• About us
  • Contact us
  • Disclaimer
Thursday, February 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕೇಂದ್ರ ಸರ್ಕಾರದ MSME ಸಾಲ ಯೋಜನೆ ಹೆಸರಲ್ಲಿ ನಕಲಿ ಕಂಪನಿ ಸೃಷ್ಟಿಸಿ ಎಸ್ ಬಿಐ ಬ್ಯಾಂಕ್ ಗೆ 1.30 ಕೋಟಿ ವಂಚನೆ, ಬ್ಯಾಂಕ್ ಮ್ಯಾನೇಜರ್ ಸಹಿತ ಎಲ್ಲಾ ಆರೋಪಿಗಳು ಅರೆಸ್ಟ್

Coastal Times by Coastal Times
October 19, 2025
in ಕ್ರೈಮ್ ನ್ಯೂಸ್
ಮಂಗಳೂರು: ಕೇಂದ್ರ ಸರ್ಕಾರದ MSME ಸಾಲ ಯೋಜನೆ ಹೆಸರಲ್ಲಿ ನಕಲಿ ಕಂಪನಿ ಸೃಷ್ಟಿಸಿ ಎಸ್ ಬಿಐ ಬ್ಯಾಂಕ್ ಗೆ 1.30 ಕೋಟಿ ವಂಚನೆ, ಬ್ಯಾಂಕ್ ಮ್ಯಾನೇಜರ್ ಸಹಿತ ಎಲ್ಲಾ ಆರೋಪಿಗಳು ಅರೆಸ್ಟ್
363
VIEWS
WhatsappTelegramShare on FacebookShare on Twitter

ಮಂಗಳೂರು, ಅ.18 : ನಕಲಿ ಕಂಪನಿಗಳನ್ನು ಸೃಷ್ಟಿಸಿ ಕೇಂದ್ರ ಸರಕಾರದ MSME ಸಾಲ ಯೋಜನೆಗಳ ಹೆಸರಲ್ಲಿ ನಗರದ ಮಲ್ಲಿಕಟ್ಟೆ ಎಸ್ ಬಿಐ ಬ್ಯಾಂಕಿನಲ್ಲಿ ಕೋಟ್ಯಂತರ ರೂಪಾಯಿ ಸಾಲ ಪಡೆದು ವಂಚನೆ. ಬ್ಯಾಂಕ್ ಅಧಿಕಾರಿಗಳ ಆಂತರಿಕ ತನಿಖೆಯಲ್ಲಿ ಕೃತ್ಯ ಬೆಳಕಿಗೆ ಬರುತ್ತಲೇ ಸೆ.16ರಂದು ಕದ್ರಿ ಠಾಣೆಗೆ ದೂರು ನೀಡಲಾಗಿತ್ತು. ಆನಂತರ, ಪ್ರಕರಣ ಮಂಗಳೂರು ಸಿಸಿಬಿಗೆ ವರ್ಗಾಯಿಸಲ್ಪಟ್ಟು ಎಲ್ಲ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬ್ಯಾಂಕ್ ಅಧಿಕಾರಿಯೂ ಅರೆಸ್ಟ್ ಆಗಿದ್ದು ಜೈಲು ಸೇರಿದ್ದಾನೆ. ಮಹಮ್ಮದ್ ಮುಸ್ತಫಾ, ಫಾತಿಮಾ ಶಬ್ನಮ್, ಮುನೀರ್ ಕಡಮನ್, ಸಫಿಯಾ ಮತ್ತು ಬ್ಯಾಂಕ್ ಅಧಿಕಾರಿ ಅಭಿಷೇಕ್ ನಂದಾ ಆರೋಪಿಗಳು.

