
ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ಫೋಟೊ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಗಳನ್ನು ಠಾಣೆಯಲ್ಲಿ ಕೂಡಿ ಹಾಕಿ ತೀವ್ರವಾಗಿ ಥಳಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕರ ಹಾಗೂ ಕೆಲವು ಪ್ರಭಾವಿಗಳ ಒತ್ತಡಕ್ಕೊಳಗಾಗಿ ಪೊಲೀಸರು ಆರೋಪಿಗಳಿಗೆ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹಾಗೂ ನಗರಸಭೆ ನೀಡಿದ ದೂರಿನ್ವಯ ನರಿಮೊಗರು ಗ್ರಾಮದ ನಿವಾಸಿಗಳಾಗಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು. ಪೊಲೀಸರ ಕಿರುಕುಳ ತಿಳಿದು ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸಂಘ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಕರೆದೊಯ್ದಿದ್ದಾರೆ. ಎನ್ನಲಾಗಿದೆ. ಥಳಿತದಿಂದ ಗಾಯಗೊಂಡ ಯುವಕರ ಚಿತ್ರಗಳು ಹಾಗೂ ತಡರಾತ್ರಿ ಪುತ್ತೂರು ಡಿವೈಎಸ್ ಪಿ ಕಚೇರಿಯಿಂದ ನಡೆದಾಡಲೂ ಕಷ್ಟ ಪಡುವ ರೀತಿಯಲ್ಲಿ ಹೆಜ್ಜೆ ಹಾಕುತ್ತಿರುವ ಯುವಕರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಂಧಿತರು ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದು , ಈ ಪೈಕಿ ಕೆಲವರು ಬಂಧಿತರು ಹಿಂದೂ ಸಂಘಟನೆಯ ಕಾರ್ಯಕರ್ತ ಎನ್ನಲಾಗಿದೆ. ಫೋಟೊದಲ್ಲಿ ಕಾಲು, ಬೆನ್ನು ಸೊಂಟದ ಹಿಂಭಾಗದಲ್ಲಿ ಥಳಿಸಿರುವುದು ಕಾಣುತ್ತಿದೆ.
Discover more from Coastal Times Kannada
Subscribe to get the latest posts sent to your email.
Discussion about this post