ನೆಲ್ಯಾಡಿ: ಕೊಕ್ಕಡ ಗ್ರಾಮದ ಪುತ್ಯೆಯ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರಂದು ಮಧ್ಯಾಹ್ನ ನಡೆದಿದೆ.
ಕೊಕ್ಕಡ ಸಮೀಪದ ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ ರಶ್ಮಿತಾ(28ವ.) ಆತ್ಮಹತ್ಯೆ ಮಾಡಿಕೊಂಡವರು. ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದು ಮನೆಗೆ ಬಂದ ಆಕೆಯ ಪತಿ ರಾಜೇಶ್ ಆತ್ಮಹತ್ಯೆಗೆ ಮುಂದಾಗಿದ್ದು ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
Discussion about this post