• About us
  • Contact us
  • Disclaimer
Thursday, February 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಂಭ್ರಮ, ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು: ಕೆ.ಎನ್.ರಾಜಣ್ಣ

Coastal Times by Coastal Times
November 18, 2023
in ಕರಾವಳಿ
70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಂಭ್ರಮ, ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು: ಕೆ.ಎನ್.ರಾಜಣ್ಣ
13
VIEWS
WhatsappTelegramShare on FacebookShare on Twitter

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಹಕಾರಿ ಯೂನಿಯನ್‌ ಗಳ ಸಹಯೋಗದೊಂದಿಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮ ಇಂದು ಮಂಗಳೂರಿನ ಉರ್ವ ಕ್ರಿಕೆಟ್‌ ಮೈದಾನದಲ್ಲಿ ನಡೆಯಿತು.

ಸಹಾಕಾರಿ ಆಂದೋಲನ ಕೇವಲ ಕೆಲವೇ ವ್ಯಕ್ತಿಗಳ ಕಪಿಮುಷ್ಟಿಯಲ್ಲಿ ಇರಬಾರದು ಎಲ್ಲಾ ವರ್ಗದ ಜನರು ಪಕ್ಷಾತೀತವಾಗಿ, ಜಾತಿ, ಧರ್ಮ ಮೀರಿದ ಜನರ ಆಂದೋಲನವಾಗಬೇಕು ಎನ್ನುವುದು ನಮ್ಮ ಗುರಿಯಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಯಾಗಬೇಕಾದರೆ ಹಳ್ಳಿ ಗಾಡಿನ ಜನರ ಆರ್ಥಿಕ ಶಕ್ತಿ ಬಲಗೊಳ್ಳಬೇಕಾಗಿದೆ. ಆಗ ಜಿಡಿಪಿ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಬೇಸಾಯ ಮಾಡುವ ಕುಟುಂಬಗಳಿಗೆ, ಸ್ವ ಸಹಾಯ ಸಂಘಗಳಿಗೆ ಸಹಕಾರ ಕ್ಷೇತ್ರದ ಮೂಲಕ ಸಾಲ ಸಹಾಯ ದೊರೆಯ ಬೇಕಾಗಿದೆ.ರೈತರ ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿಕೊಡಲು ಸಹಕಾರ ಕ್ಷೇತ್ರ ಬಲ ನೀಡಬೇಕಾಗಿದೆ ಎಂದು ರಾಜಣ್ಣ ವಿವರಿಸಿದರು.

ರಾಜ್ಯ ವಿಧಾನ ಸಭೆಯ ಅಧ್ಯಕ್ಷ ಯು ಟಿ ಖಾದರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಯಾವುದೇ ಜವಾಬ್ದಾರಿಯನ್ನು ವಹಿಸಿದಾಗ ಅದನ್ನು ಇಲ್ಲಿನವರು ಪ್ರಾಮಾಣಿಕವಾಗಿ ನಿರ್ವಹಿಸುತ್ತಾರೆ. ಗ್ರಾಮೀಣ ಮಟ್ಟದಲ್ಲಿ ಹತ್ತು ಜನ ಸಹಕಾರಿಗಳು ಸೇರಿ ಜನರಿಗೆ ಬೇಕಾದ ಕಾರ್ಯಕ್ರಮ ಹಮ್ಮಿಕೊಂಡರೆ ಸಹಕಾರಿ ಕ್ಷೇತ್ರ ಬೆಳೆಯಲು ಸಾಧ್ಯವಿದೆ. ವಾಣಿಜ್ಯ ಬ್ಯಾಂಕುಗಳು ಜನರ ಕಿಸೆ ನೋಡಿ ಸಾಲ ಕೊಡುತ್ತವೆ. ಜನರ ಮುಖ ನೋಡಿ ಸಾಲ ಕೊಡುವ ಬ್ಯಾಂಕುಗಳಿದ್ದರೆ ಅವು ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಮಾತ್ರ ಎಂದು ಹೇಳಿದರು.

ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ ಭಾರತದಲ್ಲಿ ಸಹಕಾರಿ ಚಳವಳಿ ಆರಂಭವಾಗಿ 100 ವರ್ಷ ದಾಟಿದ್ದು, ದೇಶದ ಆರ್ಥಿಕ ಚಟುವಟಿಕೆಗೆ ಮಹತ್ವದ ಕೊಡುಗೆ ನೀಡಿದೆ. ಇಂದು ಜಗತ್ತಿನಲ್ಲಿ ಭಾರತವು ಆರ್ಥಿಕತೆಯಲ್ಲಿ 5 ರಿಂದ 3 ನೇ ಸ್ಥಾನಕ್ಕೆ ಬಂದಿದ್ದರೆ ಅದಕ್ಕೆ ಮುಖ್ಯ ಕಾರಣ ಸಹಕಾರಿ ರಂಗ. ದಕ್ಷಿಣ ಕನ್ನಡದಲ್ಲಿ ಮೊಳಹಳ್ಳಿ ಶಿವರಾವ್‌ ಅವರಿಂದ ಆರಂಭವಾದ ಸಹಕಾರಿ ಚಳವಳಿ ಪ್ರಸ್ತುತ ಎಂ ಎನ್ ರಾಜೇಂದ್ರ ಕುಮಾರ್‌ ಅವರ ಅವಧಿಯಲ್ಲಿ ಉಚ್ಛ್ರಾಯ ಸ್ಥಿತಿಗೇರಿದೆ. ಸಹಕಾರಿ ರಂಗವು ರೈತರನ್ನು ಸಬಲೀಕರಣ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದರೆ ಅದಕ್ಕೆ ಮುಖ್ಯ ಕಾರಣ ಸಹಕಾರಿ ಚಳವಳಿ ಎಂದರು.

ಕೆಎಂಎಫ್ ವತಿಯಿಂದ ನಂದಿನಿಯ ನೂತನ ಉತ್ಪನ್ನಗಳನ್ನು ಮತ್ತು ಕರಾವಳಿ ಸಹಕಾರಿ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್.ರಾಜೇಂದ್ರ ಕುಮಾರ್‌ ರವರು ಮಾತನಾಡುತ್ತಾ, “ದೇಶದ ರೈತರ ಕಟ್ಟ ಕಡೆಯ ರೈತರ ಅಭಿವೃದ್ಧಿ ಗೆ ಕೇಂದ್ರ ರಾಜ್ಯ ಸರಕಾರಗಳು ಸಹಕಾರಿ ರಂಗಕ್ಕೆ ನೆರವು ನೀಡುತ್ತಿರುವುದಕ್ಕೆ ತಾನು ಕೃತಜ್ಞತೆ ಸಲ್ಲಿಸುತ್ತೇನೆ.ನವೋದಯ ಸ್ವ ಸಹಾಯ ಸಂಘಗಳ ಮೂಲಕ ಸ್ವಾವಲಂಬಿ ಗಳಾಗಿ ತಮ್ಮ ಬದುಕು ಕಟ್ಟಿ ಕೊಳ್ಳಲು ಸಹಾಯ ಆಗಿದೆ ಎಂದು ಸಹಕಾರಿ ರಂಗ ವನ್ನು ನೆನಪಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ವೇದವ್ಯಾಸ ಕಾಮತ್, ಯಶ್ಫಾಲ್ ಸುವರ್ಣ,ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಯಮಿ ರೋಹನ್ ಮೊಂತೆರೊ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ ಅವರು ಗೌರವ ಅತಿಥಿ ಗಳಾಗಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ , ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು,ಶಶಿಕುಮಾರ್ ರೈ ಬಾಲ್ಯೋಟ್ಟು , ಭಾಸ್ಕರ್ ಎಸ್. ಕೋಟ್ಯಾನ್ , ಬಿ.ನಿರಂಜನ್ , ಟಿ.ಜಿ. ರಾಜಾರಾಮ ಭಟ್ , ಎಂ.ವಾದಿರಾಜ ಶೆಟ್ಟಿ , ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ , ಎಸ್.ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ , ಹರಿಶ್ಚಂದ್ರ , ಕೆ.ಜೈರಾಜ್ ಬಿ ರೈ , ರಾಜೇಶ್ ರಾವ್ ,ಸದಾಶಿವ ಉಳ್ಳಾಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ಮಹಾಪ್ರಬಂಧಕ ರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿಯೂನಿಯನ್ ಅಧ್ಯಕ್ಷರುಗಳಾದ ಬೆಳ್ಳಿಪಾಡಿ ಪ್ರಸಾದ್‌ ಕೌಶಲ್‌ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸ್ಕ್ಯಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳ ಮತ್ತು ಸಹಕಾರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹೋಟೇಲ್ ವುಡ್‌ಲ್ಯಾಂಡ್ಸ್‌‌ನಲ್ಲಿ ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ

Next Post

ಬಜ್ಪೆ: ಗಾಂಜಾ ಸಾಗಾಟ ಆರೋಪ; ಮೂರು ಮಂದಿ ಸೆರೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
27
Next Post
ಬಜ್ಪೆ: ಗಾಂಜಾ ಸಾಗಾಟ ಆರೋಪ; ಮೂರು ಮಂದಿ ಸೆರೆ

ಬಜ್ಪೆ: ಗಾಂಜಾ ಸಾಗಾಟ ಆರೋಪ; ಮೂರು ಮಂದಿ ಸೆರೆ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d