• About us
  • Contact us
  • Disclaimer
Tuesday, June 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರಾವಳಿ ಹಿಂದುತ್ವದ ಭದ್ರಕೋಟೆ ಅಂತ ಯಾರೇಳಿದ್ದು? ಎಲ್ಲಾ ಧರ್ಮಕ್ಕೂ ಕರಾವಳಿ ಭದ್ರಕೋಟೆ: ಡಿ.ಕೆ ಶಿವಕುಮಾರ್

Coastal Times by Coastal Times
April 20, 2025
in ಕರಾವಳಿ
ಕರಾವಳಿ ಹಿಂದುತ್ವದ ಭದ್ರಕೋಟೆ ಅಂತ ಯಾರೇಳಿದ್ದು? ಎಲ್ಲಾ ಧರ್ಮಕ್ಕೂ ಕರಾವಳಿ ಭದ್ರಕೋಟೆ: ಡಿ.ಕೆ ಶಿವಕುಮಾರ್
58
VIEWS
WhatsappTelegramShare on FacebookShare on Twitter

ಮಂಗಳೂರು, ಎ.20: ಕರಾವಳಿ ಎಲ್ಲಾ ಧರ್ಮಕ್ಕೂ ಭದ್ರಕೋಟೆಯಾಗಿದೆ. ಇಲ್ಲಿರುವ ದೇವಸ್ಥಾನ, ದರ್ಗಾ, ನೀರು, ಪರಿಸರ, ವಾತಾವರಣ ಸಮುದ್ರ ಎಲ್ಲವೂ ನೀತಿ ಮೇಲೆ ಇದೆ. ಜಾತಿ ಮೇಲೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದೇವಾಲಯಕ್ಕೆ ರವಿವಾರ ಭೇಟಿ ಮಾಡಿದ ಬಳಿಕ ಶಿವಕುಮಾರ್ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು.’ಕರಾವಳಿ ಹಿಂದುತ್ವದ ಭದ್ರ ಕೋಟೆ. ಇಲ್ಲಿ ಕಾಂಗ್ರೆಸ್ ಮೃದು ಹಿಂದುತ್ವದ ಧೋರಣೆ ಅನುಸರಿಸುತ್ತಿದೆ’ ಎಂಬುದಾಗಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ‘ಯಾರು ಹೇಳಿದ್ರು .. ಕರಾವಳಿ ಹಿಂದುತ್ವದ ಭದ್ರ ಕೋಟೆ ಅಂತ ? ಕರಾವಳಿಯ ಶೈಕ್ಷಣಿಕ ರಂಗ, ಧಾರ್ಮಿಕ ಕ್ಷೇತ್ರ, ಬ್ಯಾಂಕ್ ಗಳಲ್ಲಿ ಎಲ್ಲರೂ ಇದ್ದಾರೆ. ಬರೀ ಹಿಂದೂ ಮಾತ್ರ ಇರುವುದಲ್ಲ. ಆದರೆ ಬಿಜೆಪಿಯವರು ಮಾತ್ರ ಹಿಂದು ನಾವು ಮುಂದೆ ಹೇಳಿಕೊಳ್ಳುತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಜೈನರು, ಬಿಲ್ಲವರು, ಒಕ್ಕಲಿಗರು, ಲಿಂಗಾಯತರು ಸೇರಿದಂತೆ ಎಲ್ಲ ಜನಾಂಗವನ್ನು ಒಂದೇ ಎಂದು ಕಾಂಗ್ರೆಸ್ ಹೇಳುತ್ತಿದೆ. ಬಿಜೆಪಿ ಹೇಳುತ್ತಿರುವ ವಿಚಾರದ ಬಗ್ಗೆ ನಾನ್ಯಾಕೆ ಟೀಕೆ ಮಾಡಬೇಕು.ಕಾಂಗ್ರೆಸ್ ಗೆ ರಾಜ್ಯದ ಜನತೆ ಆಶೀರ್ವಾದ ಮಾಡಿದ್ದಾರೆ. ನಮ್ಮ ಉದ್ದೇಶ ಎಲ್ಲ ಜನರಿಗೂ ರಕ್ಷಣೆ ಮಾಡುವುದಾಗಿದೆ ಎಂದರು.

ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ ಎಂದು ತಿಳಿಸಿದರು. ಕರಾವಳಿಯಲ್ಲಿ ಭಾವನೆಯ ಮೇಲೆ ರಾಜಕಾರಣ ನಡೆಯುತ್ತಿರುವ ವಿಚಾರದ ಬಗ್ಗೆ ಕೇಳಿದಾಗ ಭಾವನೆಗಿಂತ ಬದುಕು ಮುಖ್ಯ. ಬದುಕಿನಲ್ಲಿ ರಾಜಕಾರಣ ಮಾಡಬೇಕು ಭಾವನೆಯಲ್ಲಿ ರಾಜಕಾರಣ ಮಾಡಬಾರದು. ಬದುಕು ಇದ್ದರೆ ರಾಜಕಾರಣ ಎಂದರು. ಇಲ್ಲಿ ಇಬ್ಬರು ಮಾತ್ರ ನಮ್ಮವರು ಗೆದ್ದಿದ್ದಾರೆ, ಮುಂದೆಯೂ ಸರ್ಕಾರ ಬರುತ್ತೆ. ಜನರಿಗೂ ಒಳ್ಳೆಯದಾಗುತ್ತೆ, ನಮ್ಮ ಬಲಿಷ್ಠ ಸರ್ಕಾರ ಇದೆ. ಆದರೆ ಇಲ್ಲಿ ನಮಗೆ ಪ್ರತಿನಿಧಿಗಳು ಬೇಕಲ್ವಾ? ಹಾಗಾಗಿ ಬರ್ತಾ ಇದೀನಿ. ಬಿಜೆಪಿಗೆ ಓಟ್ ಹಾಕಿ ಗೆಲ್ಲಿಸಿದ್ದಾರೆ, ಆದರೆ ಅವರಿಂದ ಇಲ್ಲಿ ಯಾವುದೇ ಉಪಯೋಗ ಅಗ್ತಾ ಇಲ್ಲ. ಕಾಂಗ್ರೆಸ್ ನಿಂದ ಸಹಾಯ ಆಗ್ತಾ ಇದೆ, ಅದನ್ನು ಮನದಟ್ಟು ಮಾಡಬೇಕು. ನಮ್ಮ ಸರ್ಕಾರದಲ್ಲಿ ಇಲ್ಲಿನ ಮಂತ್ರಿಗಳೂ ಇರಲಿ ಅನ್ನೋದು ನನ್ನ ಆಸೆ ಎಂದು ಹೇಳಿದರು

ಕರಾವಳಿಯಲ್ಲಿ ಕಾಂಗ್ರೆಸ್ ನಿಂದ ಇಬ್ಬರು ಮಾತ್ರ ಜಯಿಸಿದ್ದಾರೆ. ಬಿಜೆಪಿಗೆ ಜನರು ವೋಟು ಹಾಕಿ ಗೆಲ್ಲಿಸಿದರೂ, ರಾಜ್ಯದಲ್ಲಿರುವ ಬಲಿಷ್ಠ ಕಾಂಗ್ರೆಸ್ ಸರಕಾರದ ಮೂಲಕ ಪ್ರತಿಯೊಂದು ಕುಟುಂಬಕ್ಕೂ ಪ್ರಯೋಜನವಾಗುತ್ತಿದೆ. ಬಿಜೆಪಿಯಿಂದ ಏನು ಸಿಗುತಿಲ್ಲ. ಇದನ್ನು ಜನರಿಗೆ ಮನದಟ್ಟು ಮಾಡಬೇಕು. ಮುಂದಕ್ಕೂ ಕಾಂಗ್ರೆಸ್ ಸರಕಾರ ಬರುತ್ತದೆ ಎಂದರು.

ಜಾತಿ ಗಣತಿ ಅವೈಜ್ಞಾನಿಕ ಎಂಬ ಆರೋಪದ ಬಗ್ಗೆ ನಾನೇನು ಆ ಬಗ್ಗೆ ಹೇಳುವುದಿಲ್ಲ. ಕೇವಲ ವರದಿ ಕೈಗೆ ಬಂದಿದೆ ನಾವು ವರದಿಯ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ವರದಿಯನ್ನು ಅಧ್ಯಯನ ಮಾಡದೆ, ಚರ್ಚಿಸದೆ ಆತುರವಾಗಿ ನಾವೇನು ನಿರ್ಧಾರದ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಧರ್ಮವನ್ನು ಕಾಪಾಡಬೇಕು: ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು ಎಂದು ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಗೋಲ್ಡ್ ಸ್ಮಗ್ಲಿಂಗ್ ; ಕೇರಳದ ಇಬ್ಬರು ಸ್ನೇಹಿತರನ್ನು ಹತ್ತು ವರ್ಷಗಳ ಹಿಂದೆ ಕೊಲೆಗೈದ ಮೂವರು ಅಪರಾಧಿಗಳಿಗೆ ಮಂಗಳೂರಿನ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

Next Post

ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗದ ಉದ್ಯಮಿ ಬಲಿ

Related Posts

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026
ಕರಾವಳಿ

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ
ಕರಾವಳಿ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
33
Next Post
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗದ ಉದ್ಯಮಿ ಬಲಿ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗದ ಉದ್ಯಮಿ ಬಲಿ

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
62
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d