• About us
  • Contact us
  • Disclaimer
Sunday, August 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ರನ್‌ವೇ ಹತ್ತಿರವೇ ಚಿರತೆಗಳ ಓಡಾಟ; ಅಪಾಯದ ಆತಂಕದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರ!

Coastal Times by Coastal Times
November 18, 2021
in ಕರಾವಳಿ, ರಾಜ್ಯ
ಮಂಗಳೂರು: ರನ್‌ವೇ ಹತ್ತಿರವೇ ಚಿರತೆಗಳ ಓಡಾಟ; ಅಪಾಯದ ಆತಂಕದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರ!
11
VIEWS
WhatsappTelegramShare on FacebookShare on Twitter

ಮಂಗಳೂರು, ನ. 18: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಿರತೆಗಳು ಕಾಟ ಆರಂಭವಾಗಿದೆ. ವಿಮಾನ ನಿಲ್ದಾಣದ ರನ್‌ವೇ ಬಳಿ ಕೆಲ ದಿನಗಳ ಹಿಂದೆ ರಾತ್ರಿ ಹೊತ್ತು ಹಲವು ಬಾರಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಅಪಾಯದ ಕರೆಘಂಟೆ ಬಾರಿಸಿದೆ.
ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಿರತೆ ಭಯ ಶುರುವಾಗಿದ್ದು, ವಿಮಾನ ನಿಲ್ದಾಣದ ಪ್ರದೇಶದಲ್ಲಿ ರಾತ್ರಿ ವೇಳೆ ರನ್‌ವೇ ಬಳಿ ಚಿರತೆ ಓಡಾಟ ಕಂಡುಬಂದಿವೆ. ಇದು ವಿಮಾನ ನಿಲ್ದಾಣದ ಭದ್ರತಾ ವಿಭಾಗದ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಮಾತ್ರವಲ್ಲದೆ ನವಿಲು, ಕಾಡು ಹಂದಿ ಸೇರಿದಂತೆ ನರಿಗಳು ರನ್ ವೇ ಬಳಿ ಕಂಡು ಬರುತ್ತಿವೆ.
ಅರಣ್ಯ ಇಲಾಖೆಯ ಪ್ರಾಣಿ ಸರ್ವೇ ವರದಿ ಪ್ರಕಾರ ಕಳೆದ ಐದು ವರ್ಷಗಳ ಹಿಂದೆ ಮಂಗಳೂರು ರೇಂಜ್ ವ್ಯಾಪ್ತಿಯಲ್ಲಿ 2-3 ಚಿರತೆಗಳಿದ್ದವು. ಆದರೆ ಪ್ರಸ್ತುತ ಇವುಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.

ಬಜ್ಪೆಯ ಕೆಂಜಾರಿನಲ್ಲಿ ಗುಡ್ಡದ ಮೇಲಿರುವ ವಿಮಾನ ನಿಲ್ದಾಣದ ಸುತ್ತಮುತ್ತ ಕಾಡು ಪರಿಸರವಿದ್ದು, ಚಿರತೆಗಳ ಓಡಾಟ ಸಾಮಾನ್ಯ ಎಂದು ಹೇಳಲಾಗಿದೆ. ಆದರೆ ಕಳೆದ ಕೆಲವು ದಿನಗಳಿಂದ ರಾತ್ರಿ ಹೊತ್ತು ಚಿರತೆಗಳು ವಿಮಾನ ನಿಲ್ದಾಣ ಪ್ರವೇಶಿಸುತ್ತಿವೆ. ಕಳೆದ ಕೆಲವು ದಿನಗಳಿಂದ ಚಿರತೆ ರನ್‌ವೇ ಸುತ್ತ ಕಾಣಿಸಿಕೊಳ್ಳುತ್ತಿವೆ.

ಆಹಾರ ಅರಸಿ ಆಕಸ್ಮಿಕವಾಗಿ ಬಂದಿರಬಹುದು ಅಂದುಕೊಂಡಿದ್ದ ಅಧಿಕಾರಿಗಳಿಗೆ ಇತ್ತೀಚೆಗೆ ಸರಾಗವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ವಿಮಾನ ಲ್ಯಾಂಡಿಂಗ್ ಅಥವಾ ಟೇಕ್‌ಆಫ್ ಸಂದರ್ಭ ರನ್‌ವೇ ಆಸುಪಾಸು ಪ್ರಾಣಿಗಳ ಓಡಾಟ ತೀರಾ ಅಪಾಯಕಾರಿಯಾದ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಚಿರತೆಗಳಿಂದ ಭಯಗೊಂಡಿರುವ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಅಧಿಕಾರಿಗಳ ಮನವಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯೂ ಚುರುಕಾಗಿದ್ದು, ಚಿರತೆ ಪತ್ತೆ ಕಾರ್ಯಾಚರಣೆ ಆರಂಭಿಸಿದೆ.

ಚಿರತೆಗಳ ಓಡಾಟದಿಂದ ಮಂಗಳೂರು ವಿಮಾನ ನಿಲ್ದಾಣ ನಿಲ್ದಾಣದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಯಪಡುವ ಅವಶ್ಯಕತೆಯಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣ ಸುತ್ತಮುತ್ತಲಲ್ಲಿ ಚಿರತೆಯ ಚಲನವಲನ ಕಂಡುಬಂದರೆ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದ್ದು, ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.

ಚಿರತೆ ಸೆರೆ ಹಿಡಿಯಲು ವಿಮಾನ ನಿಲ್ದಾಣದ ಒಳಗೆ 3 ಬೋನುಗಳನ್ನು ಇಡಲಾಗಿದೆ. ಸುತ್ತಲಿನ ಅರಣ್ಯ ಪ್ರದೇಶದಲ್ಲೂ 2 ಬೋನು ಇಡಲಾಗಿದೆ. ಒಟ್ಟು 5 ಬೋನುಗಳನ್ನು ಅಳವಡಿಸಲಾಗಿದೆ ಎಂದು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಇತಿಹಾಸದಲ್ಲೇ ಮೊದಲ ಬಾರಿ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಪಟ್ಟ ಬಿಜೆಪಿಗೆ!

Next Post

ದಕ್ಷಿಣ ಕನ್ನಡ ಪುತ್ತೂರಲ್ಲಿ ವಿಶೇಷ ಶಾಲೆ; ಹಸಿರ ಬಳ್ಳಿಯೇ ಮೇಲ್ಛಾವಣಿ

Related Posts

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !
ಕರಾವಳಿ

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
47
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
23
Next Post
ದಕ್ಷಿಣ ಕನ್ನಡ ಪುತ್ತೂರಲ್ಲಿ ವಿಶೇಷ ಶಾಲೆ; ಹಸಿರ ಬಳ್ಳಿಯೇ ಮೇಲ್ಛಾವಣಿ

ದಕ್ಷಿಣ ಕನ್ನಡ ಪುತ್ತೂರಲ್ಲಿ ವಿಶೇಷ ಶಾಲೆ; ಹಸಿರ ಬಳ್ಳಿಯೇ ಮೇಲ್ಛಾವಣಿ

Discussion about this post

Recent News

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
15
ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

August 1, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

August 1, 2026
ಮೂಡುಬಿದಿರೆ : ಪತ್ನಿಯ ಕಿರುಕುಳ, ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ

ಮೂಡುಬಿದಿರೆ : ಪತ್ನಿಯ ಕಿರುಕುಳ, ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ

August 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d