ಪುತ್ತೂರು ಮೂಲದ ಪ್ರಸಕ್ತ ಜೆಪ್ಪುವಿನಲ್ಲಿ ನೆಲೆಸಿರುವ ಮಹಮ್ಮದ್ ಮುಸ್ತಫಾ ಎಂಬಾತ ಎಂ.ಎಸ್ ಎಂಟರ್ ಪ್ರೈಸಸ್ ಮತ್ತು ಫ್ಯೂಶನ್ ಡಾಟ್ ಎಂಟರ್ ಪ್ರೈಸಸ್ ಹೆಸರಿನಲ್ಲಿ ಸಣ್ಣ ಕೈಗಾರಿಕೆಯನ್ನು ಆರಂಭಿಸುವುದಾಗಿ ಹೇಳಿ 2023ರ ಆಗಸ್ಟ್ 8ರಂದು ಬ್ಯಾಂಕಿಗೆ ಸಾಲದ ಅರ್ಜಿ ಸಲ್ಲಿಸಿದ್ದರು. ಬ್ಯಾಂಕಿನ ರಿಲೇಶನ್ ಶಿಪ್ ಮ್ಯಾನೇಜರ್ ಆಗಿದ್ದ ಅಭಿಷೇಕ್ ನಂದಾ, ಅರ್ಜಿಗಳನ್ನು ಪರಿಶೀಲಿಸಿ, ಕೈಗಾರಿಕಾ ಘಟಕವನ್ನೂ ನೋಡಿದ್ದಾಗಿ ವರದಿ ನೀಡಿದ್ದರಿಂದ 2023ರ ಸೆ.13ರಂದು ಎಸ್ ಬಿಐ ಬ್ಯಾಂಕಿನ ಮಲ್ಲಿಕಟ್ಟೆ ಶಾಖೆಯಿಂದ ಎಂಎಸ್ ಎಂಟರ್ ಪ್ರೈಸಸ್ ಕಂಪನಿಯ ಪ್ರೊಪ್ರೈಟರ್ ಮಹಮ್ಮದ್ ಮುಸ್ತಫಾ ಖಾತೆಗೆ 75 ಲಕ್ಷ ಸಾಲ ಮಂಜೂರಾಗಿತ್ತು. ಮರು ದಿನ ಆತನದ್ದೇ ಇನ್ನೊಂದು ಸಾಲದ ಖಾತೆಗೆ 55 ಲಕ್ಷ ಸಾಲ ಮೊತ್ತ ಪಾವತಿಯಾಗಿತ್ತು.

ಒಂದು ವರ್ಷ ಕಳೆದರೂ ಮರುಪಾವತಿ ಮಾಡದೇ ಇದ್ದುದರಿಂದ ಬ್ಯಾಂಕ್ ಅಧಿಕಾರಿಗಳು ಪ್ರಶ್ನಿಸಿದಾಗ, ಆರೋಪಿಗಳು ಕಂಪನಿಯನ್ನು ದಿವಾಳಿಯೆಂದು ತೋರಿಸಿದ್ದರು. ಬ್ಯಾಂಕಿನ ಚೀಫ್ ಮ್ಯಾನೇಜರ್ ಸೌರಭ್ ಕುಮಾರ್ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಸಿದಾಗ, ಸಾಲದ ಹಣವನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸದೇ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ ದುರುಪಯೋಗ ಮಾಡಿರುವುದು ಪತ್ತೆಯಾಗಿತ್ತು. ಮೂರನೇ ಆರೋಪಿ ಫಾತಿಮಾ ಶಬನಮ್ ಖಾತೆಗೆ 55 ಲಕ್ಷ, ಫ್ಯೂಶನ್ ಡಾಟ್ ಎಂಟರ್ ಪ್ರೈಸಸ್ ಸಂಸ್ಥೆಯ ಹೆಸರಿನಲ್ಲಿ ಮೊಹಮ್ಮದ್ ಮುಸ್ತಫಾ ಖಾತೆಗೆ 32 ಲಕ್ಷ ವರ್ಗಾವಣೆಯಾಗಿತ್ತು. ಅಲ್ಲದೆ, 5ನೇ ಆರೋಪಿ ಮುನೀರ್ ಕಡಮನ್ ಮತ್ತು ಆರನೇ ಆರೋಪಿ ಸಫಿಯಾ ಖಾತೆಗೆ 14 ಲಕ್ಷ ಮತ್ತು 20 ಲಕ್ಷ ವರ್ಗಾವಣೆ ಆಗಿರುವುದು ಪತ್ತೆಯಾಗಿತ್ತು. ಇಲ್ಲಿ ಸಫಿಯಾ ಮತ್ತು ಶಬನಮ್ ತಾಯಿ ಮಗಳಾಗಿದ್ದು ಫ್ರಾಡ್ ಮಾಡಿ ಜೈಲು ಸೇರಿದ್ದಾರೆ.

ಅಲ್ಲದೆ, 7ನೇ ಆರೋಪಿ ಬ್ಯಾಂಕಿನ ರಿಲೇಶನ್ ಶಿಪ್ ಮ್ಯಾನೇಜರ್ ಆಗಿದ್ದ ಅಭಿಷೇಕ್ ನಂದಾನಿಗೆ ಸೇರಿದ ಮೈಸೂರಿನ ಐಸಿಐಸಿಐ ಬ್ಯಾಂಕ್ ಖಾತೆಗೂ ದೊಡ್ಡ ಮೊತ್ತದ ಹಣ ಪಾವತಿಯಾಗಿರುವುದು ಪತ್ತೆಯಾಗಿತ್ತು. ಇದರಂತೆ, ನಕಲಿ ಕಂಪೆನಿಗಳ ಹೆಸರಲ್ಲಿ ಬ್ಯಾಂಕ್ ಮ್ಯಾನೇಜರನ್ನೇ ಮುಂದಿಟ್ಟು 1.30 ಕೋಟಿ ರೂಪಾಯಿ ಹಣವನ್ನು ಸಾಲದ ರೂಪದಲ್ಲಿ ಪಡೆದು ಮೋಸ ಎಸಗಿರುವ ಬಗ್ಗೆ ಬ್ಯಾಂಕಿನ ಮುಖ್ಯ ಮ್ಯಾನೇಜರ್ ಸೌರಭ್ ಕುಮಾರ್ ಕದ್ರಿ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿತ್ತು.

