• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಚಿನ್ನಾಭರಣ ದೋಚುತ್ತಿದ್ದ ಕಳ್ಳನ ಬಂಧನ

Coastal Times by Coastal Times
September 18, 2024
in ಕ್ರೈಮ್ ನ್ಯೂಸ್
ಮಂಗಳೂರು: ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಚಿನ್ನಾಭರಣ ದೋಚುತ್ತಿದ್ದ ಕಳ್ಳನ ಬಂಧನ
118
VIEWS
WhatsappTelegramShare on FacebookShare on Twitter

ಮಂಗಳೂರು: ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಅವರೊಂದಿಗೆ ಸಂಪರ್ಕ ಇಟ್ಟುಕೊಂಡು ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ, ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಬೆಳ್ಮಣ್ಣಿನ ರೋಹಿತ್‌ ಮಥಾಯಿಸ್‌ (33) ಬಂಧಿತ ಆರೋಪಿ. ಈತ 2021ರ ಡಿಸೆಂಬರ್‌ ತಿಂಗಳ ಮೊದಲ ವಾರದಿಂದ ಕುಲಶೇಖರದ ಮಹಿಳೆಯೋರ್ವರ ಜತೆ ಕೆಲವು ತಿಂಗಳು ಸಂಪರ್ಕವನ್ನಿಟ್ಟುಕೊಂಡು ಆಕೆಯೊಂದಿಗೆ ವಾಸವಿದ್ದು, ಬಳಿಕ ಆಕೆಯ ಮನೆಯಿಂದಲೇ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿ ಹೋಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಆರೋಪಿ ಮಥಾಯಿಸ್ ಮುಂಬೈಗೆ ಪರಾರಿಯಾಗಿದ್ದನು. ಬಂಧಿತ ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ರೋಹಿತ್ ಮಥಾಯಿಸ್‌ನನ್ನು ಪೊಲೀಸರು ದಸ್ತಗಿರಿ ಮಾಡಿ ಆತನಿಂದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. 2019ರಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಣ್ಮಣ್ ಎಂಬಲ್ಲಿ ಹಣ ಮತ್ತು ಚಿನ್ನಾಭರಣಗಳ ಆಸೆ ಗಾಗಿ ತನ್ನ ನೆರೆಮನೆಯ ನಿವೃತ್ತ ಪಿಡಿಒ ಭರತಲಕ್ಷ್ಮೀ ಎಂಬವರನ್ನು ಕೊಲೆಗೈದ ಪ್ರಕರಣದಲ್ಲಿ ರೋಹಿತ್ ಮಥಾಯಿಸ್ ಆರೋಪಿಯಾಗಿದ್ದನು.

ಮಹಿಳೆಯನ್ನು ಕೊಲೆಗೈದು ಕಲ್ಯಾದ ಬಾವಿಯೊಂದರಲ್ಲಿ ಪ್ಲಾಸ್ಟಿಕ್‌ನಲ್ಲಿ ಸುತ್ತಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಥಾಯಿಸ್ ಬಂಧಿತನಾಗಿ ಜೈಲುವಾಸ ಅನುಭವಿಸಿ ಹೊರಬಂದಿದ್ದನು. ನಂತರ ಪ್ರಕರಣದ ವಿಚಾರಣೆಗೆ ಸಿಗದೇ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದನು ಎನ್ನಲಾಗಿದೆ. ಆರೋಪಿ ರೋಹಿತ್ ಮಥಾಯಿಸ್ ತನ್ನ ಸಮುದಾಯಯ ಮಹಿಳೆಯರನ್ನು ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯಿಸಿ ಕೊಂಡು ಅವರ ವಿಶ್ವಾಸಗಳಿಸಿ, ನಂತರ ಅವರ ಹಣ ಹಾಗೂ ಚಿನ್ನಾಭರಣ ಕಳವುಗೈದು ಪರಾರಿಯಾಗುವ ಸ್ವಭಾವದವನಾಗಿರುತ್ತಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮತ್ತೊಂದು ಪ್ರಯತ್ನದಲ್ಲಿದ್ದಾಗ ಸಿಕ್ಕಿಬಿದ್ದ : ಆರೋಪಿ ರೋಹಿತ್‌ ಕಳವಿನ ಬಳಿಕ ಮುಂಬಯಿಗೆ ತೆರಳಿದ್ದ. ಇದೇ ರೀತಿ ಹಲವು ಮಹಿಳೆಯರನ್ನು ವಂಚಿಸಲು ಯೋಜನೆ ರೂಪಿಸಿಕೊಂಡಿದ್ದ. ಓರ್ವ ಮಹಿಳೆ ಈತನ ಬಲೆಗೆ ಬಿದ್ದಿದ್ದಳು. ಅನಂತರ ಆಕೆಗೆ ಸಂಶಯ ಬಂದಿತ್ತು. ಆಕೆಯ ಮೂಲಕವೇ ಉಪಾಯವಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ನಿರ್ದೇಶನದಂತೆ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ ಗೋಯಲ್ ಮತ್ತು ದಿನೇಶ್ ಕುಮಾರ್ ಹಾಗೂ ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ನಾಗರಾಜ್ ಟಿ.ಡಿ ನೇತೃತ್ವದಲ್ಲಿ ಪಿಎಸ್‌ಐ ವಿನಾಯಕ ಭಾವಿಕಟ್ಟಿ, ಶಿವಕುಮಾರ್, ಯೋಗೀಶ್ವರನ್ ಹಾಗೂ ಎಚ್.ಸಿ ಜಯಾನಂದ ಮತ್ತು ಸಿಬ್ಬಂದಿ ರಾಘವೇಂದ್ರ, ಗಂಗಾಧರ್, ರಾಜೆಸಾಬ ಮುಲ್ಲಾ, ಚೇತನ್, ಮುತ್ತಣ್ಣ ಮತ್ತು ಪ್ರವೀಣ್ ಆರೋಪಿಯ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

Next Post

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ

Related Posts

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
54
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
38
Next Post
ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ

Discussion about this post

Recent News

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
54
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
38
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d