• About us
  • Contact us
  • Disclaimer
Thursday, September 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಆಗೋಸ್ಟ್ 23 ರಂದು “ಅನರ್ಕಲಿ” ತುಳು ಸಿನಿಮಾ ತೆರೆಗೆ

Coastal Times by Coastal Times
August 19, 2024
in ಸಿನಿಮಾ
ಮಂಗಳೂರು: ಆಗೋಸ್ಟ್ 23 ರಂದು “ಅನರ್ಕಲಿ” ತುಳು ಸಿನಿಮಾ ತೆರೆಗೆ
17
VIEWS
WhatsappTelegramShare on FacebookShare on Twitter

ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾದ ಪತ್ರಿಕಾಗೋಷ್ಠಿ ಸೋಮವಾರ ಸಂಜೆ ನಗರದಲ್ಲಿ ನಡೆಯಿತು.

ಮಾಧ್ಯಮವನ್ನುದ್ದೇಶಿಸಿ ಮಾತಾಡಿದ ಲಯನ್ ಕಿಶೋರ್ ಡಿ ಶೆಟ್ಟಿ ಅವರು, “ಅನರ್ಕಲಿ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ನಮ್ಮ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಕುರಿತು ತುಳುನಾಡಿನಲ್ಲಿ ಒಳ್ಳೆಯ ಮಾತು ಕೇಳಿಬರುತ್ತಿದೆ. ಇದು ನಮ್ಮ ಚಿತ್ರತಂಡಕ್ಕೆ ಖುಷಿ ತಂದಿದೆ. ನಾಡಿದ್ದು ಆಗಸ್ಟ್ 23ರಂದು ಸಿನಿಮಾ ಬಿಡುಗಡೆಯಾಗಲಿದ್ದು ತುಳುವರು ಸಿನಿಮಾ ನೋಡಿ ನಮ್ಮನ್ನು ಗೆಲ್ಲಿಸಬೇಕು” ಎಂದರು.

ನಟ ಶೋಭರಾಜ್ ಪಾವೂರು ಮಾತನಾಡಿ, “ಇದೊಂದು ಪರಿಶುದ್ಧವಾದ ತುಳು ಸಿನಿಮಾ. ಈ ಸಿನಿಮಾ ಹಿಂದೆ ಬಂದಿಲ್ಲ ಹಾಗಿದೆ ಹೀಗಿದೆ ಎಂದು ಸುಮ್ಮನೆ ಹೇಳುವುದಿಲ್ಲ. ಆದರೆ ಈ ಸಿನಿಮಾ ನೋಡಿದ ಬಳಿಕ ಎರಡು ದಿನಗಳಾದರೂ ನಿಮ್ಮನ್ನು ಕಾಡುತ್ತದೆ. ನಿಮ್ಮ ಹಣಕ್ಕೆ ಖಂಡಿತಾ ಲಾಸ್ ಆಗುವುದಿಲ್ಲ“ ಎಂದರು.

ನಟಿ ಆರ್ ಜೆ ಮಧುರಾ ಮಾತನಾಡಿ, ”ಸಿನಿಮಾ ನೋಡಿದವರು ತುಂಬಾ ಚೆನ್ನಾಗಿದೆ ಎಂದು ಬೆನ್ನುತಟ್ಟಿದ್ದಾರೆ. ತುಳುವರು ಥಿಯೇಟರ್ ಗೆ ಬಂದು ಸಿನಿಮಾ ನೋಡಿದಲ್ಲಿ ನಾವು ಇನ್ನಷ್ಟು ಕಡಿಮೆ ಬಜೆಟ್ ನಲ್ಲಿ ಸಿನಿಮಾ ಮಾಡಲು ಸಾಧ್ಯ. ನಿಮ್ಮೆಲ್ಲರ ಆಶೀರ್ವಾದ ನಮಗೆ ಬೇಕು“ ಎಂದರು.

