• About us
  • Contact us
  • Disclaimer
Tuesday, April 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್

Coastal Times by Coastal Times
July 18, 2025
in ಕ್ರೈಮ್ ನ್ಯೂಸ್
ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್
490
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 17 : ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ ಎಸಗುತ್ತಿದ್ದ ಕತರ್ನಾಕ್ ಆರೋಪಿಯನ್ನು ಬಲೆಗೆ ಕೆಡವಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಹತ್ತು ವರ್ಷಗಳಲ್ಲಿ ಇನ್ನೂರು ಕೋಟಿಗೂ ಅಧಿಕ ವಂಚನೆ ಎಸಗಿದ ಜಾಲ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಜಪ್ಪಿನಮೊಗರು ಬಳಿಯ ತಂದೊಳಿಗೆ ಎಂಬಲ್ಲಿ ದುಬಾಯ್ಸ್ ಹೆಸರಿನ ಐಷಾರಾಮಿ ಮನೆಯಲ್ಲಿ ಇದ್ದಾಗಲೇ ಮಿಂಚಿನ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ರೋಹನ್ ಸಲ್ಡಾನ(45) ಬಂಧಿತ ಆರೋಪಿಯಾಗಿದ್ದು ಆತನ ಜೊತೆಗಿದ್ದ ಇನ್ನೊಬ್ಬ ಸಹಚರನನ್ನೂ ಬಂಧಿಸಲಾಗಿದೆ.

ಮಂಗಳೂರಿನ ಸಿಇಎನ್ ಠಾಣೆಯಲ್ಲಿ ಇತ್ತೀಚೆಗೆ ಎರಡು ವಂಚನೆ ಪ್ರಕರಣ ದಾಖಲಾಗಿದ್ದು ಇದಕ್ಕೆ ಸಂಬಂಧಿಸಿ 20ಕ್ಕೂ ಹೆಚ್ಚು ಸೈಬರ್ ಠಾಣೆ ಪೊಲೀಸರು ಗುರುವಾರ ರಾತ್ರಿ ಮಹತ್ತರ ಕಾರ್ಯಾಚರಣೆ ನಡೆಸಿದ್ದರು. ಆರೋಪಿತನ ಮನೆಯಿಂದ ದಾಖಲಾತಿ, ಖಾಲಿ ಚೆಕ್​​ಗಳು ಹಾಗೂ ಸುಮಾರು 667 ಗ್ರಾಂ ಚಿನ್ನಾಭರಣಗಳು ಮತ್ತು ಅಂದಾಜು 2.75 ಕೋಟಿ ಮೌಲ್ಯದ ವಜ್ರದ ಉಂಗುರ ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಆರೋಪಿ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 22/2025 ಕಲಂ: 316(2), 316(5) 318(2), 318(3) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ ಹಾಗೂ ಅಪರಾಧ ಕ್ರಮಾಂಕ:30/2025 ಕಲಂ:316(2), 316(5), 318(2), 318 (3), 61(2) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆಯಂತೆ ವಂಚನೆ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಕಮಿಷನರ್ ತಿಳಿಸಿದ್ದಾರೆ.

ಮನೆಯ ಹೊರಗಡೆ ರಿಮೋಟ್ ಆಧರಿತ ದೊಡ್ಡ ಗೇಟ್ ಅಳವಡಿಸಿದ್ದು ಯಾರಿಗೂ ಒಳಗಡೆ ಬರೋಕೆ ಆಗದಂತೆ ಮಾಡಿಕೊಂಡಿದ್ದ. ಪೊಲೀಸರು ಬಂದಾಗಲೂ ಗೇಟ್ ತೆರೆಯದೆ ಒಳಗಡೆ ಇದ್ದ. ಹೀಗಾಗಿ ಹತ್ತಡಿ ಎತ್ತರದ ಗೇಟ್ ಒಳಗೆ ಹಾರಿ ಪೊಲೀಸರು ಎಂಟ್ರಿ ಕೊಟ್ಡಿದ್ದು ಈ ವೇಳೆ ಮಲೇಶಿಯಾ ಯುವತಿ ಜೊತೆಗೆ ಕುಳಿತು ರೊನಾಲ್ಡ್ ಬಿಯರ್ ಹೀರುತ್ತಿದ್ದ. ಪೊಲೀಸರು ಗ್ಲಾಸ್ ಚೇಂಬರ್ ಒಡೆದುಕೊಂಡೇ ಒಳಗೆ ಎಂಟ್ರಿಯಾಗಿದ್ದು ಈ ವೇಳೆ ಒಬ್ಬಾತ ಹೊರಗಡೆ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಎಂಟು ಗಂಟೆ ರಾತ್ರಿಗೆ ಪೊಲೀಸರು ತಮ್ಮ ಬೂಟು ಕಳಚಿ ಎದುರಿನ ಗದ್ದೆಯಲ್ಲಿ ಆತನನ್ನು ಬೆನ್ನಟ್ಟಿ ಹಿಡಿದಿದ್ದಾರೆ.

