• About us
  • Contact us
  • Disclaimer
Sunday, April 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಕ್ಷಿಣ ಕನ್ನಡ ಪುತ್ತೂರಲ್ಲಿ ವಿಶೇಷ ಶಾಲೆ; ಹಸಿರ ಬಳ್ಳಿಯೇ ಮೇಲ್ಛಾವಣಿ

Coastal Times by Coastal Times
November 18, 2021
in ಕರಾವಳಿ
ದಕ್ಷಿಣ ಕನ್ನಡ ಪುತ್ತೂರಲ್ಲಿ ವಿಶೇಷ ಶಾಲೆ; ಹಸಿರ ಬಳ್ಳಿಯೇ ಮೇಲ್ಛಾವಣಿ
28
VIEWS
WhatsappTelegramShare on FacebookShare on Twitter

ಮಂಗಳೂರು, ನ.18; ಕರಾವಳಿಯಲ್ಲಿ ಮಳೆ ಎಷ್ಟು ಭೀಕರವೋ ಬೇಸಿಗೆ ಸಹ ಅಷ್ಟೇ ಕಠಿಣ. ಬಿರು ಬೇಸಿಗೆ ಎಂತವರ ಮೈಯಲ್ಲೂ ನೀರಿಳಿಸುತ್ತದೆ. ಕೇವಲ ಹತ್ತು ನಿಮಿಷ ಬಿಸಿಲಿನಲ್ಲಿ ನಿಂತುಕೊಂಡರೇ ಚರ್ಮ ಸುಡುವಂತೆ ಭಾವವಾಗುತ್ತದೆ. ಮಕ್ಕಳಿಗೆ ಬೇಸಿಗೆ ಬಿಸಿ ತಪ್ಪಿಸಲು, ಹಸಿರ ಮಹತ್ವವನ್ನು ತಿಳಿಸಲು ಪುತ್ತೂರು ಸರ್ಕಾರಿ ಶಾಲೆ ವಿಶೇಷ ಪ್ರಯತ್ನ ನಡೆಸಿ ಈಗ ಯಶಸ್ವಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿಶೇಷ ತರಗತಿ ಈಗ ಎಲ್ಲರ ಮೆಚ್ಚುಗೆ ಗಳಿಸಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವ ಈ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ನಡೆಸಲು ಕೊಠಡಿಗಳ ಸಮಸ್ಯೆ ಎದುರಾದಾಗ ಸ್ಥಳೀಯ ಕೃಷಿಕರ ಸಹಾಯದಿಂದ ತೆಂಗಿನ ಹಾಗೂ ಅಡಿಕೆ ಗರಿಗಳನ್ನು ಬಳಸಿ ಕ್ಲಾಸ್ ರೂಂ ನಿರ್ಮಿಸುವ ಮೂಲಕ ಈ ಶಾಲೆ ಎಲ್ಲರ ಗಮನ ಸೆಳೆದಿತ್ತು.


ಬೇಸಿಗೆಯ ಬಿಸಿಲಿಗೆ ತಂಪನ್ನೆರೆಯುವ ಈ ಕ್ಲಾಸ್ ರೂಂನಲ್ಲಿ ಕುಳಿತುಕೊಳ್ಳಲು ವಿದ್ಯಾರ್ಥಿಗಳು ಖುಷಿಯನ್ನೂ ಪಡುತ್ತಿದ್ದರು. ಈಗ ಈ ಶಾಲೆಯಲ್ಲಿ ಇದೇ ರೀತಿಯ ಪ್ರಕೃತಿದತ್ತ ಕ್ಲಾಸ್ ರೂಂಗಳಿಗೆ ಹೆಚ್ಚಿನ ಪ್ರಾಶಸ್ತ್ಯವನ್ನೂ ನೀಡಲಾಗುತ್ತಿದೆ. ಮಕ್ಕಳಿಗೆ ಹಸಿರು, ಮರ ಗಿಡಗಳ ಮಹತ್ವವನ್ನು ಕೇವಲ ಪುಸ್ತಕದ ಪಾಠದಲ್ಲಿ ಮಾತ್ರ ಹೇಳಿಕೊಡದೇ, ನಿಜವಾಗಿಯೂ ಹಸಿರಿನ ಅರಿವು ಮೂಡಿಸುತ್ತಿರುವ ಶಿಕ್ಷಕರ ಶ್ರಮ ಅಭಿನಂದನಾರ್ಹವಾದದ್ದು.

