ಮಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಶೇಕಡಾವಾರು ಫಲಿತಾಂಶದಲ್ಲಿ ‘ದಕ್ಷಿಣ ಕನ್ನಡ’ ಜಿಲ್ಲೆ ಶೇ. 90.71 ಫಲಿತಾಂಶ ಪಡೆದುಕೊಂಡಿದೆ. ಇದು ರಾಜ್ಯದಲ್ಲಿ ಅತ್ಯಧಿಕವಾಗಿದೆ. ಕಳೆದ ವರ್ಷ ಷಕೂಡ ದಕ್ಷಿಣ ಕನ್ನಡ ಜಿಲ್ಲೆ ಶೇ. 88.02 ರಷ್ಟು ಫಲಿತಾಂಶ ಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿತ್ತು. ಈ ಬಾರಿ ಶೇ.2.69 ಹೆಚ್ಚುವರಿ ಪಡೆದು ಮತ್ತೆ ಪ್ರಥಮ ಸ್ಥಾನದಲ್ಲಿದೆ.
ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಟಾಪರ್ಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮೂಡಬಿದಿರೆ ಆಳ್ವಾಸ್ ಪಿಯು ಕಾಲೇಜಿನ ಸಮರ್ಥ್ ವಿಶ್ವಾಸ್ ಜೋಷಿ 595 ಅಂಕ , ಮಂಗಳೂರಿನ ಸಂತ ಅಲೋಶಿಯಸ್ ಪಿಯು ಕಾಲೇಜಿನ ಅನಿಶ ಮಲ್ಯ 595 ಅಂಕ ಮತ್ತು ಮಂಗಳೂರಿನ ಕೆನರಾ ಪಿಯು ಕಾಲೇಜಿನ ಆಚಲ್ ಪ್ರವೀಣ್ ಉಳ್ಳಾಲ್ 595 ಅಂಕ ಪಡೆದು ಟಾಪರ್ ಆಗಿದ್ದಾರೆ. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಇಲ್ಹಂ ಅವರು ದ್ವಿತೀಯ ಪಿಯುಸಿಯಲ್ಲಿ 597 ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮತ್ತು ಮೂಡಬಿದಿರೆ ಆಳ್ವಾಸ್ ಪಿ ಯು ಕಾಲೇಜಿನ ಶ್ರೀಕೃಷ್ಣ ಪೆಜತಾಯ 597 ಅಂಕ ಪಡೆದು ಟಾಪರ್ ಆಗಿದ್ದಾರೆ.