ಪೊಲೀಸರು ಪ್ರಾಥಮಿಕ ತಪಾಸಣೆ ನಡೆಸಿದ ವೇಳೆ ನಲ್ವತ್ತು ಕೋಟಿಯಷ್ಟು ಮೊತ್ತ ಆತನ ವಿವಿಧ ಬ್ಯಾಂಕ್ ಖಾತೆಗಳಲ್ಲಿರೋದು ಪತ್ತೆಯಾಗಿದೆ. ಅಲ್ಲದೆ, ಜಪ್ಪಿನಮೊಗರು ನೇತ್ರಾವತಿ ನದಿಯಲ್ಲಿ ಬೋಟ್ ಹಾಕಲು 5-10 ಕೋಟಿಯಷ್ಟು ಇನ್ವೆಸ್ಟ್ ಮಾಡಿದ್ದಾನಂತೆ. ದುಬಾಯ್ಸ್ ಹೆಸರಿನಲ್ಲಿ ಬೇರೆ ಬೇರೆ ಬಿಸಿನೆಸ್ ಹೊಂದಿದ್ದಾನೆ. ಈತನ ಪತ್ನಿ ಚೆನ್ನೈಯಲ್ಲಿದ್ದು ಒಂದು ಮಗು ಇದೆ. ಇದೇ ರೀತಿಯ ಮೋಸದ ಜಾಲ ಹೆಣೆದು ಹಲವಾರು ಮಂದಿಗೆ ವಂಚನೆ ಎಸಗಿರುವ ಮಾಹಿತಿ ಪೊಲೀಸರಿಗೆ ಲಭಿಸಿದ್ದು ಉತ್ತರ ಭಾರತದ ಸೈಬರ್ ಕಳ್ಳರ ರೀತಿಯಲ್ಲೇ ರೊನಾಲ್ಡ್ ಹೈ ಫೈ ಉದ್ಯಮಗಳನ್ನು ಯಾಮಾರಿಸಿ ಹಣ ಕೀಳುತ್ತಿದ್ದ. ಹಿಂದೊಮ್ಮೆ ಈತನ ಪತ್ತೆಗಾಗಿ ಸಿಐಡಿ ಪೊಲೀಸರು ಬಂದಿದ್ದರು ಎನ್ನುವ ಮಾಹಿತಿ ಇದ್ದು ಅವರು ಕೂಡ ರೊನಾಲ್ಡ್ ಎಸೆದ ಜಾಲಕ್ಕೆ ಸಿಲುಕಿ ಹಿಂದಕ್ಕೆ ತೆರಳಿದ್ದರು.‌

ದೇಶದ ಪ್ರಮುಖ ನಗರಗಳಲ್ಲಿ ಏಜಂಟರನ್ನು ಇಟ್ಟುಕೊಂಡಿದ್ದು ದೊಡ್ಡ ಬಿಸಿನೆಸ್ ಮಾಡುವವರನ್ನು ದೊಡ್ಡ ಮೊತ್ತದ ಸಾಲ ಕೊಡಿಸುವುದಾಗಿ ಬಲೆಗೆ ಹಾಕುತ್ತಿದ್ದ. ನೂರು ಕೋಟಿ ಸಾಲವನ್ನು ಕೇವಲ 3ರಿಂದ ನಾಲ್ಕು ಪರ್ಸೆಂಟ್ ಬಡ್ಡಿಗೆ ಕೊಡುವುದಾಗಿ ಹೇಳಿ ಡೀಲ್ ಕುದುರಿಸುತ್ತಾನೆ. ಇದಕ್ಕಾಗಿ ಮಂಗಳೂರಿನ ಜಪ್ಪಿನಮೊಗರಿನಲ್ಲಿ ಐಷಾರಾಮಿ ಮನೆ ಮಾಡಿಕೊಂಡಿದ್ದು ಅಲ್ಲಿಂದಲೇ ವ್ಯವಹಾರ ಮಾಡುತ್ತಿದ್ದ.‌ ಡೀಲ್ ಒಪ್ಪಿಕೊಂಡು ಮನೆಗೆ ಬಂದವರಿಗೆ ಭಾರೀ ಆತಿಥ್ಯವನ್ನೂ ಕೊಡಿಸುತ್ತಿದ್ದ.‌

ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ ಹೇಳಿ ನಂಬಿಸುತ್ತಿದ್ದ. ಈ ರೀತಿಯಾಗಿ ಆರೋಪಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉದ್ಯಮಿ ಹಾಗೂ ಶ್ರೀಮಂತ ವ್ಯಕ್ತಿಗಳನ್ನು ತನ್ನ ಮೋಸದ ಬಲೆಗೆ ಬೀಳಿಸುತ್ತಿದ್ದ ಆರೋಪಿ ತನ್ನ ಜಪ್ಪಿನಮೊಗರುವಿನ ಐಷಾರಾಮಿ ಬಂಗಲೆಗೆ ಕರೆದು ವ್ಯವಹಾರ ನಡೆಸುತ್ತಿದ್ದ. ಈತ 5ರಿಂದ 100 ಕೋಟಿ ರೂ.ವರೆಗೆ ವ್ಯವಹಾರ ಕುದುರಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭಿಕ ಮಾತುಕತೆ ಬಳಿಕ ಉದ್ಯಮಿಗಳಿಂದ 50-100 ಕೋಟಿ ರೂ. ವ್ಯವಹಾರ ಅಥವಾ ಅದಕ್ಕಿಂತ ದೊಡ್ಡ ಮೊತ್ತದ ವ್ಯವಹಾರಕ್ಕೆ 5-10 ಕೋಟಿ ರೂ. ಸ್ಟ್ಯಾಂಪ್ ಡ್ಯೂಟಿ ಹಣ ಪಡೆದು ವ್ಯವಹಾರ ನಡೆಸಿ ತಾನು ನಿರೀಕ್ಷೆ ಮಾಡಿದಷ್ಟು ಹಣ ವಸೂಲಿಯಾದ ಬಳಿಕ ನಾನಾ ನೆಪ ಹೇಳಿ ಉದ್ಯಮಿಗಳಿಂದ ತಪ್ಪಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ತನ್ನ ಮೋಸದ ಬಲೆಗೆ ಬಿದ್ದವರಿಂದ 50 ಲಕ್ಷ ರೂ.ನಿಂದ ನಾಲ್ಕು ಕೋಟಿ ರೂ.ವರೆಗೆ ಪಡೆದು ಆಮೇಲೆ ಯಾರಿಗೂ ಕಾಣದಂತೆ ನಿಗೂಢವಾಗಿ ತಪ್ಪಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಹೆಬ್ಬಾವು ಮಾರಾಟ ಜಾಲ ಪತ್ತೆ: ಅಪ್ರಾಪ್ತ ಸೇರಿ ನಾಲ್ವರ ಬಂಧನ

Next Post

ಶ್ರೀಮಂತ ಉದ್ಯಮಿಗಳಿಗೆ ಬಹುಕೋಟಿ ರೂ.ವಂಚನೆ ಪ್ರಕರಣ: ರೋಶನ್ ಸಲ್ಡಾನ ಬ್ಯಾಂಕ್ ಖಾತೆ ಸ್ತಬ್ಧಕ್ಕೆ ತನಿಖಾಧಿಕಾರಿಗಳು ಸೂಚನೆ

Related Posts

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
159
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ
ಕ್ರೈಮ್ ನ್ಯೂಸ್

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
64
Next Post
ಶ್ರೀಮಂತ ಉದ್ಯಮಿಗಳಿಗೆ ಬಹುಕೋಟಿ ರೂ.ವಂಚನೆ ಪ್ರಕರಣ: ರೋಶನ್ ಸಲ್ಡಾನ ಬ್ಯಾಂಕ್ ಖಾತೆ ಸ್ತಬ್ಧಕ್ಕೆ ತನಿಖಾಧಿಕಾರಿಗಳು ಸೂಚನೆ

ಶ್ರೀಮಂತ ಉದ್ಯಮಿಗಳಿಗೆ ಬಹುಕೋಟಿ ರೂ.ವಂಚನೆ ಪ್ರಕರಣ: ರೋಶನ್ ಸಲ್ಡಾನ ಬ್ಯಾಂಕ್ ಖಾತೆ ಸ್ತಬ್ಧಕ್ಕೆ ತನಿಖಾಧಿಕಾರಿಗಳು ಸೂಚನೆ

Discussion about this post

Recent News

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
159
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d