• About us
  • Contact us
  • Disclaimer
Monday, December 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 22ರಂದು ‘ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರದಾನ

Coastal Times by Coastal Times
November 19, 2021
in ಕರಾವಳಿ
ಮಂಗಳೂರು:  22ರಂದು ‘ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರದಾನ
14
VIEWS
WhatsappTelegramShare on FacebookShare on Twitter

ಮಂಗಳೂರು: ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ ‘ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರದಾನ ಕಾರ್ಯಕ್ರಮ ನ. 22ರಂದು ಬೆಳಗ್ಗೆ 10.30ಕ್ಕೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆಯಲಿದೆ.

ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮುಖ್ಯಅತಿಥಿಯಾಗಿ ಹೊಸದಿಗಂತ ಪತ್ರಿಕೆಯ ಹಿರಿಯ ವರದಿಗಾರ ಗುರುವಪ್ಪ ಎನ್.ಟಿ.ಬಾಳೇಪುಣಿ ಭಾಗವಹಿಸುವರು.

ಪ್ರಶಸ್ತಿ ವಿಜೇತರು: ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಶ್ರೀರಕ್ಷಾ ರಾವ್ ಪುನರೂರು ಪ್ರಶಸ್ತಿ ಪಡೆದವರು. ಮೂಲ್ಕಿ ಸಮೀಪ ಪುನರೂರಿನವರು. ಸ್ನಾತಕೋತ್ತರ ಪದವಿ ಅಧ್ಯಯನದ ವೇಳೆ ಉತ್ತಮ ಬರಹಗಾರಿಕೆ ಮೂಲಕ ಗುರುತಿಸಿಕೊಂಡವರು. ಆಳ್ವಾಸ್ ಸಂಸ್ಥೆಯಲ್ಲಿ ಸಾಂಸ್ಕೃತಿಕ ದತ್ತು ಸ್ವೀಕಾರ ಯೋಜನೆ ಅಡಿ ಪತ್ರಿಕೋದ್ಯಮ ಕೋರ್ಸ್‌ಗೆ ಆಯ್ಕೆಯಾದವರು. ಆಳ್ವಾಸ್ ರಂಗ ಅಧ್ಯಯನದ ವಿದ್ಯಾರ್ಥಿನಿ. ಚಂಡೀಘಡದಲ್ಲಿ 2019ರಲ್ಲಿ ನಡೆದ ರಾಷ್ಟ್ರಮಟ್ಟದ ಯವಜನೋತ್ಸವದಲ್ಲಿ ನಾಟಕದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಬೀದಿ ನಾಟಕ, ತುಳು, ಕನ್ನಡ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಬೆಂಗಳೂರಿನ ಮಸ್ತ್ ಮಗಾ ಡಾಟ್ ಕಾಂ ಡಿಜಿಟಲ್ ಮಾಧ್ಯಮದಲ್ಲಿ ನಿರೂಪಕಿಯಾಗಿದ್ದಾರೆ.

ಪದವಿ ವಿಭಾಗದಲ್ಲಿ ಪ್ರಸ್ತುತ ಆಳ್ವಾಸ್ ಕಾಲೇಜಿನಲ್ಲಿ ಸ್ನಾತಕೋತ್ತರ ದ್ವಿತೀಯ ವರ್ಷದ ಪದವಿ ಓದುತ್ತಿರುವ ದುರ್ಗಾ ಪ್ರಸನ್ನ ಅವರಿಗೆ ಪ್ರಥಮ ಪ್ರಶಸ್ತಿ. ಮೂಲತಃ ಕಾಸರಗೋಡು ಜಿಲ್ಲೆಯ ಪೆರ್ಲದವರು. ಪದವಿ ವಿದ್ಯಾಭ್ಯಾಸವನ್ನು ಕೂಡ ಆಳ್ವಾಸ್‌ನಲ್ಲಿಯೇ ಪೂರೈಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ 60ಕ್ಕೂ ಅಧಿಕ ಲೇಖನ ಬರೆದಿದ್ದಾರೆ. ಕನ್ನಡ ಹಾಗೂ ತುಳು ವಿಕಿಪೀಡಿಯದ ಸಕ್ರಿಯ ಸಂಪಾದಕಿ ಹಾಗೂ ತರಬೇತುದಾರರಾಗಿದ್ದಾರೆ. ಸುದ್ದಿವಾಣಿ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ.

ಪ್ರಜ್ನಾ ಓಡಿಲ್ನಾಳ ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದವರು. ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪೂರೈಸಿದವರು. ಪ್ರಸ್ತುತ ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಸ್ನಾತಕೋತ್ತರ ಪದವಿಯ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ. ಪುತ್ತೂರಿನ ಸ್ಥಳೀಯ ವಾಹಿನಿ ಝೂಮ ಇನ್ ಟಿವಿಯಲ್ಲಿ ನಿರೂಪಕಿ ಹಾಗೂ ವರದಿಗಾರ್ತಿ. ನಿರೂಪಕಿ, ಬರಹಗಾರ್ತಿಯಾಗಿ ಗುರುತಿಸಿಕೊಂಡವರು.

ಮೀಡಿಯಾ ಅಲ್ಯೂಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆಯಾಗಿದ್ದು, 2015ರಲ್ಲಿ ಸ್ಥಾಪನೆಗೊಂಡಿದೆ. ಪತ್ರಿಕೋದ್ಯಮ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದೊಂದಿಗೆ ಶಿಕ್ಷಣ ವ್ಯವಸ್ಥೆ, ವಿದ್ಯಾರ್ಥಿಗಳನ್ನು ಬೆಸೆಯುವ ಸೇತುವಾಗಿ ಕೆಲಸ ಮಾಡುತ್ತಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದ ಕೊಡುಗೆ ನೀಡಿದವರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮದ ಭಾಗವಾಗಿ ‘ಮಾಮ್ ಇನ್‌ಸ್ಪೈರ್ ಅವಾರ್ಡ್’ನ್ನು ಪ್ರತಿ ವರ್ಷ ನೀಡುತ್ತಾ ಬಂದಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪಿ ವಕೀಲ ರಾಜೇಶ್ ಮನೆಯಲ್ಲಿ ತೀವ್ರ ಶೋಧ

Next Post

ಮಂಗಳೂರು: 1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ , ಮೂವರ ಬಂಧನ

Related Posts

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
ಕರಾವಳಿ

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
117
ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌
ಕರಾವಳಿ

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
48
Next Post
ಮಂಗಳೂರು: 1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ , ಮೂವರ ಬಂಧನ

ಮಂಗಳೂರು: 1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ , ಮೂವರ ಬಂಧನ

Discussion about this post

Recent News

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
117
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d