ಮಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ (ಇಸ್ಮಾಯಿಲ್ ಕೆ.ಶಫಿ) ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ಕ್ಷೇತ್ರದ ಎಸ್ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಪಕ್ಷದ ಅಭ್ಯರ್ಥಿಯಾಗಿ ಇವರು ಕಣಕ್ಕಿಳಿದಿದ್ದಾರೆ.
ಶಾಫಿ ಬೆಳ್ಳಾರೆ ಪರವಾಗಿ ಇಂದು ಪುತ್ತೂರು ಕ್ಷೇತ್ರದ ಚುನಾವಣಾಧಿಕಾರಿಗೆ ಎಲೆಕ್ಷನ್ ಏಜೆಂಟ್ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುಂಚೆ ಎಪಿಎಂಸಿ ರಸ್ತೆಯಲ್ಲಿ ಇರುವ ಎಸ್ಡಿಪಿಐ ಕಚೇರಿಯಿಂದ ತಾಲ್ಲೂಕು ಆಡಳಿತ ಸೌಧವರೆಗೆ ಕಾಲ್ನಡಿಗೆ ಮೆರವಣಿಗೆ ನಡೆಯಿತು.
Discover more from Coastal Times Kannada
Subscribe to get the latest posts sent to your email.
Discussion about this post