಾನೆ ಸದ್ದು ಸೆರೆ!

Next Post

9 ತಿಂಗಳ ಬಳಿಕ ಸುರಕ್ಷಿತವಾಗಿ ಬಾಹ್ಯಾಕಾಶದಿಂದ ಧರೆಗಿಳಿದ ಗಗನತಾರೆ ಸುನೀತಾ ವಿಲಿಯಮ್ಸ್

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
9 ತಿಂಗಳ ಬಳಿಕ ಸುರಕ್ಷಿತವಾಗಿ ಬಾಹ್ಯಾಕಾಶದಿಂದ ಧರೆಗಿಳಿದ ಗಗನತಾರೆ ಸುನೀತಾ ವಿಲಿಯಮ್ಸ್

9 ತಿಂಗಳ ಬಳಿಕ ಸುರಕ್ಷಿತವಾಗಿ ಬಾಹ್ಯಾಕಾಶದಿಂದ ಧರೆಗಿಳಿದ ಗಗನತಾರೆ ಸುನೀತಾ ವಿಲಿಯಮ್ಸ್

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d