ಬೆಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು.
ಮಂಗಳೂರಿನಲ್ಲಿ 2018ರ ಜನವರಿ 3ರಂದು ಹತ್ಯೆಯಾಗಿದ್ದ ಕಾಟಿಪಳ್ಳದ ದೀಪಕ್ ರಾವ್ ಮತ್ತು ಬೆಳ್ಳಾರೆಯ ಮಸೂದ್,ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ , 2022 ಜನವರಿ 17 ರಂದು ಗದಗ ಜಿಲ್ಲೆ ನರಗುಂದದಲ್ಲಿ ಹತ್ಯೆಯಾಗಿದ್ದ ಸಮೀರ್, 2023 ಮಾರ್ಚ್ 31 ರಂದು ಮಂಡ್ಯದಲ್ಲಿ ಹತ್ಯೆಯಾಗಿದ್ದ ಇದ್ರಿಸ್ ಪಾಶ ಅವರ ಕುಟುಂಬ ಸದಸ್ಯರಿಗೂ ಪರಿಹಾರ ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದರು.
Discussion about this post