• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೋಮೇಶ್ವರ ಪುರಸಭೆ ಕಡಿಯಲು ಹೇಳಿದ್ದ ಮರಗಳೇ ಬೇರೆ, ಅರಣ್ಯ ಇಲಾಖೆ ಕಡಿದದ್ದೇ ಬೇರೆ !

Coastal Times by Coastal Times
June 20, 2025
in ಕರಾವಳಿ
ಸೋಮೇಶ್ವರ ಪುರಸಭೆ ಕಡಿಯಲು ಹೇಳಿದ್ದ ಮರಗಳೇ ಬೇರೆ, ಅರಣ್ಯ ಇಲಾಖೆ ಕಡಿದದ್ದೇ ಬೇರೆ !
85
VIEWS
WhatsappTelegramShare on FacebookShare on Twitter

ಉಳ್ಳಾಲ: ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಅಪಾಯ ದಲ್ಲಿರುವ ಮರಗಳ ರೆಂಬೆಯನ್ನು ತೆಗೆಯಲು ಸೋಮೇಶ್ವರ ಪುರಸಭೆ ಅರಣ್ಯ ಇಲಾಖೆಗೆ ಪಟ್ಟಿ ನೀಡಿದರೆ, ಅವುಗಳ ಬದಲಿಗೆ ಸೋಮೇಶ್ವರ ಕಡಲ ತೀರ ಬದಿಯಲ್ಲಿದ್ದ ಬೆಲೆ ಬಾಳುವ ಗಾಳಿ ಮರಗಳನ್ನು ಕಡಿದು ಸಾಗಿಸಿದ್ದರ ಬಗ್ಗೆ ಸ್ಥಳೀಯವಾಗಿ ಆಕ್ರೋಶ ವ್ಯಕ್ತವಾಗಿದೆ.

ಕಡಲ ತೀರದಲ್ಲಿ ಅಪಾಯದಲ್ಲಿದ್ದ ಎರಡು ಗಾಳಿ ಮರ ಸೇರಿದಂತೆ ಉಚ್ಚಿಲ ಭಗವತಿ ಶಾಲೆ, ಪುರಸಭೆ ಬಳಿ ಇರುವ ಬಸ್‌ ನಿಲ್ದಾಣದಲ್ಲಿ ಅಪಾಯಕಾರಿಯಾದ ಮರಗಳ ಪಟ್ಟಿ ಮಾಡಿ ರೆಂಬೆ ತೆಗೆಯಲು ಅರಣ್ಯ ಇಲಾಖೆಗೆ ಸೂಚಿಸಿತ್ತು. ಆದರೆ ವಿದ್ಯಾರ್ಥಿಗಳೇ ಹೆಚ್ಚು ನಿಲ್ಲುವ ಸೋಮೇಶ್ವರ ಬಸ್‌ ನಿಲ್ದಾಣದ ಬಳಿಯ ಅಪಾಯಕಾರಿ ಮರ ಮತ್ತು ಉಚ್ಚಿಲ ಸಂಕೊಳಿಗೆ ಭಗವತಿ ದೇವಸ್ಥಾನ ಬಳಿಯ ಮರಗಳ ರೆಂಬೆ ತೆಗೆಯಬೇಕಿತ್ತು. ಅದರ ಬದಲಾಗಿ ಕಡಲ ತೀರದ ಐದು ಗಾಳಿ ಮರಗಳನ್ನು ಬುಡ ಸಮೇತ ಕಡಿದು, ಸಾಗಿಸಿರುವುದು ಹಲವು ಸಂಶಯಕ್ಕೆ ಕಾರಣವಾಗಿದೆ.

