• About us
  • Contact us
  • Disclaimer
Thursday, March 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧುರಂಧರ್​ ಸಿನಿಮಾ ಪಾಕಿಸ್ತಾನದಲ್ಲಿ ನಿಷೇಧಿಸಿದ್ದರೂ 2 ಮಿಲಿಯನ್​ಗೂ ಹೆಚ್ಚು ಡೌನ್​ಲೋಡ್​

Coastal Times by Coastal Times
December 18, 2025
in ಸಿನಿಮಾ
ಧುರಂಧರ್​ ಸಿನಿಮಾ ಪಾಕಿಸ್ತಾನದಲ್ಲಿ ನಿಷೇಧಿಸಿದ್ದರೂ 2 ಮಿಲಿಯನ್​ಗೂ ಹೆಚ್ಚು ಡೌನ್​ಲೋಡ್​
1
VIEWS
WhatsappTelegramShare on FacebookShare on Twitter

ನವದೆಹಲಿ: ಭಾರತದಲ್ಲಿ, ತನ್ನ ಪ್ರೇರೇಪಣೆಯಿಂದ ನಡೆದ ಭಯೋತ್ಪಾದನಾ ಕೃತ್ಯಗಳನ್ನು ಬಿಚ್ಚಿಡುವ ಧುರಂಧರ್​ ಸಿನಿಮಾವನ್ನು ಪಾಕಿಸ್ತಾನ ನಿಷೇಧಿಸಿದೆ. ಆದರೆ, ಪಾಕಿಗಳು ಮಾತ್ರ ಇದಕ್ಕೆ ಕ್ಯಾರೇ ಎನ್ನದೇ, ಹಲವಾರು ಡಾರ್ಕ್​ ವೆಬ್​ಸೈಟ್​ಗಳಿಂದ ಸಿನಿಮಾವನ್ನು ಡೌನ್​ಲೋಡ್​ ಮಾಡಿಕೊಂಡು ವೀಕ್ಷಿಸುತ್ತಿದ್ದಾರೆ. ಇದು ಪಾಕ್​ ಸರ್ಕಾರ ಮತ್ತು ಐಎಸ್​ಐಗೆ ತಲೆನೋವಾಗಿದೆ.

ಇಂದಿನ ಡಿಜಿಟಲ್​ ಯುಗದಲ್ಲಿ ಥಿಯೇಟರ್​ಗಳೇ ಸಿನಿಮಾದ ಮೂಲವಾಗಿ ಉಳಿದಿಲ್ಲ. ಹೀಗಾಗಿ, ಪಾಕಿಸ್ತಾನಿಗರು ಸಿನಿಮಾ ವೀಕ್ಷಿಸಲು ಶ್ರೀಲಂಕಾ, ನೇಪಾಳ ಮತ್ತು ಮಲೇಷ್ಯಾದ ಸರ್ವರ್​ಗಳನ್ನು ಬಳಸುತ್ತಿದ್ದಾರೆ. ಜೊತೆಗೆ, ಟೆಲಿಗ್ರಾಮ್ ಚಾನೆಲ್‌ಗಳು, ಭೂಗತ ಸ್ಟ್ರೀಮ್‌ಗಳು ಮತ್ತು ವಿಪಿಎನ್​ ಮೂಲಕ ಚಿತ್ರವನ್ನು ಡೌನ್‌ಲೋಡ್ ಮಾಡುತ್ತಿದ್ದಾರೆ. ಇದು ದೇಶದಲ್ಲಿಯೇ ಅತಿ ಹೆಚ್ಚು ವೀಕ್ಷಣೆ ಕಂಡ ನಿಷೇಧಿತ ಸಿನಿಮಾವಾಗಿದೆ ಎಂಬುದು ವಿಶೇಷ.

1999ರ ಕಂದಹಾರ್​ ವಿಮಾನ ಅಪಹರಣ, 26/11ರ ಮುಂಬೈ ದಾಳಿ, ಸಂಸತ್​ ಭವನ ಅಟ್ಯಾಕ್​ ಮತ್ತು ಲಿಯಾರಿ ಗ್ಯಾಂಗ್ ವಾರ್‌ಗಳನ್ನು ಒಳಗೊಂಡ ಈ ಸಿನಿಮಾ ಕಳೆದ ಎರಡು ವಾರಗಳಲ್ಲಿ ಕನಿಷ್ಠ 2 ಮಿಲಿಯನ್​​ನಷ್ಟು ಡೌನ್​ಲೋಡ್​​ ಕಂಡಿದೆ. ಇದು ಡಿಜಿಟಲ್ ವ್ಯವಸ್ಥೆಯ ಮೇಲೆ ಐಎಸ್‌ಐ ಹೊಂದಿರುವ ಕಳಪೆ ನಿಯಂತ್ರಣವನ್ನು ತೋರಿಸುತ್ತದೆ.

