• About us
  • Contact us
  • Disclaimer
Tuesday, May 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಒಂದೇ ಕುಟುಂಬದ ಐವರು ಆತ್ಮಹತ್ಯೆ, 5 ದಿನಗಳಿಂದ ಮೃತ ಶರೀರಗಳ ಮುಂದೆ ಹಸಿದು ಕುಳಿತಿದ್ದ 3 ವರ್ಷದ ಮಗು

Coastal Times by Coastal Times
September 19, 2021
in ರಾಜ್ಯ
ಒಂದೇ ಕುಟುಂಬದ ಐವರು ಆತ್ಮಹತ್ಯೆ, 5 ದಿನಗಳಿಂದ  ಮೃತ ಶರೀರಗಳ ಮುಂದೆ ಹಸಿದು ಕುಳಿತಿದ್ದ 3 ವರ್ಷದ ಮಗು
41
VIEWS
WhatsappTelegramShare on FacebookShare on Twitter

ಬೆಂಗಳೂರು ಸೆ.18 : ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯನ್ನು ಒಂದೇ ಕುಟುಂಬದ ಐದು ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದಿಂದ ಮನೆಯಲ್ಲಿರುವ ಐದು ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಐವರು ನೇಣು ಬಿಗಿದ ಸ್ಥಿತಿಯಲ್ಲಿದ್ದು, ಐದು ದಿನಗಳ ಹಿಂದೆ ಘಟನೆ ನಡೆದಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಅದೃಷ್ಟವಶಾತ್​ ಮೂರು ವರ್ಷದ ಮಗು ಬದುಕುಳಿದಿದ್ದು, ಮೃತ ಶರೀರಗಳ ಮುಂದೆ ಹಸಿವಿನಿಂದ ಕುಳಿತಿತ್ತು ಎನ್ನಲಾಗಿದೆ.

ಮೃತರನ್ನು ಭಾರತಿ (50), ಸಿಂಚನ (33), ಸಿಂಧೂರಾಣಿ (30), ಮಧುಸಾಗರ್​ (26) ಮತ್ತು ಒಂಭತ್ತು ತಿಂಗಳ ಮಗು ಎಂದು ಗುರುತಿಸಲಾಗಿದೆ. ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮನೆಯ ಹಾಲ್​ನಲ್ಲಿ ತಾಯಿ ಭಾರತಿ, ರೂಮಿನಲ್ಲಿ ಮಗಳು ಸಿಂಧೂರಾಣಿ ನೇಣು ಹಾಕಿಕೊಂಡಿದ್ದಾರೆ. ಘಟನೆ ನಡೆದಾಗ ಗಂಡ ಶಂಕರ್​ ಮನೆಯಲ್ಲಿ ಇರಲಿಲ್ಲ. ಯಾವುದೋ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ಎಂದು ಹೇಳಲಾಗಿದೆ. ನಿನ್ನೆ ಮನೆಗೆ ಬಂದು ನೋಡಿದಾಗ ಲಾಕ್​ ಆಗಿತ್ತು, ನಂತರ ಮನೆಯಲ್ಲಿ ಯಾರೂ ಇಲ್ಲವೆಂದು ತಿಳಿದು ವಾಪಸ್​ ಹೋಗಿದ್ದೆ. ಮತ್ತೆ ಇಂದು ಬಂದು ನೋಡಿದಾಗಲೂ ಯಾರೂ ಪ್ರತಿಕ್ರಿಯೆ ಕೊಡಲಿಲ್ಲ, ಇದರಿಂದ ಭಯಕ್ಕೀಡಾಗಿ ಬಾಗಿಲು ಒಡೆದಾಗ ಎಲ್ಲರೂ ಸಾವನ್ನಪ್ಪಿದ್ದರು ಎಂದು ಗಂಡ ಶಂಕರ್​ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಎಲ್ಲಾ ಶರೀರವೂ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಸುಮಾರು ಐದು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಶಂಕರ್​ ಕೂಡಾ ಮನೆ ಬಿಟ್ಟು ಹೋಗಿ ಐದು ದಿನಗಳಾಗಿದೆ. ಮನೆಯ ಯಜಮಾನನ ಹೆಸರು ಹಲ್ಲಗೇರಿ ಶಂಕರ್​ ಎಂದು. ಈತನ ಬಗ್ಗೆ ಹೆಚ್ಚಿನ ಮಾಹಿತಿ ಸಧ್ಯಕ್ಕೆ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್​ ಪಾಟೀಲ್​ ಭೇಟಿ ನೀಡಿ, ತನಿಖೆಯ ಉಸ್ತುವಾರಿ ವಹಿಸಿದ್ದಾರೆ.

ಮಗಳು ಸಿಂಧೂರಾಣಿಗೆ ಮದುವೆಯಾಗಿದ್ದರೂ, ಗಂಡನ ಜೊತೆ ಗಲಾಟೆ ಮಾಡಿಕೊಂಡು ಮನೆಬಿಟ್ಟು ಬಂದಿದ್ದಳು ಎನ್ನಲಾಗಿದೆ. ಶಂಕರ್​ ಹಲವು ಬಾರಿ ಅಳಿಯನ ಮನೆಗೆ ಹೋಗುವಂತೆ ಹೇಳಿದರೂ, ಆಕೆ ಹೋಗದ ಹಿನ್ನೆಲೆ ಐದು ದಿನಗಳ ಹಿಂದೆ ಜಗಳವಾಗಿದೆ. ಜಗಳ ಮಾಡಿಕೊಂಡು ಶಂಕರ್​ ಮನೆಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಇದೀಗ ಪೊಲೀಸರು ಅಳಿಯನನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಅದೃಷ್ಟವಶಾತ್​ ಬದುಕುಳಿದ ಮೂರು ವರ್ಷದ ಮಗು, ಹಸಿವಿನಿಂದ ಬಳಲಿದೆ. ಆಸ್ಪತ್ರೆಗೆ ಮಗುವನ್ನು ಕರೆದೊಯ್ದು ತಪಾಸಣೆ ಮಾಡಲಾಗಿದ್ದು, ಮಗುವಿನ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ ಜಿಲ್ಲಾಡಳಿತ: ವಿಶ್ವಕರ್ಮ ಜಯಂತಿ

Next Post

ಪಣೋಲಿಬೈಲಿನಲ್ಲಿ ಮಹಿಳೆಯ ಕರಿಮಣಿಸರ ಕದ್ದ ಪ್ರಕರಣ – ಇಬ್ಬರು ಯುವಕರ ಬಂಧನ

Related Posts

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್
ರಾಜ್ಯ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್

April 8, 2025
68
ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ
ರಾಜ್ಯ

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ

March 26, 2025
83
Next Post
ಪಣೋಲಿಬೈಲಿನಲ್ಲಿ ಮಹಿಳೆಯ ಕರಿಮಣಿಸರ ಕದ್ದ ಪ್ರಕರಣ – ಇಬ್ಬರು ಯುವಕರ ಬಂಧನ

ಪಣೋಲಿಬೈಲಿನಲ್ಲಿ ಮಹಿಳೆಯ ಕರಿಮಣಿಸರ ಕದ್ದ ಪ್ರಕರಣ - ಇಬ್ಬರು ಯುವಕರ ಬಂಧನ

Discussion about this post

Recent News

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
45
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d