ಸೋಮೇಶ್ವರ ಬೀಚ್ ನಲ್ಲಿರುವ ಅನಧಿಕೃತ ಗೂಡಂಗಡಿ ಮಾಲೀಕನು ತನ್ನ ಅಂಗಡಿಗೆ ಅಪಾಯಕಾರಿ ಆಗಬಹುದಾದ ಗಾಳಿ ಮರಗಳನ್ನೆಲ್ಲವನ್ನು ಕಡಿಸಿಯೇ ಬಿಡಬೇಕೆಂದು ಪಕ್ಷದ ನಾಯಕರ ಹಿಂದೆ ದುಂಬಾಲು ಬಿದ್ದಿದ್ದನಂತೆ. ಸೋಮೇಶ್ವರ ಪುರಸಭೆ ಆಡಳಿತವು ಪುರಸಭಾ ವ್ಯಾಪ್ತಿಯಲ್ಲಿರುವ ಅಪಾಯಕಾರಿ ಕೆಲ ಆಲದ ಮರಗಳ ರೆಂಬೆಗಳು ಮತ್ತು ಸಮುದ್ರ ತೀರದ ಗೂಡಂಗಡಿ ಬಳಿ ಮುರಿದು ನಿಂತಿರುವ ಒಂದು ಗಾಳಿ ಮರವನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಈ ಹಿಂದೆ ಮನವಿ ಮಾಡಿತ್ತು. ಅರಣ್ಯಾಧಿಕಾರಿಗಳು ಮಾತ್ರ ಜನ ನಿಬಿಡ ಪ್ರದೇಶದಲ್ಲಿ ಅಪಾಯಕಾರಿಯಾಗಿರುವ ಆಳದ ಮರಗಳನ್ನ ಹಾಗೆಯೇ ಬಿಟ್ಟು ಸಮುದ್ರ ತೀರದ ಐದು ಬೆಳೆದು ನಿಂತ ಗಾಳಿ ಮರಗಳನ್ನ ಬುಧವಾರ ಕಡಿದು ರಾತ್ರೋರಾತ್ರಿ ವಾಹನದಲ್ಲಿ ಸಾಗಿಸಿದ್ದಾರೆ.

ಗುರುವಾರವೂ ಕಡಿದ ಮರಗಳನ್ನ ಸಾಗಾಟ ನಡೆಸಲು ಬಂದಾಗ ಸ್ಥಳೀಯರು ತಡೆದಿದ್ದಾರೆ. ಸಮುದ್ರ ತೀರದ ಬಳಿ ಈ ಹಿಂದೆಯೂ ಚರುಮುರಿ ಸ್ಟಾಲ್ ಗೂಡಂಗಡಿಯೊಂದು ಅನೇಕ ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದು, ಅವರಿಗೆ ಗಾಳಿ ಮರಗಳು ಎಂದಿಗೂ ಕಂಟಕವಾಗಿರಲಿಲ್ಲ. ಕೆಲವೇ ತಿಂಗಳ ಹಿಂದೆ ಇಲ್ಲಿ ಗೂಡಂಗಡಿ ನಿರ್ಮಿಸಿದ್ದ ಕಾಂಗ್ರೆಸ್ ಪುಡಾರಿಯೇ ತನ್ನ ಪ್ರಭಾವ ಬಳಸಿ ಗಾಳಿ ಮರಗಳ ಮಾರಣಹೋಮ ನಡೆಸಿರೋದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಈ ಕುರಿತು ಪುರಸಭಾ ಉಪಾಧ್ಯಕ್ಷ ರವಿಶಂಕರ್‌ ಸೋಮೇಶ್ವರ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಮರಗಳ ಪಟ್ಟಿಯನ್ನು ಅರಣ್ಯ ಇಲಾಖೆಗೆ ನೀಡಿದ್ದೆವು. ಆದರೆ ಅವುಗಳನ್ನು ಇದುವರೆಗೂ ತೆರವುಗೊಳಿಸಿಲ್ಲ. ಆದರೆ ಕಡಲ ತೀರದ ಗಾಳಿಮರಗಳನ್ನು ಕಡಿದು ಸಾಗಿಸಲಾಗಿದೆ. ಈ ಸಂಬಂಧ ಪುರಸಭೆಗೂ ಮಾಹಿತಿ ನೀಡಿಲ್ಲ ಹಾಗಾಗಿ ಅರಣ್ಯ ಇಲಾಖೆಗೆ ಸ್ಪಷ್ಟನೆ ಕೋರಲಾಗುವುದು ಎಂದು ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

Next Post

ರಾಜಸ್ಥಾನದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಸೀರೆಯುಟ್ಟು ಮಹಿಳೆಯ ವೇಷ ಧರಿಸಿದ 13 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಬಂಧನ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ರಾಜಸ್ಥಾನದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಸೀರೆಯುಟ್ಟು ಮಹಿಳೆಯ ವೇಷ ಧರಿಸಿದ 13 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಬಂಧನ

ರಾಜಸ್ಥಾನದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಸೀರೆಯುಟ್ಟು ಮಹಿಳೆಯ ವೇಷ ಧರಿಸಿದ 13 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಬಂಧನ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d