• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜೆಪ್ಪು ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಒತ್ತಾಯಿಸಿ ಸಾಮೂಹಿಕ ಧರಣಿ ಸತ್ಯಾಗ್ರಹ

Coastal Times by Coastal Times
August 20, 2024
in ಕರಾವಳಿ
ಜೆಪ್ಪು ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಒತ್ತಾಯಿಸಿ ಸಾಮೂಹಿಕ ಧರಣಿ ಸತ್ಯಾಗ್ರಹ
67
VIEWS
WhatsappTelegramShare on FacebookShare on Twitter

ಮಂಗಳೂರು, ಆ.20: ಜೆಪ್ಪು ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ವಾಹನ ಸಂಚಾರಕ್ಕೆ ಅಯೋಗ್ಯವಾಗಿರುವ ಪರ್ಯಾಯ ಒಳರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಯಿತು.

ಧರಣಿಯನ್ನು ಉದ್ಘಾಟಿಸಿ ಮಾತನಾಡಿದ ಹೋರಾಟ ಸಮಿತಿಯ ಗೌರವಾಧ್ಯಕ್ಷ ದಿಲ್ ರಾಜ್ ಆಳ್ವ, ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಜನತೆಗೆ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ವಾಗ್ದಾನವಿತ್ತ ರೈಲ್ವೆ ಇಲಾಖೆ ಮತ್ತು ಮಂಗಳೂರು ಮಹಾನಗರ ಪಾಲಿಕೆಯು, ಮೂರು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸದೆ ಜನಸಾಮಾನ್ಯರಿಗೆ ಮೋಸ ಮಾಡಿದೆ. ಸಾಮಾನ್ಯ ಮೇಸ್ತ್ರಿಗೆ ಇರುವಷ್ಟು ಜ್ಞಾನ ಮಂಗಳೂರಿನ ಅಧಿಕಾರಿಗಳಿಗೆ ಇಲ್ಲವಾಗಿದೆ. ರೈಲ್ವೆ ಇಲಾಖೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಸಾಮಾನ್ಯ ಜನತೆಯ ಸಂಕಷ್ಟವನ್ನು ಕೇಳುವವರೇ ಇಲ್ಲವಾಗಿದೆ. ಈ ಮೂಲಕ ರೈಲ್ವೆ ಇಲಾಖೆಯ ಸರ್ವಾಧಿಕಾರಿ ವರ್ತನೆಯನ್ನು ಜನತೆ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡ ಸುನೀಲ್ ಕುಮಾರ್ ಬಜಾಲ್, ಕೂಡಲೇ ಮನಪಾ ಹಾಗೂ ರೈಲ್ವೆ ಇಲಾಖೆ ಸ್ಪಂದಿಸದಿದ್ದಲ್ಲಿ ರೈಲು ರೋಕೋ, ಶಾಸಕರಿಗೆ ಘೆರಾವ್, ಮನಪಾ ಕಚೇರಿಗೆ ಮುತ್ತಿಗೆಯಂತಹ ತೀವ್ರ ರೀತಿಯ ಹೋರಾಟವನ್ನು ನಡೆಸುವುದಾಗಿ ಹೇಳಿದರು.

ಧರಣಿಯನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನಾಯಕ ಕೆ.ಯಾದವ ಶೆಟ್ಟಿ, ಕಾರ್ಪೊರೇಟರ್ ಅಬ್ದುಲ್ ಲತೀಫ್,ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಕಾರ್ಮಿಕ ಮುಖಂಡರಾದ ಜೆ.ಬಾಲಕ್ರಷ್ಣ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಸೀತಾರಾಮ ಬೇರಿಂಜ, ಸುಕುಮಾರ್ ತೊಕ್ಕೊಟು, ಪ್ರಗತಿಪರ ಚಿಂತಕ ಪ್ರೊ.ಶಿವರಾಮ ಶೆಟ್ಟಿ, ಹೋರಾಟ ಸಮಿತಿಯ ಅಧ್ಯಕ್ಷರಾದ ಜೆ ಇಬ್ರಾಹೀಂ ಜೆಪ್ಪು, ಡಿವೈಎಫ್ಐ ಜಿಲ್ಲಾ ನಾಯಕರಾದ ಸಂತೋಷ್ ಬಜಾಲ್ ಮಾತನಾಡಿದರು.

ಸಾಮೂಹಿಕ ಧರಣಿ ಸತ್ಯಾಗ್ರಹದಲ್ಲಿ ಹೋರಾಟ ಸಮಿತಿಯ ನಾಯಕರಾದ ನಾಗೇಶ್ ಕೋಟ್ಯಾನ್, ಅಸುಂತ ಡಿಸೋಜ, ಭಾರತಿ ಬೋಳಾರ, ಅಶೋಕನ್ ಬೋಳಾರ, ಬಾಬು ಪೂಜಾರಿ, ಕಾರ್ಮಿಕ ಮುಖಂಡರಾದ ಪದ್ಮಾವತಿ ಶೆಟ್ಟಿ, ಜಯಲಕ್ಶ್ಮಿ ಜಪ್ಪಿನಮೊಗರು, ಮಹಿಳಾ ಮುಖಂಡರಾದ ಪ್ರಮೀಳಾ ದೇವಾಡಿಗ, ಯೋಗಿತಾ ಉಳ್ಳಾಲ, ಪ್ರಮೋದಿನಿ ಕಲ್ಲಾಪು, ತುಳುನಾಡ ರಕ್ಷಣಾ ವೇದಿಕೆಯ ಜ್ಯೋತಿಕಾ ಜೈನ್, ಪ್ರಶಾಂತ್ ಕಡಬ, ಸುಕೇಶ್ ಉಚ್ಚಿಲ್, ದಲಿತ ನಾಯಕರಾದ ತಿಮ್ಮಯ್ಯ ಕೊಂಚಾಡಿ, ಮುಂತಾದವರು ಉಪಸ್ಥಿತರಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

“ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ“ – ಜ್ಯೋತಿ ಪ್ರಸಾದ್ ಹೆಗ್ಡೆ

Next Post

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

Related Posts

ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರು ಸಾವು, ಓರ್ವ ಅಸ್ವಸ್ಥ
ಕರಾವಳಿ

ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರು ಸಾವು, ಓರ್ವ ಅಸ್ವಸ್ಥ

July 12, 2025
44
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು
ಕರಾವಳಿ

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
51
Next Post
ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

Discussion about this post

Recent News

ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರು ಸಾವು, ಓರ್ವ ಅಸ್ವಸ್ಥ

ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರು ಸಾವು, ಓರ್ವ ಅಸ್ವಸ್ಥ

July 12, 2025
44
ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರು ಸಾವು, ಓರ್ವ ಅಸ್ವಸ್ಥ

ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರು ಸಾವು, ಓರ್ವ ಅಸ್ವಸ್ಥ

July 12, 2025
ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d