ಈ ಹಿಂದೆ ಬೀಟಿಂಗ್​ 2.0 ಮತ್ತು ರಯೀಸ್​ ಸಿನಿಮಾ ಅತಿ ಹೆಚ್ಚು ಅಕ್ರಮ ಡೌನ್​ಲೋಡ್​ ಕಂಡಿದ್ದವು. ಈ ದಾಖಲೆಯನ್ನು ಧುರಂಧರ್​ ಮುರಿದಿದೆ. ಪಾಕಿಸ್ತಾನದಲ್ಲಿ ಸಿನಿಮಾ ನಿಷೇಧಿಸಿದ್ದರಿಂದ ಚಲನಚಿತ್ರ ನಿರ್ಮಾಪಕರಿಗೆ 50-60 ಕೋಟಿ ರೂಪಾಯಿ ನಷ್ಟವಾಗಿರಬಹುದು. ಆದರೆ ಪಾಕಿಸ್ತಾನವು ಭಯೋತ್ಪಾದಕ ರಾಷ್ಟ್ರ ಎಂಬ ಸಂದೇಶವನ್ನು ಆ ದೇಶದಲ್ಲಿಯೇ ಪಸರಿಸುವಲ್ಲಿ ಮಾತ್ರ ಯಶಸ್ವಿಯಾಗಿದೆ.

ನಿಷೇಧದ ನಡುವೆಯೂ ಡೌನ್‌ಲೋಡ್‌ಗಳ ಸಂಖ್ಯೆ ಏರುತ್ತಿರುವುದು ಪಾಕಿಸ್ತಾನದ ಜನರು ಸಿನಿಮಾದ ಬಗ್ಗೆ ಹೊಂದಿರುವ ಕುತೂಹಲವನ್ನು ಸೂಚಿಸುತ್ತದೆ. ಕೆಲವರು ಚಿತ್ರದ ನಿರೂಪಣೆಯನ್ನು ಒಪ್ಪದಿದ್ದರೂ, ಅನೇಕರು ಚಿತ್ರದಲ್ಲಿನ ನಟನೆಯನ್ನು ಮೆಚ್ಚಿದ್ದಾರೆ. ಈ ಕುರಿತು ಅನೇಕ ಪಾಕಿಸ್ತಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ರೀಲ್‌ಗಳು ಮತ್ತು ಮೀಮ್‌ಗಳನ್ನು ಹರಿಬಿಡುತ್ತಿರುವುದು ಕಂಡುಬಂದಿದೆ.

ಇನ್ನೂ, ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ (ಪಿಪಿಪಿ) ದಿವಂಗತ ನಾಯಕಿ ಬೆನಜೀರ್ ಭುಟ್ಟೋ ಅವರ ಚಿತ್ರಗಳನ್ನು ಸಿನಿಮಾದಲ್ಲಿ ಬಳಸಿದ್ದನ್ನು ಪ್ರಶ್ನಿಸಿ ಕರಾಚಿ ನ್ಯಾಯಾಲಯದಲ್ಲಿ ಕಾನೂನು ದಾವೆ ಹೂಡಲಾಗಿದೆ. ಧುರಂಧರ್ ಚಿತ್ರದ ನಟರು ಮತ್ತು ತಂಡದ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ಸಿನಿಮಾದ ಬಗ್ಗೆ ಹೇಳುವುದಾದರೆ, ರಣವೀರ್ ಸಿಂಗ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಅವರು ಐಎಸ್‌ಐ ಬೆಂಬಲಿತ ಭಯೋತ್ಪಾದಕ ಜಾಲಗಳನ್ನು ನಾಶಮಾಡಲು ಪಾಕಿಸ್ತಾನದ ಲಿಯಾರಿಗೆ ನುಸುಳುವ ಭಾರತೀಯ ಗೂಢಚಾರಿ ಹಮ್ಜಾ ಪಾತ್ರದಲ್ಲಿ ಮಿಂಚಿದ್ದಾರೆ. ಅಕ್ಷಯ್ ಖನ್ನಾ ಲಿಯಾರಿಯ ರೌಡಿಶೀಟರ್​, ಸಂಜಯ್ ದತ್ ಪೊಲೀಸ್ ಅಧಿಕಾರಿ, ಆರ್.ಮಾಧವನ್ ಭಾರತದ ಬೇಹುಗಾರಿಕಾ ಸಂಸ್ಥೆ ರಾ ಮುಖ್ಯಸ್ಥರಾಗಿದ್ದರೆ, ಅರ್ಜುನ್ ರಾಂಪಾಲ್ ಮತ್ತು ರಾಕೇಶ್ ಬೇಡಿ ಕೂಡ ಇದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!

Next Post

ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025

Related Posts

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಸಿನಿಮಾ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
9
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!
ಸಿನಿಮಾ

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
39
Next Post
ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025

ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ - 2025

Discussion about this post

Recent News

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
10
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
156
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d