• About us
  • Contact us
  • Disclaimer
Saturday, January 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಮೀನು‌ ಸಂಸ್ಕರಣಾ ಘಟಕದಲ್ಲಿ ಐವರ ಬಲಿ: ನಾಲ್ವರು ಪೊಲೀಸ್​​ ವಶಕ್ಕೆ

Coastal Times by Coastal Times
April 18, 2022
in ಕರಾವಳಿ
ಮಂಗಳೂರು ಮೀನು‌ ಸಂಸ್ಕರಣಾ ಘಟಕದಲ್ಲಿ ಐವರ ಬಲಿ: ನಾಲ್ವರು ಪೊಲೀಸ್​​ ವಶಕ್ಕೆ
166
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಬಜ್ಪೆಯಲ್ಲಿರುವ ಎಸ್ಇಝೆಡ್​ನಲ್ಲಿರುವ ಶ್ರೀ ಉಲ್ಕಾ ಎಲ್​ಎಲ್​ಪಿ ಮೀನು ಸಂಸ್ಕರಣಾ ಘಟಕದಲ್ಲಿ ಓರ್ವನ ಪ್ರಾಣ ಉಳಿಸಲು ಹೋಗಿ ಒಟ್ಟಾರೆ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ‌ ನಡೆದಿದೆ. ಪ್ರಕರಣದಲ್ಲಿ ಇನ್ನೂ ಮೂವರು ಕಾರ್ಮಿಕರು ಉಸಿರುಗಟ್ಟಿ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮಹಮ್ಮದ್ ಸಮರುಲ್ಲಾ ಇಸ್ಲಾಂ, ಉಮರುಲ್ಲಾ ಫಾರೂಕ್, ನಿಜಾಮುದ್ದೀನ್, ನಿಜಾಮುದ್ದೀನ್ ಇಸ್ಲಾಂ, ಶರಕತ್ ಅಲಿ ಮೃತ ಕಾರ್ಮಿಕರು ಎಂದು ತಿಳಿದುಬಂದಿದೆ.

ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಮಾತನಾಡಿ, ಭಾನುವಾರ ಸಂಜೆ 6-7 ಗಂಟೆ ಸುಮಾರಿಗೆ ಒಬ್ಬ ವ್ಯಕ್ತಿ ಮೀನು ತ್ಯಾಜ್ಯಾ ಸಂಗ್ರಹಣಾ ಟ್ಯಾಂಕ್​ನಲ್ಲಿ ಬಿದ್ದು, ಪ್ರಜ್ಞಾಹೀನನಾಗಿದ್ದಾನೆ. ಆತನನ್ನು ಕಾಪಾಡಲು ಹೋದ ಹೆಚ್ಚುವರಿಯಾಗಿ ಏಳು ಜನವೂ ಸಂಗ್ರಹಣಾ ಟ್ಯಾಂಕ್​ನೊಳಗೆ ಬಿದ್ದಿದ್ದಾರೆ. ಪ್ರಜ್ಞಾಹೀನರಾದ ಅವರನ್ನು ತಕ್ಷಣವೇ ನಗರದ ಎ.ಜೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅದರಲ್ಲಿ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾದ ಬಳಿಕ ಸಾವನ್ನಪ್ಪಿದ್ದಾರೆ. ಮಹಮ್ಮದ್ ಸಮರುಲ್ಲಾ ಇಸ್ಲಾಂ, ಉಮರುಲ್ಲಾ ಫಾರೂಕ್, ನಿಜಾಮುದ್ದೀನ್ ನಿನ್ನೆ ಸಾವನ್ನಪ್ಪಿದವರು. ಉಳಿದ ಐದು ಜನರಿಗೆ ಐಸೋಲೇಷನ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರಲ್ಲಿ ಇಬ್ಬರು ನಿಜಾಮುದ್ದೀನ್ ಇಸ್ಲಾಂ, ಶರಕತ್ ಅಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅದರ ಜೊತೆ ಹಸನ್​ ಅಲಿ, ಮೊಹಮ್ಮದ್​ ಅಲೀಬುಲ್ಲಾ ಮತ್ತು ಅಫೀಸುಲ್ಲಾ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ನಿಜಾಮುದ್ದೀನ್​ ಮೊದಲು ಮೀನು ತ್ಯಾಜ್ಯ ಸಂಗ್ರಹಣಾ ಟ್ಯಾಂಕ್​ನೊಳಗೆ ಬಿದ್ದವನು. ಆತನನ್ನು ಕಾಪಾಡಲು ಉಳಿದವರು ಟ್ಯಾಂಕ್​ನೊಳಗೆ ಇಳಿದಿದ್ದರು. ಇವರೆಲ್ಲ ಪಶ್ಚಿಮ ಬಂಗಾಳ ಮೂಲದವರು. ಸುಮಾರು 20 ರಿಂದ 23ರ ಚಿಕ್ಕ ವಯಸ್ಸಿನ ಹುಡುಗರು. ಮಂಗಳೂರಿನ ಎಸ್ಇಝಡ್ ವ್ಯಾಪ್ತಿಯಲ್ಲಿರುವ ಶ್ರೀ ಉಲ್ಕಾ ಎಲ್ಎಲ್​ಪಿ ಮೀನು‌ಸಂಸ್ಕರಣಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮುಂಬೈ ಮೂಲದ ವ್ಯಕ್ತಿಗೆ ಸೇರಿರುವ ಈ‌ ಸಂಸ್ಥೆಯಲ್ಲಿ ಒಟ್ಟು 68 ಮಂದಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಫಿಶ್ ಮಿಲ್, ಮುಂಬೈ ಮೂಲದ ರಾಜು ಎಂಬವರಿಗೆ ಸೇರಿದ್ದಾಗಿದ್ದು ಶ್ರೀ ಉಲ್ಕಾ ಎಲ್ಎಲ್ ಪಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿತ್ತು. ಕಾರ್ಮಿಕರಿಗೆ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ಬಜಪೆ ಠಾಣೆಯಲ್ಲಿ 337, 338, 304 ಅಡಿ ಪ್ರಕರಣ ದಾಖಲಾಗಿದೆ. ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ, ಫ್ಯಾಕ್ಟರಿ ಸೂಪರ್ ವೈಸರ್ ಮೊಹಮ್ಮದ್ ಅನ್ವರ್, ಕಂಪೆನಿಯ ಕಾರ್ಮಿಕರನ್ನು ನೋಡಿಕೊಳ್ಳುತ್ತಿದ್ದ ಉಳ್ಳಾಲದ ಆಜಾದ್ ನಗರ ನಿವಾಸಿ ಫಾರೂಕ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯವರನ್ನು ಬರಲು ಹೇಳಿದ್ದೇವೆ. ಗಂಭೀರ ಪ್ರಕರಣವಾಗಿರುವುದರಿಂದ ಎಲ್ಲಾ ರೀತಿಯಲ್ಲೂ ತನಿಖೆ ಮಾಡಲಾಗುವುದು ಎಂದು ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು: ಜಕ್ಕೂರು ಏರೋಡ್ರೋಮ್ ನಲ್ಲಿ ಉರುಳಿಬಿದ್ದ ತರಬೇತಿ ವಿಮಾನ, ಒಬ್ಬರಿಗೆ ಗಾಯ

Next Post

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ : ಕರಾವಳಿಯ ಜನಪ್ರಿಯ ಯೂಟ್ಯೂಬರ್ ಸಚಿನ್ ಶೆಟ್ಟಿ ಗೆಳೆಯರಿಂದ ವಿಭಿನ್ನ ಪ್ರಯತ್ನ!

Related Posts

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ
ಕರಾವಳಿ

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

January 22, 2026
53
ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ
ಕರಾವಳಿ

ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ

January 22, 2026
23
Next Post
ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ : ಕರಾವಳಿಯ ಜನಪ್ರಿಯ ಯೂಟ್ಯೂಬರ್ ಸಚಿನ್ ಶೆಟ್ಟಿ ಗೆಳೆಯರಿಂದ ವಿಭಿನ್ನ ಪ್ರಯತ್ನ!

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ : ಕರಾವಳಿಯ ಜನಪ್ರಿಯ ಯೂಟ್ಯೂಬರ್ ಸಚಿನ್ ಶೆಟ್ಟಿ ಗೆಳೆಯರಿಂದ ವಿಭಿನ್ನ ಪ್ರಯತ್ನ!

Discussion about this post

Recent News

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
58
ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

January 23, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

January 23, 2026
ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

January 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d