ಪುತ್ತೂರು: ಮನೆಗೆ ನುಗ್ಗಿ ನಗ – ನಗದು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸೆರೆ ಹಿಡಿದಿರುವ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಕಳವು ನಡೆಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29) ಬಂಧತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಅ.12ರಂದು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕಳವು ಪ್ರಕರಣ ನಡೆದಿದ್ದು, ಮನೆಗೆ ನುಗ್ಗಿ ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪುತ್ತೂರು ತಾಲೂಕಿನ ಈಶ್ವರಮಂಗಲ ಎಂಬಲ್ಲಿ ರವಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 30.120 ಗ್ರಾಂ ಚಿನ್ನಾಭರಣ ಮತ್ತು ಪ್ರಕರಣಕ್ಕೆ ಉಪಯೋಗಿಸಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕ ರವಿ ಬಿ.ಎಸ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್, ಎಎಸ್ಐ ಚಂದ್ರಶೇಖರ್, ಪ್ರವೀಣ್, ಮಧು, ಹರೀಶ್, ಸುಬ್ರಹ್ಮಣ್ಯ, ಆಕಾಶ್, ಯುವರಾಜ್, ಶರಣಪ್ಪ ಪಾಟೀಲ್, ಚಾಲಕರಾದ ಎಆರ್ ಎಸ್ ಐ ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post