ನಿರ್ದೇಶಕ ಹರ್ಷಿತ್ ಸೋಮೇಶ್ವರ ಮಾತನಾಡಿ, ”ನೀವು ತಲೆ ಖಾಲಿ ಇಟ್ಟುಕೊಂಡು ಸಿನಿಮಾ ನೋಡಲು ಬನ್ನಿ. ಯಾಕೆಂದರೆ ಈ ಸಿನಿಮಾದಲ್ಲಿ 2 ಗಂಟೆ 10 ನಿಮಿಷಗಳ ಕಾಲ ನಿಮ್ಮನ್ನು ರಂಜಿಸಲು ಏನೆಲ್ಲಾ ಬೇಕೋ ಅದೆಲ್ಲವನ್ನು ತೋರಿಸಿದ್ದೇವೆ. ಹೀಗಾಗಿ ತುಳು ಭಾಷೆ ತುಳು ಸಿನಿಮಾವನ್ನು ಉಳಿಸಲು ಎಲ್ಲರೂ ಒಂದಾಗಿ ನಮ್ಮ ಸಿನಿಮಾ ನೋಡಿ ಬೆಂಬಲಿಸಿ“ ಎಂದು ಹೇಳಿದರು.
ವೇದಿಕೆಯಲ್ಲಿ ಅರುಣ್ ರೈ ಪುತ್ತೂರು, ವಾತ್ಸಲ್ಯ, ಲಂಚುಲಾಲ್, ರಜನೀಶ್ ಕೋಟ್ಯಾನ್, ರೋಹಿತ್, ಮೋಹನ್ ಕೊಪ್ಪಲ ಮತ್ತಿತರರು ಉಪಸ್ಥಿತರಿದ್ದರು.

“ಅನರ್ ಕಲಿ” ಸಿನಿಮಾ ಒಂದೇ ಹಂತದಲ್ಲಿ 18 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಪೊಳಲಿ, ಕಟೀಲು, ಸೋಮೇಶ್ವರ, ಉಳ್ಳಾಲ, ಉಳಿಯ, ನೀರ್ ಮಾರ್ಗ, ಹಾಗೂ ಕಳಸದಲ್ಲಿ ಸಿನಿಮಾಕ್ಕೆ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಸಿನಿಮಾದಲ್ಲಿ ಒಂದು ಕಥಾಹಂದರವನ್ನು ಇಟ್ಟುಕೊಂಡು ಸಂಪೂರ್ಣ ಹಾಸ್ಯಭರಿತವಾಗಿ ಸಿನಿಮಾ ಸಾಗಿದೆ. ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ದೀಪಕ್ ಪಾಣಾಜೆ, ರವಿ ರಾಮಕುಂಜ, ಪುಷ್ಪರಾಜ್ ಬೊಳ್ಳೂರು, ಸುಜಾತ ಶಕ್ತಿನಗರ, ನಮಿತಾ ಕುಳೂರು ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕ ನಟನಾಗಿ ವಿಜಯ್ ಶೋಭರಾಜ್ ಪಾವೂರು, ನಾಯಕಿಯಾಗಿ ಮಧುರ ಆರ್ ಜೆ ಅಭಿನಯಿಸಿದ್ದಾರೆ. ಇನ್ನುಳಿದಂತೆ ಮೋಹನ್ ಕೊಪ್ಪಲ, ಹರ್ಷಿತ್ ಸೋಮೇಶ್ವರ, ಮಂಜು ರೈ ಮುಳೂರು, ರಂಜನ್ ಬೋಳೂರು ಶರಣ್ ಕೈಕಂಬ, ಪ್ರಕಾಶ್ ಶೆಟ್ಟಿ ಧರ್ಮನಗರ, ಮಧುರ ಆರ್.ಜೆ ವಾತ್ಸಲ್ಯ ಸಾಲಿಯಾನ್ , ವಿನಾಯಕ್ ಜೆಪ್ಪು ತಾರಾಗಣದಲ್ಲಿದ್ದಾರೆ.
ಛಾಯಾಗ್ರಹಣ ಅನಿಲ್ ಕುಮಾರ್, ಅರುಣ್ ರೈ ಪುತ್ತೂರು, ಸಹಾಯಕ ಛಾಯಾಗ್ರಹಣ ಚರಣ್ ಆಚಾರ್ಯ, ಪ್ರಜ್ವಲ್ ಸುವರ್ಣ, ಸಂಗೀತ ರೋಹಿತ್ ಪೂಜಾರಿ, ಕಾರ್ಯಕಾರಿ ನಿರ್ಮಾಪಕರು ಮಹೇಶ್ ಪುತ್ತೂರು, ವೀರ ಕೇಸರಿ, ನಿರ್ಮಾಣ ನಿರ್ವಹಣೆ ವಾತ್ಸಲ್ಯ ಸಾಲಿಯಾನ್, ವರ್ಣಾಲಂಕಾರ ಚೇತನ್ ಕಲ್ಲಡ್ಕ, ಸಹಾಯಕ ವರ್ಣಾಲಂಕಾರ ಸವ್ಯರಾಜ್ ಕಲ್ಲಡ್ಕ, ಚರಣ್ ರಾಜ್ ಪಚ್ಚಿನಡ್ಕ, ಕಲಾ ನಿರ್ದೇಶನ ಭರತ್ ತುಳುವ, ಸಹ ನಿರ್ದೇಶಕ
ವೀರಕೇಸರಿ, ಭರತ್ ತುಳುವ, ವಿವೇಕ್ ಶೆಟ್ಟಿ, ಸಹಾಯಕ ನಿರ್ದೇಶಕರು ಸುದೇಶ್ ಪೂಜಾರಿ, ಮೋಕ್ಷಿತ್ ಕನಕಮಜಲು ಪವಿತ್ರಪ್ರಭು, ಅಮಿತ್, ಕೀರ್ತನ್ ರೈ ಸುಳ್ಯ, ವಸ್ತ್ರ ವಿನ್ಯಾಸ ಸವಿತ ಶೇಖರ್ ವಿದ್ಯಾ ಉಚ್ಚಿಲ್, ನೃತ್ಯ ನಿರ್ದೇಶನ ಶಶಾಂಕ್ ಸುವರ್ಣ, ಸಾಹಿತ್ಯ ಸುದೇಶ್ ಪೂಜಾರಿ, ಹರ್ಷಿತ್ ಸೋಮೇಶ್ವರ, ಹಿನ್ನಲೆ ಗಾಯನ ನಕುಲ್ ಅಭಯಂಕರ್, ಅರ್ಫಾಜ್ ಉಳ್ಳಾಲ್, ಸತೀಶ್ ಪಟ್ಲ, ಸೃಜನ್ ಕುಮಾರ್ ತೋನ್ಸೆ, ರೋಹಿತ್ ಪೂಜಾರಿ, ವಾತ್ಸಲ್ಯ ಸಾಲಿಯಾನದ, ಸೌಜನ್ಯ. ಪ್ರಚಾರ ವಿನ್ಯಾಸ ಪವನ್ ಆಚಾರ್ಯ ಬೋಳೂರು,

