ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಮೇ 17 ರಂದು ನಡೆದಿದೆ.
ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ 6 ತಿಂಗಳ ಹಿಂದೆ ಏರೋಸ್ಪೇಸ್ ಎಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ.
ಜಲಂಧರ್ ಪೊಲೀಸರು ಮನೆಯವರಿಗೆ ವಿಷಯ ಮುಟ್ಟಿಸಿದ್ದು ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಮಾಹಿತಿ ಇದೆ. ಆದರೆ ಆಕೆಯ ಜೊತೆಗೆ ಯಾರಿದ್ದರು, ಯಾರ ಜೊತೆ ಉಳಿದುಕೊಂಡಿದ್ದಳು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲವೆಂದು ತಾಯಿ ಸಿಂಧೂದೇವಿ ಹೇಳಿದ್ದು ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹ ಮಾಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post