• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ : ಪ್ರತೀಕಾರಕ್ಕೆ ದಾಳಿ ನಡೆದಿರುವ ಶಂಕೆ

Coastal Times by Coastal Times
October 19, 2021
in ಕ್ರೈಮ್ ನ್ಯೂಸ್
ಮಂಗಳೂರು: ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ : ಪ್ರತೀಕಾರಕ್ಕೆ ದಾಳಿ ನಡೆದಿರುವ ಶಂಕೆ
49
VIEWS
WhatsappTelegramShare on FacebookShare on Twitter

ಉಳ್ಳಾಲ, ಅ.19: ಇಲ್ಲಿಗೆ ಸಮೀಪದ ಕೊಣಾಜೆ ವಿ.ವಿ ಕ್ಯಾಂಪಸ್ ಹಾಸ್ಟೆಲ್ ಬಳಿ ಬಿಜೆಪಿ ಮುಖಂಡರೊಬ್ಬರ ಮೇಲೆ ಮೂವರು ಅಪರಿಚಿತ ದುಷ್ಕರ್ಮಿಗಳು ತಲವಾರು ನಡೆಸಿದ ಘಟನೆ ಅ. 18 ರಂದು ರಾತ್ರಿ ನಡೆದಿದೆ.

ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕೊಣಾಜೆ ವಿವಿ ಆವರಣದ ಹಾಸ್ಟೆಲ್ ಬಳಿಯ ದುರ್ಗಾ ಫ್ಯಾನ್ಸಿ & ಜನರಲ್ ಸ್ಟೋರ್ ನ ಮಾಲಕರಾದ ಪ್ರಕಾಶ್ ಶೆಟ್ಟಿ(41) ದಾಳಿಗೆ ಒಳಗಾದ ಬಿಜೆಪಿ ಮುಖಂಡ. ಪ್ರಕಾಶ್ ಬಲ ಕೈಗೆ ತಲವಾರಿನ ಏಟು ತಗಲಿದ್ದು ಈ ಬಗ್ಗೆ ಅವರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ.
ಅಪಾಯವನ್ನು ಮೊದಲೇ ಊಹಿಸಿ ತಲವಾರು ದಾಳಿಯ ವೇಳೆ ಚಾಕಚಕ್ಯತೆಯಿಂದ ತಪ್ಪಿಸಿಕೊಂಡು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಕಾಶ್‌ ಶೆಟ್ಟಿಯವರು ಅಪಾಯದಿಂದ ಪಾರಾಗಿದ್ದಾರೆ. ಬೈಕಿನಲ್ಲಿ ಹೊಂಚು ಹಾಕಿ ಕೂತಿದ್ದ ಮೂವರು ಅಪರಿಚಿತರು ಕೃತ್ಯ ಎಸಗಿದವರು ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ 9.30 ಗಂಟೆಯ ಸುಮಾರಿಗೆ ಪ್ರಕಾಶ್‌ ರವರು ಅಂಗಡಿ ಬಂದ್ ಮಾಡಿ ಬೈಕ್‌ ನಲ್ಲಿ ಮನೆ ಕಡೆಗೆ ಹೊರಟ್ಟಿದ್ದ ವೇಳೆ ದಾಳಿ ನಡೆದಿದೆ. ಅಂಗಡಿ ಬಂದ್‌ ಮಾಡುವ ವೇಳೆ ಸ್ವಲ್ಪ ದೂರದಲ್ಲಿ ಕಪ್ಪು ಬಣ್ಣದ ಪಲ್ಸರ್ ಬೈಕಿನಲ್ಲಿ ಮೂವರು ಶಂಕಾಸ್ಪದವಾಗಿ ಕೂತಿರುವುದನ್ನು ಪ್ರಕಾಶ್‌ ಗಮನಿಸಿದ್ದಾರೆ. ಅಂಗಡಿ ಬಂದ್‌ ಮಾಡಿ ಪ್ರಕಾಶ್ ಅವರು ತನ್ನ ಪರಿಚಯಸ್ಥ ಮಂಜುನಾಥ್ ಎಂಬವರ ಬೈಕ್ ನಲ್ಲಿ ಮನೆ ಕಡೆಗೆ ಹೊರಟಿದ್ದಾರೆ. ಈ ವೇಳೆ ಹಿಂದಿನಿಂದ ಬೈಕ್ ನಲ್ಲಿ ಹಿಂಬಾಲಿಸಿ ಕೊಂಡು ಬಂದ ಆರೋಪಿಗಳು ಪ್ರಕಾಶ ಅವರನ್ನು ಗುರಿಯಾಗಿಸಿ ತಲವಾರು ಬೀಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಪಾಯದ ಮುನ್ಸೂಚನೆ ಅರಿತ ಪ್ರಕಾಶ್ ಶೆಟ್ಟಿ ತಲವಾರು ಏಟನ್ನು ತಪ್ಪಿಸಲು ಯತ್ನಿಸಿದಾಗ ಇವರ ಬೈಕ್ ಉರುಳಿ ಬಿದ್ದಿದೆ. ಕೂಡಲೇ ಬೈಕ್ ಚಾಲಕ ಮತ್ತು ಪ್ರಕಾಶ್ ಹತ್ತಿರದ ಜನ ವಸತಿ ಸ್ಥಳಕ್ಕೆ ಓಡಿ ಬಚಾವಾಗಿದ್ದಾರೆ.

