• About us
  • Contact us
  • Disclaimer
Tuesday, February 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಚಿವರು, ಶಾಸಕರು ಸೇರಿದಂತೆ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ

Coastal Times by Coastal Times
January 19, 2022
in ರಾಜ್ಯ
ಸಚಿವರು, ಶಾಸಕರು ಸೇರಿದಂತೆ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ
17
VIEWS
WhatsappTelegramShare on FacebookShare on Twitter

ಬೆಂಗಳೂರು: 10-12 ದಿನಗಳ ಕಾಲ ಕ್ವಾರಂಟೈನ್ ಇದ್ದು ಕೋವಿಡ್ ನೆಗೆಟಿವ್ ವರದಿ ಬಂದಿದ್ದು ಇದೀಗ ಸಂಪೂರ್ಣ ಗುಣಮುಖನಾಗಿರುವುದರಿಂದ ಇಂದು ಬುಧವಾರದಿಂದ ದೈನಂದಿನ ಕೆಲಸ ಕಾರ್ಯಗಳು ಕಚೇರಿಯಲ್ಲಿ ಮುಂದುವರಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿನ್ನೆ ಜಿಲ್ಲಾಧಿಕಾರಿಗಳ ಸಭೆಯನ್ನು ವರ್ಚುವಲ್ ಮಾಡಲಾಗಿದ್ದು, ಯಾವ ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆಯ ಕೊರತೆಯಿದೆಯೋ ಅಲ್ಲಿ ಲಸಿಕೆ ಪ್ರಮಾಣ ಹೆಚ್ಚು ಮಾಡಬೇಕೆಂದು ವಿಶೇಷವಾಗಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವುದು, ಕೋವಿಡ್ ವಾರಿಯರ್ಸ್ ಗೆ ಇನ್ನಷ್ಟು ತೀವ್ರಗತಿಯಲ್ಲಿ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದರು.

ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ: ಕೋವಿಡ್ ನಿಯಮ ಉಲ್ಲಂಘಿಸಿದವರು ಯಾರೇ ಆಗಿದ್ದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ನಿನ್ನೆ ಮುಖ್ಯ ಕಾರ್ಯದರ್ಶಿಗಳು ಲಿಖಿತ ಆದೇಶ ಹೊರಡಿಸಿದ್ದಾರೆ. ಅದು ಯಾವುದೇ ಪಕ್ಷದವರಾಗಿದ್ದರೂ, ಯಾವ ಸಂಘಟನೆಯಾದರೂ ಕೋವಿಡ್ ನಿಯಮ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ನವರು ದೂರು ನೀಡಬೇಕಾಗಿಲ್ಲ, ನಾವೇ ಸ್ವಯಂಪ್ರೇರಣೆಯಿಂದ ಮಾಡುತ್ತೇವೆ ಎಂದರು.

ಶುಕ್ರವಾರ ನಿರ್ಧಾರ: ವೀಕೆಂಡ್ ಕರ್ಫ್ಯೂ ಬೇಡ, ವ್ಯಾಪಾರ-ವಹಿವಾಟು ನಮ್ಮ ಬದುಕಿಗೆ ಬಹಳ ಕಷ್ಟವಾಗುತ್ತಿದೆ ಎಂದು ಈಗಾಗಲೇ ಹಲವರು ವಿರೋಧ ವ್ಯಕ್ತಪಡಿಸಿ ಸರ್ಕಾರಕ್ಕೆ ಬಹಳ ಒತ್ತಡ ಹಾಕುತ್ತಿದ್ದಾರೆ. ಒಂದೆಡೆ ಕೋವಿಡ್ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕಾ ಅಥವಾ ರದ್ದುಪಡಿಸಬೇಕಾ ಎಂಬ ಗೊಂದಲದಲ್ಲಿ ಸರ್ಕಾರವಿದೆ.

ಹೀಗಿರುವಾಗ ಇನ್ನೆರಡು ದಿನಗಳಲ್ಲಿ ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ, ನಮ್ಮ ರಾಜ್ಯದ ಜಿಲ್ಲೆಗಳಲ್ಲಿನ ಸ್ಥಿತಿಗತಿ ನೋಡಿಕೊಂಡು ವರದಿ ತಯಾರಿಸುತ್ತಿದ್ದಾರೆ. ಅವರು ಶುಕ್ರವಾರ ವರದಿ ನೀಡಲಿದ್ದು ಅದರ ಆಧಾರದ ಮೇಲೆ ಚರ್ಚೆ ಮಾಡಿ ಅಂದೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. 

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶುಕ್ರವಾರ ತಜ್ಞರ ಜೊತೆ ಸಭೆ ನಡೆಸುತ್ತೇನೆ. ಈಗಾಗಲೇ ಹೇರಿರುವ ನಿರ್ಬಂಧಗಳನ್ನು ಪುನರ್ ಪರಿಶೀಲನೆ ಮಾಡುತ್ತೇವೆ. ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ಆದರೆ ಆಸ್ಪತ್ರೆಗಳಿಗೆ ಹೋಗಿ ದಾಖಲಾಗುವವರ ಸಂಖ್ಯೆ ಅಷ್ಟೊಂದು ಇಲ್ಲ. ಆಸ್ಪತ್ರೆಗಳಲ್ಲಿ ಒಪಿಡಿ ವಾರ್ಡ್ ಗಳಲ್ಲಿ ಸೋಂಕಿತರು ಹೆಚ್ಚುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಜ್ಞರು ಹೇಳುವುದರ ಮೇಲೆ ಸರ್ಕಾರ ನಿರ್ಧರಿಸುತ್ತದೆ ಎಂದರು. 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ 2.92 ಲ.ರೂ. ಪಡೆದು ವಂಚನೆ

Next Post

ಮಂಗಳೂರು: ಕೊರೊನಾ ಹೆಚ್ಚಳ ಹಲವು ಶಾಲೆಗಳು ಬಂದ್ !

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
68
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮಂಗಳೂರು: ಕೊರೊನಾ ಹೆಚ್ಚಳ  ಹಲವು ಶಾಲೆಗಳು ಬಂದ್ !

ಮಂಗಳೂರು: ಕೊರೊನಾ ಹೆಚ್ಚಳ ಹಲವು ಶಾಲೆಗಳು ಬಂದ್ !

Discussion about this post

Recent News

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
12
ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

February 24, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

February 24, 2026
ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d