• About us
  • Contact us
  • Disclaimer
Friday, September 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ

Coastal Times by Coastal Times
July 19, 2026
in ಕ್ರೈಮ್ ನ್ಯೂಸ್
ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ
95
VIEWS
WhatsappTelegramShare on FacebookShare on Twitter

ಮಂಗಳೂರು, ‌ಜುಲೈ 18: ಕುಡಿದ ಮತ್ತಿನಲ್ಲಿ ಯುವಕನೊಬ್ಬ ಕೈಯಲ್ಲಿ ಮಚ್ಚು ಹಿಡಿದುಕೊಂಡು ಮೂಡುಬಿದ್ರೆ ಬಸ್ ನಿಲ್ದಾಣದಲ್ಲಿ ಅಡ್ಡಾಡುತ್ತಾ ಜನರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳೀಯರೇ ಸೇರಿ ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಬಂಟ್ವಾಳ ತಾಲೂಕಿನ ವಾಮನಪದವು ಬಳಿಯ ಅಜ್ಜಿಬೆಟ್ಟು ನಿವಾಸಿ ರಾಜೇಶ್ (22) ಎಂದು ಯುವಕನನ್ನು ಗುರುತಿಸಲಾಗಿದ್ದು ಮೂಡುಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದು ಕಂಠಪೂರ್ತಿ ಕುಡಿದು ಈ ಕೃತ್ಯ ಎಸಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಯುವಕ ಕೈಯಲ್ಲಿ ಮಚ್ಚು ಹಿಡಿದು ಅತ್ತಿತ್ತ ಹೋಗಿದ್ದು ಬಳಿಕ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಶಾಪ್ ಗೆ ಬಂದು ಅಲ್ಲಿದ್ದವರಿಗೆ ಬೆದರಿಕೆ ಹಾಕಿದ್ದಾನೆ. ಯುವಕನ ಓಡಾಟದ ದೃಶ್ಯವನ್ನು ಸಾರ್ವಜನಿಕರು ಮೊಬೈಲ್​​​ನಲ್ಲಿ ಸೆರೆಹಿಡಿದಿದ್ದಾರೆ.

 

ಬಸ್ ನಿಲ್ದಾಣದ ಆವರಣದಲ್ಲೇ ಇದ್ದ ಮೊಬೈಲ್ ಅಂಗಡಿಯಲ್ಲಿ ಗ್ರಾಹಕರು ವ್ಯಾಪಾರ ನಿರತರಾಗಿದ್ದ ಸಂದರ್ಭದಲ್ಲೇ ಆರೋಪಿ ಒಳಗೆ ನುಗ್ಗಿದ್ದಾನೆ. ಅಂಗಡಿಯ ಕೌಂಟರ್ ಬಳಿ ನುಗ್ಗಿ, ತನ್ನ ಜೀನ್ಸ್ ಪ್ಯಾಂಟ್‌ನ ಒಳಗಡೆಯಿಂದ ತಲ್ವಾರ್ ಅನ್ನು ಹೊರಗೆ ಎಳೆದಿದ್ದಾನೆ. ಅಲ್ಲದೇ ಕೌಂಟರ್‌ನಲ್ಲಿದ್ದ ಸಿಬ್ಬಂದಿಗೆ ತಲ್ವಾರ್ ತೋರಿಸಿ ಹೆದರಿಸುತ್ತಾ, ತಕ್ಷಣವೇ ತನಗೆ ಮೊಬೈಲ್ ಕೊಡುವಂತೆ ಅಬ್ಬರಿಸಿದ್ದಾನೆ. ಅಷ್ಟಕ್ಕೇ ನಿಲ್ಲಿಸದೆ, ಕೌಂಟರ್ ಒಳಗಿದ್ದ ಮಳಿಗೆಯ ಸಿಬ್ಬಂದಿಯತ್ತ ತಲ್ವಾರ್ ತೋರಿಸಿ ಬೆದರಿಸಿದ್ದಾನೆ. ಈ ವೇಳೆ ಅಂಗಡಿಯಲ್ಲಿದ್ದ ಗ್ರಾಹಕರು ತೀವ್ರ ಆತಂಕಕ್ಕೆ ಒಳಗಾಗಿ ದೂರ ಸರಿದಿದ್ದಾರೆ. ಆದರೆ ಅಂಗಡಿಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಒಟ್ಟಾಗಿ ಸೇರಿ ಯುವಕನನ್ನು ಎದುರಿಸಿ, ಆತನ ಕೈಯಲ್ಲಿದ್ದ ತಲ್ವಾರ್ ಅನ್ನು ಬಲವಂತವಾಗಿ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯು ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ, ತಲ್ವಾರ್ ಬೀಸಿ ಸಾರ್ವಜನಿಕ ಶಾಂತಿ ಕದಡಿದ್ದ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಸ್ತುತ ಆರೋಪಿಯನ್ನು ಠಾಣೆಗೆ ಕರೆದೊಯ್ದು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಆತ ಈ ಕೃತ್ಯವನ್ನು ಯಾವ ಉದ್ದೇಶಕ್ಕಾಗಿ ಎಸಗಿದ್ದಾನೆ ಹಾಗೂ ಆತನ ಹಿನ್ನೆಲೆ ಏನು ಎಂಬ ಕುರಿತು ತನಿಖೆ ಮುಂದುವರೆದಿದೆ. ತಲ್ವಾರ್ ಬೀಸಿ ದಾಂಧಲೆಗೆ ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

Next Post

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

Related Posts

17 ಪ್ರಕರಣಗಳ ಕುಖ್ಯಾತ ವಂಚಕ ಸ್ಯಾಮ್ ಪೀಟರ್ 3 ವರ್ಷಗಳ ಬಳಿಕ ಸಿಸಿಬಿ ಬಲೆಗೆ
ಕ್ರೈಮ್ ನ್ಯೂಸ್

17 ಪ್ರಕರಣಗಳ ಕುಖ್ಯಾತ ವಂಚಕ ಸ್ಯಾಮ್ ಪೀಟರ್ 3 ವರ್ಷಗಳ ಬಳಿಕ ಸಿಸಿಬಿ ಬಲೆಗೆ

September 1, 2026
46
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
30
Next Post
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

Discussion about this post

Recent News

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ಫಳ್ನೀರಿನ ಬ್ಲಿಂಕಿಟ್ ಮಳಿಗೆ ಮೇಲೆ ದಾಳಿ ಮಾಡಿದ ಆರೋಗ್ಯ ಇಲಾಖೆ

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ಫಳ್ನೀರಿನ ಬ್ಲಿಂಕಿಟ್ ಮಳಿಗೆ ಮೇಲೆ ದಾಳಿ ಮಾಡಿದ ಆರೋಗ್ಯ ಇಲಾಖೆ

September 4, 2026
51
ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

September 3, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ಫಳ್ನೀರಿನ ಬ್ಲಿಂಕಿಟ್ ಮಳಿಗೆ ಮೇಲೆ ದಾಳಿ ಮಾಡಿದ ಆರೋಗ್ಯ ಇಲಾಖೆ

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ಫಳ್ನೀರಿನ ಬ್ಲಿಂಕಿಟ್ ಮಳಿಗೆ ಮೇಲೆ ದಾಳಿ ಮಾಡಿದ ಆರೋಗ್ಯ ಇಲಾಖೆ

September 4, 2026
ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

September 3, 2026
13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d