• About us
  • Contact us
  • Disclaimer
Thursday, July 31, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಾಲ ಮರುಪಾವತಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅರೆಸ್ಟ್

Coastal Times by Coastal Times
December 19, 2024
in ಕ್ರೈಮ್ ನ್ಯೂಸ್
ಸಾಲ ಮರುಪಾವತಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅರೆಸ್ಟ್
111
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ಕೆಥೋಲಿಕ್‌ ಸಹಕಾರ (ಎಂಸಿಸಿ) ಬ್ಯಾಂಕ್‌ನಿಂದ ಸಾಲ ಪಡೆದಿದ್ದ ವ್ಯಕ್ತಿಯೊಬ್ಬರು, ‘ನನ್ನ ಸಾವಿಗೆ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಕಾರಣ’ ಎಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಳಾಯಿಬೆಟ್ಟು ಕುಟಿನೋ ಪದವು ನಿವಾಸಿ ಮನೋಹರ್ ಪಿರೇರಾ ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ ಅನಿಲ್ ಲೋಬೋ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಮನೋಹರ್ ಪಿರೇರಾ ಅವರು ಉಳಾಯಿಬೆಟ್ಟುವಿನ ಕುಟಿನೋ ಪದವಿನಲ್ಲಿರುವ ತಮ್ಮ ಮನೆಯ ಮೇಲೆ ಎಂಸಿಸಿ ಬ್ಯಾಂಕ್‌ನಲ್ಲಿ ಹತ್ತು ವರ್ಷಗಳ ಹಿಂದೆ ಸಾಲ ಪಡೆದಿದ್ದರು. ಈ ಸಾಲದ ಕಂತನ್ನು ಅವರ ದೊಡ್ಡಣ್ಣ ಮೆಲ್ಬರ್ನ್‌ ಅವರು ತೀರಿಸುತ್ತಿದ್ದರು. ಕೋವಿಡ್ ಸಂದರ್ಭ ವ್ಯವಹಾರದಲ್ಲಿ ನಷ್ಟ ಉಂಟಾಗಿದ್ದರಿಂದ ಮೆಲ್ಬರ್ನ್‌ ಅವರಿಗೆ ಲೋನ್ ಕಂತು ಬ್ಯಾಂಕಿಗೆ ಕಟ್ಟಲು ಸಾಧ್ಯವಾಗಿರಲಿಲ್ಲ. ಆದ್ದರಿಂದ 2 ವರ್ಷಗಳ ಹಿಂದೆ ಬ್ಯಾಂಕ್‌ನವರು ಮನೆಯನ್ನು ಸೀಜ್ ಮಾಡಿದ್ದರು. ಇದರಿಂದ ಮನೋಹರ್ ಪಿರೇರಾರಿಗೆ ಮಾನಸಿಕ ಖಿನ್ನತೆ ಉಂಟಾಗಿ ಎರಡು ಸಲ ಹೃದಯಾಘಾತವಾಗಿತ್ತು.

ಬಳಿಕ ಸಿಸ್ಟರ್ ಕ್ರಿಸ್ಟಿನ್ ಅವರು ದತ್ತಿ ಸಂಸ್ಥೆಯಿಂದ 2023ರ ಫೆಬ್ರವರಿಯಲ್ಲಿ ಮನೋಹರ್‌ರವರ ಬ್ಯಾಂಕ್ ಖಾತೆಗೆ 15 ಲಕ್ಷ ವರ್ಗಾಯಿಸಿದ್ದಾರೆ. ಈ ಹಣದಲ್ಲಿ ಬ್ಯಾಂಕ್ ಸಾಲ ತೀರಿಸುವ ಬಗ್ಗೆ ಮನೋಹರ್ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊರೊಂದಿಗೆ ಮಾತನಾಡಿ ಸೆಲ್ಫ್ ಚೆಕ್ ನೀಡಿದ್ದರು. ಬಳಿಕ ಬ್ಯಾಂಕಿನವರು ಸೀಜ್ ಮಾಡಿದ ಮನೆಯನ್ನು 6 ತಿಂಗಳ ಹಿಂದೆ ವಾಪಸ್ ವಾಸಕ್ಕೆ ಬಿಟ್ಟು ಕೊಟ್ಟಿದ್ದರು. ಸಾಲ ಕಂತು ಇನ್ನೂ ಕೂಡ ಬಾಕಿ ಇರುವುದರಿಂದ ಮನೋಹರ್‌ರವರು ಮಾನಸಿಕವಾಗಿ ನೊಂದು ಡಿಸೆಂಬರ್ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಅವರು ಮೊಬೈಲ್ ವಿಡಿಯೋ ಮಾಡಿ, ‘MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸೀಜ್ ಮಾಡಿರುವ ಮನೆಗೆ ತಾನು 15 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಆದರೆ ಆತ 9 ಲಕ್ಷ ತಿಂದಿದ್ದಾನೆ’ ಎಂದು ಹೇಳಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಪ್ರಕರಣ ದಾಖಲಾಗಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರೈಲಿನ ಮಹಿಳಾ ಬೋಗಿಗೆ ನಗ್ನವಾಗಿ ನುಗ್ಗಿದ ವ್ಯಕ್ತಿ, ವಿಡಿಯೋ ವೈರಲ್

Next Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

Related Posts

ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಸರಗೋಡಿನ ಖ್ಯಾತ ಯೂಟ್ಯೂಬರ್ ‘ಶಾಲು ಕಿಂಗ್’ ಬಂಧನ
ಕ್ರೈಮ್ ನ್ಯೂಸ್

ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಸರಗೋಡಿನ ಖ್ಯಾತ ಯೂಟ್ಯೂಬರ್ ‘ಶಾಲು ಕಿಂಗ್’ ಬಂಧನ

July 27, 2025
65
ಸೌಮ್ಯ ಪ್ರಕರಣ-ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿ ಗೋವಿಂದಚಾಮಿ ಜೈಲಿನಿಂದ ಪರಾರಿ-ಬಂಧನ
ಕ್ರೈಮ್ ನ್ಯೂಸ್

ಸೌಮ್ಯ ಪ್ರಕರಣ-ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿ ಗೋವಿಂದಚಾಮಿ ಜೈಲಿನಿಂದ ಪರಾರಿ-ಬಂಧನ

July 26, 2025
104
Next Post
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

Discussion about this post

Recent News

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

July 31, 2025
41
ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

July 30, 2025
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

July 31, 2025
ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

July 30, 2025
ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್

July 29, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d