ಸಿಸಿಬಿ ಪೊಲೀಸರು ತನಿಖೆ ನಡೆಸಿ ಬ್ಯಾಂಕ್ ಅಧಿಕಾರಿ ಸೇರಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ, ಫೇಕ್ ಕಂಪನಿಗಳನ್ನು ಸೃಷ್ಟಿಸಿ ಸಾಲ ತೆಗೆಸಿಕೊಡುವುದನ್ನೇ ವೃತ್ತಿ ಮಾಡಿಕೊಂಡಿರುವ ಆಶಿಕ್ ಎಂಬಾತನೇ ಇದರ ರೂವಾರಿಯಾಗಿದ್ದು ಆತ ತಲೆಮರೆಸಿಕೊಂಡಿದ್ದಾನೆ. ಎಸ್ ಬಿಐ ಮಲ್ಲಿಕಟ್ಟೆ ಶಾಖೆಯಲ್ಲಿ ಇಂತಹದ್ದೇ ಹಲವಾರು ಬ್ಲಂಡರ್ ಸಾಲ ವಿತರಣೆಯಾಗಿದ್ದು, ಅಭಿಷೇಕ್ ಮೂಲಕ ನೀಡಿರುವ ಎಲ್ಲ ಸಾಲಗಳನ್ನೂ ತನಿಖೆಗೆ ಒಳಪಡಿಸ್ತಿರೋದಾಗಿ ಪೊಲೀಸರು ತಿಳಿಸಿದ್ದಾರೆ.

ಸದ್ರಿ ಪ್ರಕರಣದಲ್ಲಿ ಆರೋಪಿಗಳು ಒಬ್ಬರಿಗೊಬ್ಬರು ಸಂಬಂಧಿಕರೇ ಆಗಿದ್ದಾರೆ. ಆಶಿಕ್ ಅತ್ತಾವರದಲ್ಲಿ ಮೈಲ್ಸ್ ಆಫ್ ಫೈಲ್ಸ್ ಎಂಟರ್ ಪ್ರೈಸಸ್ ಹೆಸರಿನಲ್ಲಿ ಕಚೇರಿ ಹೊಂದಿದ್ದು, ಅದನ್ನೇ ನಕಲಿ ಕಂಪನಿಯನ್ನಾಗಿ ತೋರಿಸಿ ತನ್ನ ಪತ್ನಿಯನ್ನೇ ಪ್ರೊಪ್ರೈಟರ್ ಎಂದು ಬ್ಯಾಂಕಿಗೆ ನಂಬಿಸಿ ಸಾಲ ಪಡೆದಿದ್ದಾನೆ. ಇದೇ ರೀತಿ ಹಲವಾರು ಮಂದಿಗೆ ಕೇಂದ್ರ ಸರಕಾರದ ಮುದ್ರಾ ಇನ್ನಿತರ ಯೋಜನೆಗಳಿಂದ ಸಾಲ ತೆಗೆಸಿಕೊಟ್ಟು ಕೋಟ್ಯಂತರ ರೂಪಾಯಿ ಗುಳುಂ ಮಾಡಿದ್ದಾನೆ ಎನ್ನುವ ಮಾಹಿತಿ ಪೊಲೀಸರಿಂದ ತಿಳಿದುಬಂದಿದೆ. ಯಾವುದೇ ಅಡಮಾನ ಇಲ್ಲದೆ ಸಾಲ ಒದಗಿಸುವ ಇಂತಹ ಯೋಜನೆಗಳನ್ನು ದುರುಪಯೋಗ ಮಾಡುವುದನ್ನೇ ಈ ಖದೀಮರು ಕಸುಬು ಮಾಡಿಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರಿನ ಯುವಕ 9ನೇ ದಿನಕ್ಕೆ ಶವವಾಗಿ ಪತ್ತೆ

Next Post

ಮಂಗಳೂರು: ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್, ಡೆತ್ ನೋಟಲ್ಲಿದ್ದ ನರ್ಸ್ ನಿರೀಕ್ಷಾ ಬಂಧನ

Related Posts

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು
ಕ್ರೈಮ್ ನ್ಯೂಸ್

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
40
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
44
Next Post
ಮಂಗಳೂರು: ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್, ಡೆತ್ ನೋಟಲ್ಲಿದ್ದ ನರ್ಸ್ ನಿರೀಕ್ಷಾ ಬಂಧನ

ಮಂಗಳೂರು: ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್, ಡೆತ್ ನೋಟಲ್ಲಿದ್ದ ನರ್ಸ್ ನಿರೀಕ್ಷಾ ಬಂಧನ

Discussion about this post

Recent News

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
29
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d