• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅ.25ರಿಂದ 1 – 5ನೇ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್

Coastal Times by Coastal Times
October 19, 2021
in ರಾಜ್ಯ
ಅ.25ರಿಂದ 1 – 5ನೇ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್
8
VIEWS
WhatsappTelegramShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಕೋವಿಡ್-19 ತಜ್ಞರ ಸಮಿತಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆ ಮೇರೆಗೆ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳನ್ನು ಪುನಾರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ಕಳೆದ 20 ತಿಂಗಳಿಗೂ ಹೆಚ್ಚು ಕಾಲದಿಂದ ಮಕ್ಕಳು ಭೌತಿಕ ತರಗತಿಗಳಿಂದ ದೂರ ಉಳಿದಿದ್ದಾರೆ. ಅವರಿಗೆ ರೂಢಿಯಾಗಲೆಂದು ಮೊದಲ ಒಂದು ವಾರ ಮಧ್ಯಾಹ್ನದವರೆಗೆ ಮಾತ್ರ ತರಗತಿಗಳನ್ನು ನಡೆಸಲಾಗುತ್ತದೆ. ನಂತರ ಪೂರ್ಣ ಪ್ರಮಾಣದಲ್ಲಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಮಕ್ಕಳು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಲು ಡಿಡಿಪಿಐಗಳು ಮತ್ತು ಬಿಇಒಗಳು, ಶಿಕ್ಷಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಮಕ್ಕಳಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಲು ಕೋವಿಡ್ ಸೋಂಕಿನ ಕುರಿತು ತರಗತಿ ಅವಧಿಯಲ್ಲಿ ಮಾಹಿತಿಯನ್ನು ನೀಡಬೇಕು ಎಂದು ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

‘ದೈಹಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ತರಗತಿಗಳಲ್ಲಿ ಶೇ.50ರಷ್ಟು ಹಾಜರಾತಿಗೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. ಕೊಠಡಿಯಲ್ಲಿ ಅಂತರ ಕಾಪಾಡಿಕೊಳ್ಳಲು ಸಾಕಷ್ಟು ಜಾಗ, ಮೂಲಸೌಕರ್ಯ ಲಭ್ಯವಿದ್ದಲ್ಲಿ ಅಂತಹ ಕಡೆಗಳಲ್ಲಿ ಶೇ.50ಕ್ಕಿಂತ ಹೆಚ್ಚು ಮಕ್ಕಳು ಹಾಜರಾಗಲು ಯಾವುದೇ ಸಮಸ್ಯೆಯಾಗುವುದಿಲ್ಲ’ ಎಂದು ಸಚಿವರು ನುಡಿದರು.

‘ಅನೇಕ ತಾಲೂಕುಗಳಲ್ಲಿ ಅನೇಕ ದಿನಗಳಿಂದ ಪಾಸಿಟಿವಿಟಿ ಪ್ರಮಾಣ ಶೂನ್ಯವಿದೆ. ಹೀಗಾಗಿ, ಭೌತಿಕ ತರಗತಿಗಳ ಆರಂಭಕ್ಕೆ ಯಾವುದೇ ಆತಂಕವಿಲ್ಲ’ ಎಂದು ಸಚಿವರು ಹೇಳಿದರು.

‘ಕೋವಿಡ್-19 ಹಿನ್ನೆಲೆಯಲ್ಲಿ ದೈಹಿಕ ತರಗತಿಗಳಿಂದ ದೂರ ಉಳಿದ ಪರಿಣಾಮ ಮಕ್ಕಳಲ್ಲಿ ಉಂಟಾಗಿರುವ ಶೈಕ್ಷಣಿಕ ಹಿನ್ನೆಡೆಯನ್ನು ಸರಿದೂಗಿಸಿ ಶಾಲೆಗಳನ್ನು ಆರಂಭಿಸಬೇಕು ಎಂಬ ಉದ್ದೇಶ ಬಹಳ ದಿನಗಳಿಂದ ಇತ್ತು. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ಆರಂಭಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದ್ದಾರೆ. ಅದರಂತೆ ತರಗತಿಗಳನ್ನು ಆರಂಭಿಸಲಾಗುತ್ತಿದೆ’ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

‘ಪಠ್ಯಕ್ರಮವನ್ನು ಕಡಿತಗೊಳಿಸುವ ಪ್ರಸ್ತಾಪ ಇಲ್ಲ. ನಿಗದಿತ ಅವಧಿಯಲ್ಲಿ ಪಠ್ಯವನ್ನು ಯಾವ ರೀತಿ ಪೂರ್ಣಗೊಳಿಸಬೇಕು ಎಂಬ ಕುರಿತು ಶಿಕ್ಷಕರು, ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದು ಸಚಿವರು ತಿಳಿಸಿದರು.

ನವೆಂಬರ್ 2ರಿಂದ ಶನಿವಾರದಂದು ಕೂಡ ತರಗತಿಗಳನ್ನು ನಡೆಸಲಾಗುತ್ತದೆ. ತರಗತಿಗಳಿಗೆ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಿಲ್ಲ. ಆನ್‌ಲೈನ್ ತರಗತಿಗಳನ್ನು ಮುಂದುವರೆಸಬಹುದು. ಆದರೆ, ಬಹುತೇಕ ಶಾಲೆಗಳಲ್ಲಿ ಭೌತಿಕ ಹಾಜರಾತಿಗೆ ಮಕ್ಕಳು ಮತ್ತು ಪಾಲಕರು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿಯಂತೆ ಶಾಲೆಗಳಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಲು ಶಿಕ್ಷಣ ಇಲಾಖೆಯಿಂದ ಪ್ರತ್ಯೇಕವಾಗಿ ಮಾರ್ಗಸೂಚಿ ಹೊರಡಿಸಲಾಗುತ್ತದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯ ಹಿರಿಯ ನಟ ಶಂಕರ್ ರಾವ್ ನಿಧನ

Next Post

ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ

ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d