ಹಾಸನ: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್(67) ಅವರು ಮಂಗಳವಾರ ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಮೃತರು ಅಗಲಿದ್ದಾರೆ. ಕಳೆದೊಂದು ವರ್ಷದಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಇವರು, ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.
1959ರಲ್ಲಿ ಜನಿಸಿದ್ದ ಬಿ.ಸಿ.ನಾಗೇಶ್ ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008 ಮತ್ತು 2018ರಲ್ಲಿ ಜಯ ಗಳಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. ಈ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಶಾಲಾ ಸಮವಸ್ತ್ರ ನಿಯಮ, ಶಿಕ್ಷಣದಲ್ಲಿ ಮೌಲ್ಯವರ್ಧನೆ ಮುಂತಾದ ವಿಚಾರಗಳಲ್ಲಿ ಮಹತ್ವದ ಸುಧಾರಣೆ ತಂದಿದ್ದರು.
ಆರ್ಎಸ್ಎಸ್ ಕಟ್ಟಾಳು: ಆರ್ಎಸ್ಎಸ್ ಕಟ್ಟಾಳುವಾಗಿದ್ದ ಬಿ.ಸಿ.ನಾಗೇಶ್ ರಾಜಕೀಯ ಜೀವನದಲ್ಲಿ ಶಿಸ್ತು, ಸರಳತೆ ಕಾಪಾಡಿಕೊಂಡು ಬಂದಿದ್ದರು. 1984ರಲ್ಲಿ ಬಿಜೆಪಿ ಸೇರಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.
ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇಂದು (ಆ.19) ಬೆಳಗ್ಗೆ 7 ಗಂಟೆಯಿಂದ 8 ಗಂಟೆಯ ವರೆಗೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಾರ್ಥಿವ ಶರೀರದ ದರ್ಶನ ವ್ಯವಸ್ಥೆ ಇರುತ್ತದೆ ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
Discover more from Coastal Times Kannada
Subscribe to get the latest posts sent to your email.








Discussion about this post