ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲು ಸೇರಿರುವ ಮಂಡ್ಯ ಮೂಲದ ಚಿನ್ನಯ್ಯನಿಗೆ 23 ದಿನಗಳ ನಂತರ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಾಲ್ಕು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ ನವೆಂಬರ್ 24ರಂದು ಜಾಮೀನು ಸಿಕ್ಕಿತ್ತು. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದ್ರೆ, ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಜಾಮೀನು ಸಿಕ್ಕ ಬಳಿಕ ಹೊರಬರುವ ಖುಷಿಯಲ್ಲಿದ್ದ ಚಿನ್ನಯ್ಯನಿಗೆ ಆರ್ಥಿಕ ಸಮಸ್ಯೆಗಳು ಎದುರಾಗಿತ್ತು. ಹೀಗಾಗಿ ಮಾಸ್ಕ್ ಮ್ಯಾನ್ ಮಂಕಾಗಿದ್ದ. ಧರ್ಮಸ್ಥಳ ಪ್ರಕರಣದಲ್ಲಿ ಚಿನ್ನಯ್ಯನನ್ನು ಬಳಸಿಕೊಂಡು ಬುರುಡೆ ಗ್ಯಾಂಗ್ ಸಹ ಅಂತರ ಕಾಯ್ದುಕೊಂಡಿತ್ತು.ಹೀಗಾಗಿ ಜಾಮೀನು ಆದೇಶ ಬಳಿಕ 23 ದಿನಗಳಿಂದ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿರಬೇಕಾಗಿತ್ತು.
ಇದೀಗ ಚಿನ್ನಯ್ಯನ ಪತ್ನಿ ಮಲ್ಲಿಕಾ ಒಂದು ಲಕ್ಷದ ಬಾಂಡ್ ನೀಡಲು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದು ಕಾನೂನು ಪಕ್ರಿಯೆ ಮುಗಿಸಿದ್ದಾರೆ. ಕೋರ್ಟ್ ಅನುಮತಿ ಪಡೆದು ಚಿನ್ನಯ್ಯನ ಪತ್ನಿ ಹಾಗು ವಕೀಲರು ಶಿವಮೊಗ್ಗ ಜೈಲಿನತ್ತ ತೆರಳಿದ್ದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
Discover more from Coastal Times Kannada
Subscribe to get the latest posts sent to your email.







Discussion about this post