• About us
  • Contact us
  • Disclaimer
Tuesday, August 5, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಬೃಹತ್‌ ಪ್ರತಿಭಟನಾ ಸಮಾವೇಶ; ಪೊಲೀಸರಿಂದ ಹಲವೆಡೆ ಬಿಗು ಭದ್ರತೆ

Coastal Times by Coastal Times
April 18, 2025
in ಕರಾವಳಿ
ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಬೃಹತ್‌ ಪ್ರತಿಭಟನಾ ಸಮಾವೇಶ; ಪೊಲೀಸರಿಂದ ಹಲವೆಡೆ ಬಿಗು ಭದ್ರತೆ
46
VIEWS
WhatsappTelegramShare on FacebookShare on Twitter

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್‌ ಕಣ್ಣೂ ರಿನ ಶಾ ಗಾರ್ಡನ್‌ನಲ್ಲಿ ಎ.18ರಂದು ಪ್ರತಿಭಟನಾ ಸಮಾವೇಶ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್‌ ನಾಸಿರ್‌ ಲಕ್ಕಿಸ್ಟಾರ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದ.ಕ ಮತ್ತು ಉಡುಪಿ ಜಿಲ್ಲಾಖಾಝಿಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಮಧ್ಯಾಹ್ನ 3 ಕ್ಕೆ ಕಣ್ಣೂರು ದರ್ಗಾ ಝಿಯಾರತ್‌ ನಡೆಯಲಿದೆ. ಸಂಜೆ 4ಕ್ಕೆ ಸಭಾ ಕಾರ್ಯ ಕ್ರಮ ನಡೆಯಲಿದೆ.

ಬೈಕ್‌ ರ್ಯಾಲಿ, ಯಾವುದೇ ಸಂಘಟನೆಯ ಅಥವಾ ಹಸಿರು ಬಾವುಟ, ಘೋಷಣೆಗಳಿಗೆ ನಿಷೇಧವಿದೆ. ಪ್ರಚೋದನಕಾರಿ ಭಾಷಣಗಳಿಗೆ ಅವಕಾಶ ಇಲ್ಲ ಎಂದರು. ಡಾ|ಎಂ.ಎಸ್‌.ಎಂ. ಝೈನಿ ಕಾಮಿಲ್‌ ಮಾತನಾಡಿ, ಭಾರತದ ರಾಷ್ಟ್ರಧ್ವಜ ಕಟ್ಟಿಕೊಂಡು ಬರುವ ವಾಹನಗಳಿಗೆ ಪ್ರವೇಶವಿದೆ. ಸಮಾವೇಶಕ್ಕೆ ಬರಲು ಪಂಪ್‌ವೆಲ್‌ ಮತ್ತು ಬಿ.ಸಿ.ರೋಡ್‌ನಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.

ಯು.ಕೆ. ಅಬ್ದುಲ್‌ ಅಝೀಝ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿ, ವಕ್ಫ್ ಬಗ್ಗೆ ಜನರಲ್ಲಿ ತಪ್ಪುಭಾವನೆ ಮೂಡಿಸುವ ಪ್ರಯತ್ನ ನಡೆದಿದ್ದು, ಅದನ್ನು ಹೋಗಲಾಡಿಸಲು ಪ್ರಯತ್ನಿಸಲಾಗುವು ದು ಎಂದರು. ಅಬ್ದುಲ್‌ ಖಾದರ್‌ ದಾರಿಮಿ ಕುಕ್ಕಿಲ, ಖಾಸಿಂ ದಾರಿಮಿ ಕಿನ್ಯ ಮತ್ತಿತರರಿದ್ದರು.

ಪೊಲೀಸರಿಂದ ಹಲವೆಡೆ ಬಿಗು ಭದ್ರತೆ : ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಪೊಲೀಸ್‌ ಬಿಗು ಭದ್ರತೆ ಕೈಗೊಳ್ಳಲಾಗಿದೆ. ಗುರುವಾರ ಸಂಜೆಯಿಂದಲೇ ಸಮಾವೇಶ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸುರತ್ಕಲ್‌ನಲ್ಲೂ ಬಿಗು ಭದ್ರತೆ ಕೈಗೊಳ್ಳಲಾಗಿದೆ.