ಪ್ರತೀಕಾರಕ್ಕೆ ದಾಳಿ ನಡೆದಿರುವ ಶಂಕೆ:

ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕ ಉಸ್ಮಾನ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯ ಬಂಧನಕ್ಕೆ ಪ್ರಕಾಶ್ ಶೆಟ್ಟಿ ಒತ್ತಡ ಹೇರಿದ್ದರು ಎನ್ನಲಾಗಿದೆ. ಇದಲ್ಲದೆ ಸಮಾಜ ಘಾತುಕ ದುಷ್ಕೃತ್ಯಗಳ ವಿರುದ್ಧ ಪ್ರಕಾಶ್ ಶೆಟ್ಟಿ ಹೋರಾಟ ನಡೆಸುತ್ತಾ ಬಂದಿದ್ದರು. ಇದೇ ನೆಲೆಯಲ್ಲಿ ಪ್ರತೀಕಾರ ತೀರಿಸಲು ತಲವಾರು ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಫಸ್ಟ್ ನ್ಯೂರೋ- ಜಾಗೃತಿ ಮೂಡಿಸುವ ವಾಹನ ಸಂಚಾರ ಅಭಿಯಾನಕ್ಕೆ ಚಾಲನೆ

Next Post

ಬಂಟ ಸಮುದಾಯಕ್ಕೆ ಅವಮಾನ: ಚೈತ್ರ ಕುಂದಾಪುರ ವಿರುದ್ಧ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆರೋಪ

Related Posts

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ
ಕ್ರೈಮ್ ನ್ಯೂಸ್

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ

June 16, 2025
101
ಓದಲು ಬಂದ ವಿದೇಶಿ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಜಪ್ತಿ
ಕ್ರೈಮ್ ನ್ಯೂಸ್

ಓದಲು ಬಂದ ವಿದೇಶಿ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಜಪ್ತಿ

June 13, 2025
41
Next Post
ಬಂಟ ಸಮುದಾಯಕ್ಕೆ ಅವಮಾನ: ಚೈತ್ರ ಕುಂದಾಪುರ ವಿರುದ್ಧ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆರೋಪ

ಬಂಟ ಸಮುದಾಯಕ್ಕೆ ಅವಮಾನ: ಚೈತ್ರ ಕುಂದಾಪುರ ವಿರುದ್ಧ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆರೋಪ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
46
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d