• About us
  • Contact us
  • Disclaimer
Thursday, March 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ ಸಮುದಾಯಕ್ಕೆ ಅವಮಾನ: ಚೈತ್ರ ಕುಂದಾಪುರ ವಿರುದ್ಧ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆರೋಪ

Coastal Times by Coastal Times
October 19, 2021
in ಕರಾವಳಿ
ಬಂಟ ಸಮುದಾಯಕ್ಕೆ ಅವಮಾನ: ಚೈತ್ರ ಕುಂದಾಪುರ ವಿರುದ್ಧ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆರೋಪ
32
VIEWS
WhatsappTelegramShare on FacebookShare on Twitter

ಮಂಗಳೂರು: ‘ಸುರತ್ಕಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚೈತ್ರಾ ಕುಂದಾಪುರ ಎನ್ನುವವರು ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಆಕೆ ಈ ಆರೋಪವನ್ನು ಸಾಬೀತುಪಡಿಸಲಿ ಇಲ್ಲವಾದಲ್ಲಿ, ಜಿಲ್ಲೆಯ ಮಹಿಳೆಯರ ಕ್ಷಮೆ ಕೇಳಲಿ’ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆಗ್ರಹಿಸಿದರು.

ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಂಟ ಸಮುದಾಯಕ್ಕೆ ಸೇರಿದವರು ಅವರದೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿರುವಾಗ, ಚೈತ್ರಾ ಮಾತನಾಡಿರುವ ಕ್ಷೇತ್ರದ ಶಾಸಕರು ಕೂಡ ಅದೇ ಸಮುದಾಯಕ್ಕೆ ಸೇರಿದವರಾಗಿರುವಾಗ, ಅವರೇನಾದರೂ ಈ ಬಗ್ಗೆ ಮಾತನಾಡಲು ಪ್ರೇರೇಪಿಸಿದರೇ ಎಂಬುದನ್ನು ಚೈತ್ರಾ ಸ್ಪಷ್ಟಪಡಿಸಬೇಕು’ ಎಂದರು.

‘ಹಿಂದೆ ವರದಕ್ಷಿಣೆ ಪಿಡುಗು ಜಾಸ್ತಿ ಇದ್ದಾಗ ಬಹಳಷ್ಟು ಹೆಣ್ಣು ಮಕ್ಕಳು ಮದುವೆ ಆಗದೆ ಬಾಕಿಯಾಗಿದ್ದಾರೆ. ಅಂತಹವರಿಗೆ ಅವಮಾನ ಮಾಡಿದಂತಾಗಿದೆ. ನೀವು ಯಾವಾಗ ಮದುವೆ ಆಗುತ್ತೀರಿ, ಎಷ್ಟು ವರ್ಷದೊಳಗೆ ಆಗುತ್ತೀರಿ ಎನ್ನುವುದನ್ನು ಹೇಳಿ. ಇನ್ನೊಬ್ಬರ ಮಕ್ಕಳ ಬಗ್ಗೆ ನೀವು ನಿರ್ಧರಿಸುವ ಅಗತ್ಯವಿಲ್ಲ. ನಿಮ್ಮ ಬಳಿ ಈ ಮಾತನ್ನು ಯಾರು ಹೇಳಿಸಿದ್ದು ಎಂದು ಬಹಿರಂಗಗೊಳಿಸಿ. ಹಿಂದೂ ಹೆಣ್ಣು ಮಗಳು ಇನ್ನೊಬ್ಬ ಹೆಣ್ಣಿಗೆ ಆರೋಪ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ’ ಎಂದು ತಿರುಗೇಟು ನೀಡಿದರು.

‘ಬಿಲ್ಲವ ಸಮುದಾಯದ ಪೂಜನೀಯ ಕೋಟಿ–ಚನ್ನಯರ ಕೈಯಲ್ಲಿದ್ದ ಆಯುಧ ಸುರ್ಯವನ್ನು ತಲವಾರಿಗೆ ಹೋಲಿಸಿ ಮಾತನಾಡಿದ್ದೀರಿ. ನಿಮಗೆ ಕರಾವಳಿ ಮಣ್ಣಿನ ಗುಣವೇ ಗೊತ್ತಿಲ್ಲ’ ಎಂದು ಆರೋಪಿಸಿದ ಶಕುಂತಳಾ ಶೆಟ್ಟಿ, ಅದೇ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಈ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.

‘ಮಕ್ಕಳು ದಾರಿ ತಪ್ಪುತ್ತಿದ್ದಾರೆಂಬ ಅನುಮಾನ ಇದ್ದರೆ ಅವರ ಹೆತ್ತವರಿಗೆ ತಿಳಿಸಿ, ಮಕ್ಕಳ ಮೇಲೆ ನಿಗಾ ಇರಿಸಲು ತಿಳಿಸಿ. ತಪ್ಪು ಕಂಡಲ್ಲಿ ಪೊಲೀಸರಿಗೆ ಮಾಹಿತಿ ನೀಡಿ. ಅದನ್ನು ಬಿಟ್ಟು ಲವ್ ಜಿಹಾದ್ ಹೆಸರಿನಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಬೇಡಿ’ ಎಂದು ಕಿವಿಮಾತು ಹೇಳಿದರು.

ಅನೈತಿಕ ಪೊಲೀಸ್‌ಗಿರಿಯನ್ನು ಪ್ರಶ್ನಿಸುವ ಮಹಿಳೆಯರನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಅವಮಾನಿಸುವುದು ಹಿಂದೂ ಧರ್ಮದ ಸಂಸ್ಕೃತಿಯಲ್ಲ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಮಮತಾ ಗಟ್ಟಿ, ಅಪ್ಪಿ, ಮಲ್ಲಿಕಾ ಪಕ್ಕಳ, ಸುರೇಖಾ ಚಂದ್ರಹಾಸ್, ಚಂದ್ರಕಲಾ ಜೋಗಿ, ತನ್ವೀರ್, ಗೀತಾ ಅತ್ತಾವರ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ : ಪ್ರತೀಕಾರಕ್ಕೆ ದಾಳಿ ನಡೆದಿರುವ ಶಂಕೆ

Next Post

ಉಳ್ಳಾಲ ಹಾಡುಹಗಲು ನಡು ರಸ್ತೆಯಲ್ಲಿ ಯುವಕನಿಗೆ ಚೂರಿ ಇರಿತ : ಮಾನವೀಯತೆ ಮೆರೆದ ಎಸ್.ಡಿ.ಪಿ.ಐ ಕಾರ್ಯಕರ್ತರು

Related Posts

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
ಕರಾವಳಿ

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
25
ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್
ಕರಾವಳಿ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
65
Next Post
ಉಳ್ಳಾಲ ಹಾಡುಹಗಲು ನಡು ರಸ್ತೆಯಲ್ಲಿ ಯುವಕನಿಗೆ ಚೂರಿ ಇರಿತ :  ಮಾನವೀಯತೆ ಮೆರೆದ ಎಸ್.ಡಿ.ಪಿ.ಐ ಕಾರ್ಯಕರ್ತರು

ಉಳ್ಳಾಲ ಹಾಡುಹಗಲು ನಡು ರಸ್ತೆಯಲ್ಲಿ ಯುವಕನಿಗೆ ಚೂರಿ ಇರಿತ : ಮಾನವೀಯತೆ ಮೆರೆದ ಎಸ್.ಡಿ.ಪಿ.ಐ ಕಾರ್ಯಕರ್ತರು

Discussion about this post

Recent News

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
151
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d