ರಾ.ಹೆ.73ರಲ್ಲಿ ವಾಹನ ದಟ್ಟನೆ ಉಂಟಾಗುವ ಸಾಧ್ಯತೆಯಿದ್ದು, ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ಸ್ಥಳೀಯ, ತುರ್ತು ಹಾಗೂ ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನಗಳನ್ನು ಮಾರ್ಗಗಳನ್ನು ಬದಲಾಯಿಸಿ ಸಂಚರಿಸಲು ಈಗಾಗಲೇ ಪೊಲೀಸ್‌ ಆಯುಕ್ತರು ಸೂಚಿಸಿದ್ದಾರೆ.

ಯಾವುದೇ ಕಾರಣಕ್ಕೂ ಹೆದ್ದಾರಿ ಬಂದ್ ಮಾಡುವಂತಿಲ್ಲ !  : ಈ ಬಗ್ಗೆ ಎಪ್ರಿಲ್ 17ರಂದು ತುರ್ತಾಗಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ರಿಟ್ ಅರ್ಜಿ ಸಲ್ಲಿಸಿದ್ದಲ್ಲದೆ, ಪೊಲೀಸ್ ಕಮಿಷನರ್ ಹೊರಡಿಸಿದ್ದ ಸಂಚಾರ ನಿರ್ಬಂಧ ಆದೇಶವನ್ನು ಪ್ರಶ್ನಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನ್ಯಾಯಾಧೀಶ ನಾಗಪ್ರಸನ್ನ, ಈಗಾಗಲೇ ವಕ್ಫ್ ತಿದ್ದುಪಡಿ ಕಾಯ್ದೆ ವಿಚಾರ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆಯಲ್ಲಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಸಲ್ಲಿಸುವುದಕ್ಕೆ ಸರಕಾರಗಳು ಅವಕಾಶ ನೀಡಬಾರದು. ಹಾಗಿದ್ದರೂ ಪ್ರತಿಭಟನೆ ಮಾಡುವುದಿದ್ದರೆ ಸರಕಾರ ಸೂಚಿಸಿದ ಸ್ಥಳದಲ್ಲಿ ಮಾತ್ರ ಇರಬೇಕು. ಅದರ ನೆಪದಲ್ಲಿ ಹೆದ್ದಾರಿ ಬಂದ್ ಮಾಡುವುದಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು. ಅಲ್ಲದೆ, ಈ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸರಕಾರಗಳು ಪರಿಗಣಿಸಬೇಕು. ಅಲ್ಲದೆ, ಸರಕಾರ ಅವಕಾಶ ನೀಡಿದ್ದರೆ ಮಾತ್ರ ಪ್ರತಿಭಟನೆ ಸಲ್ಲಿಸಬಹುದು. ಅವಕಾಶ ನೀಡದೇ ಇದ್ದರೆ ಪ್ರತಿಭಟನೆ ನಡೆಸುವಂತಿಲ್ಲ. ಹಾಗಂತ, ರಸ್ತೆಗಳನ್ನು ಬ್ಲಾಕ್ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ನ್ಯಾಯಾಧೀಶರು ಈ ಕುರಿತು ನೀಡಿರುವ ಮಧ್ಯಂತರ ಆದೇಶದಲ್ಲಿ ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಿಕ್ಷಾಚಾಲಕ ಮತ್ತು ಸ್ನೇಹಿತರು ಸೇರಿ ಪಶ್ಚಿಮ ಬಂಗಾಳ ಮೂಲದ ಯುವತಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್: ಮೂವರು ಆರೋಪಿಗಳು ವಶಕ್ಕೆ

Next Post

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಡ್ಯಾರ್ ಕಣ್ಣೂರ್‌ ನಲ್ಲಿ ಬೃಹತ್‌ ಪ್ರತಿಭಟನಾ ಸಭೆ

Related Posts

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್
ಕರಾವಳಿ

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

August 4, 2025
15
ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ
ಕರಾವಳಿ

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

August 4, 2025
25
Next Post
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಡ್ಯಾರ್ ಕಣ್ಣೂರ್‌ ನಲ್ಲಿ ಬೃಹತ್‌ ಪ್ರತಿಭಟನಾ ಸಭೆ

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಡ್ಯಾರ್ ಕಣ್ಣೂರ್‌ ನಲ್ಲಿ ಬೃಹತ್‌ ಪ್ರತಿಭಟನಾ ಸಭೆ

Discussion about this post

Recent News

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

August 4, 2025
15
ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

August 4, 2025
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

August 4, 2025
ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

August 4, 2025
ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d