• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಅವೈಜ್ಞಾನಿಕ ಕಾಮಗಾರಿಗೆ ವಿರೋಧಿಸಿ ಮಾರ್ಚ್ 20 ರಂದು ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ: ಎಂ.ಕೆ. ಪೌಲೋಸ್

Coastal Times by Coastal Times
March 19, 2025
in ಕರಾವಳಿ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಅವೈಜ್ಞಾನಿಕ ಕಾಮಗಾರಿಗೆ ವಿರೋಧಿಸಿ ಮಾರ್ಚ್ 20 ರಂದು ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ: ಎಂ.ಕೆ. ಪೌಲೋಸ್
23
VIEWS
WhatsappTelegramShare on FacebookShare on Twitter

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಅಡ್ಡಹೊಳೆ ಪುಲ್ಲೋಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಾ.20 ರಂದು ಸ್ಥಳೀಯರು ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಶಿರಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಸಾಮಾಜಿಕ ಮುಖಂಡ ಎಂ.ಕೆ. ಪೌಲೋಸ್  ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಹೆದ್ದಾರಿ ಕಾಮಗಾರಿ ಪ್ರಾರಂಭವಾದಾಗಿನಿಂದ ಸಾರ್ವಜನಿಕರಿಗೆ ಒಂದಲ್ಲ ಒಂದು ರೀತಿಯ ತೊಂದರೆಯಾಗುತ್ತಲೇ ಬಂದಿದೆ. ಶಿರಾಡಿ ಗ್ರಾಮದ ವಾರ್ಡ್ ಸಂಖ್ಯೆ 2 ಮತ್ತು 3 ರಲ್ಲಿ ವಾಸಿಸುವ 500 ಕ್ಕೂ ಹೆಚ್ಚು ಜನರಿಗೆ ತಾವು ವಾಸಿಸುವ ಜಾಗಕ್ಕೆ ಹೋಗಲು ಇರುವ ಯು-ಟರ್ನ್ ಅನ್ನು ನೇರಗೊಳಿಸಲು ಮನವಿ ಮಾಡಿದರೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ ಮೇಲೆ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಈಗ ತುರ್ತಾಗಿ ಬಂದು ಯು-ಟರ್ನ್ ಬಂದ್ ಮಾಡಲು ಹೊರಟಿದ್ದಾರೆ.

ಸಂತ ಜೋಸೆಫ್ ಚರ್ಚ್ ಬಳಿಯ ಪಂಚಾಯಿತಿ ರಸ್ತೆ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ರಸ್ತೆ ಅಗಲಿಸಿ ಕಾಂಕ್ರೀಟ್ ಮಾಡುವುದಾಗಿ ಹೇಳಿ ವಂಚಿಸಲಾಗಿದೆ. ಅಲ್ಲದೆ, ಚರಂಡಿಗೆ ಸ್ಲ್ಯಾಬ್ ಹಾಕದೆ ಬಿಟ್ಟಿರುವುದರಿಂದ ಮಹಿಳೆಯೊಬ್ಬರು ಬಿದ್ದು ಗಾಯಗೊಂಡಿದ್ದಾರೆ. ಹೈಸ್ಕೂಲ್ ಬಳಿ ಅವೈಜ್ಞಾನಿಕವಾಗಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅಲ್ಲದೆ, ಫ್ಲೈಓವರ್ ಮಾಡಬೇಕೆಂಬ ಮನವಿಯನ್ನೂ ನಿರಾಕರಿಸಲಾಗಿದೆ. ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ರಸ್ತೆ ಕಾಂಕ್ರೀಟಿಕರಣದ ಕೆಲಸವನ್ನು ಕೈಗೊಂಡಿಲ್ಲ. ಶಿರಾಡಿ ಆಸ್ಪತ್ರೆಗೆ ಹೋಗುವ ರಸ್ತೆಯ ದುರಸ್ತಿ ಕಾರ್ಯವೂ ಅಸಮರ್ಪಕವಾಗಿದೆ. ಪೇರಿಯಶಾಂತಿಯಿಂದ ಅಡ್ಡಹೊಳೆವರೆಗೆ ನಿರ್ಮಾಣವಾದ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಇದನ್ನು ಪುನರ್-ನಿರ್ಮಿಸಬೇಕು.

ಈ ಎಲ್ಲಾ ಸಮಸ್ಯೆಗಳನ್ನು ನಿರ್ಲಕ್ಷಿಸಿರುವ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಶಿರಾಡಿ ಮತ್ತು ಶಿರಿಬಾಗಿಲು ಗ್ರಾಮದ ಜನರು ಮಾರ್ಚ್ 20 ರಂದು ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಹೋರಾಟ ಸಮಿತಿಯ ಅಧ್ಯಕ್ಷ ಜೋಸೆಫ್ ವಿ.ಎ., ಕಡಬ ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷ ಸಂತೋಷ್ ಅಡ್ಡಹೊಳೆ, ಹೋರಾಟ ಸಮಿತಿಯ ಕಾರ್ಯದರ್ಶಿ ತೋಮಸ್ ವಿ.ಜೆ., ಉಪಾಧ್ಯಕ್ಷ ಪ್ರಕಾಶ್ ಅಡ್ಡಹೊಳೆ ಹಾಗೂ ಹಲವಾರು ಜನಪ್ರತಿನಿಧಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪೌಲೋಸ್ ತಿಳಿಸಿದ್ದಾರೆ.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

9 ತಿಂಗಳ ಬಳಿಕ ಸುರಕ್ಷಿತವಾಗಿ ಬಾಹ್ಯಾಕಾಶದಿಂದ ಧರೆಗಿಳಿದ ಗಗನತಾರೆ ಸುನೀತಾ ವಿಲಿಯಮ್ಸ್

Next Post

ಕೇರಳ: 4 ತಿಂಗಳ ಹೆಣ್ಣು ಮಗುವನ್ನು ಮನೆಯ ಬಾವಿಗೆಸೆದು ಕೊಲೆಗೈದ ಬಾಲಕಿಯ ಸೆರೆ

Related Posts

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
61
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
39
Next Post
ಕೇರಳ: 4 ತಿಂಗಳ ಹೆಣ್ಣು ಮಗುವನ್ನು ಮನೆಯ ಬಾವಿಗೆಸೆದು ಕೊಲೆಗೈದ ಬಾಲಕಿಯ ಸೆರೆ

ಕೇರಳ: 4 ತಿಂಗಳ ಹೆಣ್ಣು ಮಗುವನ್ನು ಮನೆಯ ಬಾವಿಗೆಸೆದು ಕೊಲೆಗೈದ ಬಾಲಕಿಯ ಸೆರೆ

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
35
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d