ರಚನೆ ಮತ್ತು ನಿರ್ದೇಶನ ಹರ್ಷಿತ್ ಸೋಮೇಶ್ವರ, ನಿರ್ಮಾಣ ಲಂಚ್ ಲಾಲ್, ಲೋಬಜೆಟ್ ಪ್ರೊಡಕ್ಷನ್, ಸಹ ನಿರ್ಮಾಣ: ಕಿಶೋರ್ ಡಿ ಶೆಟ್ಟಿ, ರಜನೀಶ್ ಕೋಟ್ಯಾನ್. “ಅನರ್ ಕಲಿ” ಸಿನಿಮಾ ಆಗೋಸ್ಟ್ 23 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿ 2025 ಏಪ್ರಿಲ್ 19, 20 ರಂದು ” ಮಲೆನಾಡು ಕಂಬಳಕ್ಕೆ” ಭರದ ಸಿದ್ಧತೆ

Next Post

ಕಾಸರಗೋಡಿನಲ್ಲಿ ನಕಲಿ ನೋಟು ತಯಾರಿಸಿ ಮಂಗಳೂರಿನಲ್ಲಿ ಚಲಾವಣೆ, ನಾಲ್ವರು ಖದೀಮರ ಸೆರೆ, 2.13 ಲಕ್ಷ ಮೌಲ್ಯದ 500ರ ಖೋಟಾ ನೋಟು ಪತ್ತೆ !

Related Posts

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.
ಸಿನಿಮಾ

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
27
“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ
ಸಿನಿಮಾ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
52
Next Post
ಕಾಸರಗೋಡಿನಲ್ಲಿ ನಕಲಿ ನೋಟು ತಯಾರಿಸಿ ಮಂಗಳೂರಿನಲ್ಲಿ ಚಲಾವಣೆ, ನಾಲ್ವರು ಖದೀಮರ ಸೆರೆ, 2.13 ಲಕ್ಷ ಮೌಲ್ಯದ 500ರ ಖೋಟಾ ನೋಟು ಪತ್ತೆ !

ಕಾಸರಗೋಡಿನಲ್ಲಿ ನಕಲಿ ನೋಟು ತಯಾರಿಸಿ ಮಂಗಳೂರಿನಲ್ಲಿ ಚಲಾವಣೆ, ನಾಲ್ವರು ಖದೀಮರ ಸೆರೆ, 2.13 ಲಕ್ಷ ಮೌಲ್ಯದ 500ರ ಖೋಟಾ ನೋಟು ಪತ್ತೆ !

Discussion about this post

Recent News

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
8
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
101
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

September 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d