• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅ.25ರಿಂದ 1 – 5ನೇ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್

Coastal Times by Coastal Times
October 19, 2021
in ರಾಜ್ಯ
ಅ.25ರಿಂದ 1 – 5ನೇ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್
13
VIEWS
WhatsappTelegramShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಕೋವಿಡ್-19 ತಜ್ಞರ ಸಮಿತಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆ ಮೇರೆಗೆ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳನ್ನು ಪುನಾರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ಕಳೆದ 20 ತಿಂಗಳಿಗೂ ಹೆಚ್ಚು ಕಾಲದಿಂದ ಮಕ್ಕಳು ಭೌತಿಕ ತರಗತಿಗಳಿಂದ ದೂರ ಉಳಿದಿದ್ದಾರೆ. ಅವರಿಗೆ ರೂಢಿಯಾಗಲೆಂದು ಮೊದಲ ಒಂದು ವಾರ ಮಧ್ಯಾಹ್ನದವರೆಗೆ ಮಾತ್ರ ತರಗತಿಗಳನ್ನು ನಡೆಸಲಾಗುತ್ತದೆ. ನಂತರ ಪೂರ್ಣ ಪ್ರಮಾಣದಲ್ಲಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಮಕ್ಕಳು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಲು ಡಿಡಿಪಿಐಗಳು ಮತ್ತು ಬಿಇಒಗಳು, ಶಿಕ್ಷಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಮಕ್ಕಳಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಲು ಕೋವಿಡ್ ಸೋಂಕಿನ ಕುರಿತು ತರಗತಿ ಅವಧಿಯಲ್ಲಿ ಮಾಹಿತಿಯನ್ನು ನೀಡಬೇಕು ಎಂದು ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

‘ದೈಹಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ತರಗತಿಗಳಲ್ಲಿ ಶೇ.50ರಷ್ಟು ಹಾಜರಾತಿಗೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. ಕೊಠಡಿಯಲ್ಲಿ ಅಂತರ ಕಾಪಾಡಿಕೊಳ್ಳಲು ಸಾಕಷ್ಟು ಜಾಗ, ಮೂಲಸೌಕರ್ಯ ಲಭ್ಯವಿದ್ದಲ್ಲಿ ಅಂತಹ ಕಡೆಗಳಲ್ಲಿ ಶೇ.50ಕ್ಕಿಂತ ಹೆಚ್ಚು ಮಕ್ಕಳು ಹಾಜರಾಗಲು ಯಾವುದೇ ಸಮಸ್ಯೆಯಾಗುವುದಿಲ್ಲ’ ಎಂದು ಸಚಿವರು ನುಡಿದರು.

‘ಅನೇಕ ತಾಲೂಕುಗಳಲ್ಲಿ ಅನೇಕ ದಿನಗಳಿಂದ ಪಾಸಿಟಿವಿಟಿ ಪ್ರಮಾಣ ಶೂನ್ಯವಿದೆ. ಹೀಗಾಗಿ, ಭೌತಿಕ ತರಗತಿಗಳ ಆರಂಭಕ್ಕೆ ಯಾವುದೇ ಆತಂಕವಿಲ್ಲ’ ಎಂದು ಸಚಿವರು ಹೇಳಿದರು.

‘ಕೋವಿಡ್-19 ಹಿನ್ನೆಲೆಯಲ್ಲಿ ದೈಹಿಕ ತರಗತಿಗಳಿಂದ ದೂರ ಉಳಿದ ಪರಿಣಾಮ ಮಕ್ಕಳಲ್ಲಿ ಉಂಟಾಗಿರುವ ಶೈಕ್ಷಣಿಕ ಹಿನ್ನೆಡೆಯನ್ನು ಸರಿದೂಗಿಸಿ ಶಾಲೆಗಳನ್ನು ಆರಂಭಿಸಬೇಕು ಎಂಬ ಉದ್ದೇಶ ಬಹಳ ದಿನಗಳಿಂದ ಇತ್ತು. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ಆರಂಭಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದ್ದಾರೆ. ಅದರಂತೆ ತರಗತಿಗಳನ್ನು ಆರಂಭಿಸಲಾಗುತ್ತಿದೆ’ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

‘ಪಠ್ಯಕ್ರಮವನ್ನು ಕಡಿತಗೊಳಿಸುವ ಪ್ರಸ್ತಾಪ ಇಲ್ಲ. ನಿಗದಿತ ಅವಧಿಯಲ್ಲಿ ಪಠ್ಯವನ್ನು ಯಾವ ರೀತಿ ಪೂರ್ಣಗೊಳಿಸಬೇಕು ಎಂಬ ಕುರಿತು ಶಿಕ್ಷಕರು, ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದು ಸಚಿವರು ತಿಳಿಸಿದರು.

ನವೆಂಬರ್ 2ರಿಂದ ಶನಿವಾರದಂದು ಕೂಡ ತರಗತಿಗಳನ್ನು ನಡೆಸಲಾಗುತ್ತದೆ. ತರಗತಿಗಳಿಗೆ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಿಲ್ಲ. ಆನ್‌ಲೈನ್ ತರಗತಿಗಳನ್ನು ಮುಂದುವರೆಸಬಹುದು. ಆದರೆ, ಬಹುತೇಕ ಶಾಲೆಗಳಲ್ಲಿ ಭೌತಿಕ ಹಾಜರಾತಿಗೆ ಮಕ್ಕಳು ಮತ್ತು ಪಾಲಕರು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿಯಂತೆ ಶಾಲೆಗಳಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಲು ಶಿಕ್ಷಣ ಇಲಾಖೆಯಿಂದ ಪ್ರತ್ಯೇಕವಾಗಿ ಮಾರ್ಗಸೂಚಿ ಹೊರಡಿಸಲಾಗುತ್ತದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯ ಹಿರಿಯ ನಟ ಶಂಕರ್ ರಾವ್ ನಿಧನ

Next Post

ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
133
Next Post
ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ

ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ

Discussion about this post

Recent News

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
58
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d