ರಂಗ ಮಂದಿರದಲ್ಲೇ ಶಾಲೆ ತರಗತಿ:
ಮಕ್ಕಳ ಮನೋರಂಜನಾ ಕಾರ್ಯಕ್ರಮಗಳಿಗಾಗಿ ನಿರ್ಮಿಸಲಾಗಿರುವ ರಂಗಮಂಟಪದಲ್ಲಿ ಈ ಶಾಲೆಯ ಮಕ್ಕಳಿಗೆ ತರಗತಿಯನ್ನು ಕೇಳುವ ಅವಕಾಶವನ್ನು ಕಲ್ಪಿಸಲಾಗಿದೆ. ಇತರ ಶಾಲೆಗಳ ರಂಗಮಂದಿರಗಳಿಗಿಂತ ವಿಭಿನ್ನವಾಗಿರುವ ಈ ರಂಗಮಂದಿರದ ಮೇಲ್ಫಾವಣಿ ಸಂಪೂರ್ಣ ಹಸಿರ ಬಳ್ಳಿಗಳಿಂದಲೇ ತುಂಬಿದ್ದು, ಬೇಸಿಗೆಯಲ್ಲಿ ತಂಪನೆಯ ವಾತಾವರಣವನ್ನು ಸೃಷ್ಟಿಸುತ್ತದೆ. ಈ ಕಾರಣಕ್ಕಾಗಿಯೇ ಈ ಶಾಲೆಯ ಪ್ರತೀ ತರಗತಿಯ ಮಕ್ಕಳಿಗೂ ದಿನಕ್ಕೆ ಒಂದೋ, ಎರಡೋ ಗಂಟೆಗಳ ಕಾಲ ಇದೇ ಹಸಿರು ಹೊದಿಕೆಯ ರಂಗಮಂಟಪದಲ್ಲಿ ಪಾಠ ಮಾಡಲಾಗುತ್ತದೆ.

ಗಿಡ, ಬಳ್ಳಿಗಳ ನಿರ್ವಹಣೆ: ಬೇಸಿಗೆಯ ಬಿಸಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರದಿರಲಿ ಎನ್ನುವ ಕಾರಣಕ್ಕಾಗಿ ಈ ವ್ಯವಸ್ಥೆಯನ್ನು ಈ ಶಾಲೆಯಲ್ಲಿ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಮಂಟಪದ ಮೇಲ್ಫಾವಣಿಯಲ್ಲಿ ಆರೋಗ್ಯಕ್ಕೆ ಯಾವುದೇ ದುಷ್ಪರಿಣಾಮವನ್ನು ಬೀರದ ಗಿಡ, ಬಳ್ಳಿಗಳನ್ನು ಬೆಳೆಸಲಾಗಿದೆ. ಪ್ರತಿ ವರ್ಷವೂ ಇವುಗಳ ನಿರ್ವಹಣೆಯನ್ನೂ ಮಾಡಲಾಗುತ್ತಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಈ ಮಂಟಪವನ್ನು ಹಸಿರ ಹೊದಿಕೆಯ ಮೇಲ್ಫಾವಣಿಯನ್ನಾಗಿ ರೂಪಿಸಬೇಕು ಎನ್ನುವ ಉದ್ಧೇಶದಿಂದಲೂ ಈ ಶಾಲೆಯ ಸಿಬ್ಬಂದಿಗಳು ನಾಲ್ಕು ವಿದಧ ಬಳ್ಳಿಗಳನ್ನು ನೆಟ್ಟಿದ್ದಾರೆ.

ಫ್ಯಾಷನ್ ಫ್ಲೋರಾ, ಡೆನ್ ಬರ್ಜಿಯಾ ಗ್ರ್ಯಾಂಡಿ ಫ್ಲೋರಾ ಮತ್ತು ಫ್ಯಾಷನ್ ಫ್ರುಟ್ ಬಳ್ಳಿಗಳನ್ನು ಈ ಮೇಲ್ಫಾವಣಿಗೆ ಬಿಡಲಾಗಿದೆ. ನಾಲ್ಕು ವರ್ಷದ ಅವಧಿಯಲ್ಲಿ ಅತ್ಯಂತ ಸಮೃದ್ಧವಾಗಿ ಬೆಳೆದು ಮೇಲ್ಫಾವಣಿ ತುಂಬಾ ಅವರಿಸಿಕೊಂಡಿರುವ ಈ ಬಳ್ಳಿಗಳು ಹಲವು ರೀತಿಯ ಪಕ್ಷಿಗಳಿಗೂ ವಾಸಸ್ಥಾನವಾಗಿದೆ. ಪ್ರತಿ ದಿನವೂ ಹನಿ ನೀರಾವರಿ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, ಶಾಲೆಯ ಮಕ್ಕಳು ಈ ಗಿಡಗಳನ್ನು ಪೋಷಿಸಿ, ಸಂರಕ್ಷಿಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ರನ್‌ವೇ ಹತ್ತಿರವೇ ಚಿರತೆಗಳ ಓಡಾಟ; ಅಪಾಯದ ಆತಂಕದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರ!

Next Post

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪಿ ವಕೀಲ ರಾಜೇಶ್ ಮನೆಯಲ್ಲಿ ತೀವ್ರ ಶೋಧ

Related Posts

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ
ಕರಾವಳಿ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
43
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
60
Next Post
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪಿ ವಕೀಲ ರಾಜೇಶ್ ಮನೆಯಲ್ಲಿ ತೀವ್ರ ಶೋಧ

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪಿ ವಕೀಲ ರಾಜೇಶ್ ಮನೆಯಲ್ಲಿ ತೀವ್ರ ಶೋಧ

Discussion about this post

Recent News

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
14
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d