• About us
  • Contact us
  • Disclaimer
Tuesday, May 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರ್ನಾಟಕ ಬಿಜೆಪಿ ಎಂಪಿ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ: ದೂರು ದಾಖಲಿಸಿದ ಯುವತಿ

Coastal Times by Coastal Times
November 18, 2023
in ಕರಾವಳಿ
ಕರ್ನಾಟಕ ಬಿಜೆಪಿ ಎಂಪಿ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ: ದೂರು ದಾಖಲಿಸಿದ ಯುವತಿ
70
VIEWS
WhatsappTelegramShare on FacebookShare on Twitter

ಬೆಂಗಳೂರು : ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿಬಂದಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ. ಹೌದು.. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿ ದೂರು ದಾಖಲಿಸಿದ್ದು, ಈ ದೂರಿ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್​ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ರೆ, ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಮದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಪಾರ್ಟಿಯೊಂದರಲ್ಲಿ ಸ್ನೇಹಿತರ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಆಕೆಗೆ ಮದುವೆಯಾಗುವುದಾಗಿ ನಂಬಿಸಿ ಕಳೆದ ಜನವರಿಯಲ್ಲಿ ಮೈಸೂರಿನ ಹೋಟೇಲ್ ನಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಮದುವೆ ಆಗುವಂತೆ ಯುವತಿ ಪಟ್ಟು ಹಿಡಿದಿದ್ದಕ್ಕೆ ಆಕೆಯಿಂದ ಅಂತರ ಕಾಪಾಡಿಕೊಳ್ಳಲು ಶುರುಮಾಡಿದ್ದಾರೆ. ಇದರಿಂದ ಬೇರೆ ದಾರಿ ಕಾಣದೇ ಯುವತಿ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.

ನನ್ನನ್ನು ಹೆಂಡತಿಯಾಗಿ ಸ್ವೀಕರಿಸಲೇಬೇಕು, ಅದೊಂದೇ ಬೇಡಿಕೆ ; ಅವನಿಗೆ ಒಂದು ಮಗು ಕೊಡಿಸಬೇಕು ಎಂಬ ಸೆಂಟಿಮೆಂಟ್‌ ಆಧಾರದಲ್ಲಿ ನಾನು ಅವನ ಜತೆ ಸೇರಿದೆ. ಆದರೆ, ಅವನು ಅವಾಯ್ಡ್‌ ಮಾಡಲು ಶುರು ಮಾಡಿದ. ಕೊನೆಗೆ ನನ್ನನ್ನು ದೂರ ಮಾಡಲು ಮುಂದಾದ. ಮದುವೆ ಮಾಡಿಕೊಳ್ಳಿ ಎಂದು ಕಾಲಿಗೆ ಬಿದ್ದಾಗಲೂ ತಿರಸ್ಕರಿಸಿದ. ಹಣ ಕೊಟ್ಟು ನನ್ನನ್ನು ದೂರ ಮಾಡಲು ಅವನ ಸ್ನೇಹಿತರು ಮುಂದಾದರು. ಆದರೆ, ನಾನು ಹಣಕ್ಕಾಗಿ ಏನನ್ನೂ ಮಾಡಿಲ್ಲ. ಹೀಗಾಗಿ ತಿರಸ್ಕರಿಸಿದೆ. ರಂಗನಾಥ್‌ ಅಪ್ಪನಿಗೂ ವಿಷಯ ತಲುಪಿಸಿದ್ದೇನೆ. ಅವರು ಕಾನೂನು ಪ್ರಕಾರ ಕೈಗೊಳ್ಳಬಹುದು ಎಂದು ಹೇಳಿದ್ದಾರೆ. ಈಗಲೂ ನನ್ನ ಬೇಡಿಕೆ ಒಂದೇ. ನನ್ನನ್ನು ಹೆಂಡತಿಯಾಗಿ ಸ್ವೀಕರಿಸಲೇಬೇಕು ಎಂದು ಯುವತಿ ಹೇಳಿದ್ದಾಳೆ.

ಇಬ್ಬರಿಗೂ ನೋಟಿಸ್ : ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ವಿಚಾರನೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ. ಇನ್ನು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಯುವತಿ ವಿರುದ್ಧ ರಂಗನಾಥ್ ಪ್ರತಿ ದೂರು : ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾರೆ ಎಂದು ಯುವತಿ ದೂರು ದಾಖಲಿಸಿದ ಬೆನ್ನಲ್ಲೇ ಇತ್ತ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದಾರೆ. ​ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ. ಅಲ್ಲದೇ 15 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಯುವತಿ ವಿರುದ್ಧ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆ ಪೊಲೀಸರು ಬೆಂಗಳೂರು ಮೂಲದ ಯುವತಿ ಹಾಗೂ ಶ್ರೀನಿವಾಸ್ ಎನ್ನುವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಒಟ್ಟಿನಲ್ಲಿ ಯುವತಿ ಹಾಗೂ ರಂಗನಾಥ್​ ಪರಸ್ಪರ ದೂರು ದಾಖಲಿಸಿದ್ದು, ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ. ಇನ್ನು ಪೊಲೀಸರು ಈ ಪ್ರಕರಣದ ಸತ್ಯಾಸತ್ಯತೆಯನ್ನು ಕಂಡು ಹಿಡಿಬೇಕಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Next Post

ಮಂಗಳೂರು: ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್‌ಗೆ ಚಾಲನೆ

Related Posts

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’
ಕರಾವಳಿ

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
10
ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”
ಕರಾವಳಿ

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

May 11, 2025
101
Next Post
ಮಂಗಳೂರು: ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್‌ಗೆ ಚಾಲನೆ

ಮಂಗಳೂರು: 'ಕ್ಲಾಸ್ ಆನ್ ವ್ಹೀಲ್ಸ್' ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್‌ಗೆ ಚಾಲನೆ

Discussion about this post

Recent News

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
45
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d