ಶಿವಮೊಗ್ಗ: ನಗರದ ಶಂಕಿತ ಉಗ್ರ ಸೈಯ್ಯದ್ ಯಾಸೀನ್ ನನ್ನು ಪೊಲೀಸರು ವಿವಿಧ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ. ಮೊದಲಿಗೆ ಶಿವಮೊಗ್ಗದ ಸಿದ್ದೇಶ್ವರ ನಗರದ ಮೊದಲನೇ ತಿರುವಿನಲ್ಲಿರುವ ಯಾಸೀನ್ ಮನೆಯನ್ನು ಮಹಜರು ಮಾಡಲಾಯಿತು. ಇವರ ಮನೆಯಲ್ಲಿ ಸುಮಾರು ಒಂದೂವರೆ ತಾಸಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿದ್ದು,ಉಗ್ರ ಸಂಘಟನೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಂತರ ಯಾಸೀನ್ ಮನೆ ಬಳಿ ಇರುವ ಹಳೆ ಗುರುಪುರದ ತುಂಗಾ ನದಿ ದಂಡೆ ಬಳಿ ಮಹಜರು ಮಾಡಲಾಗಿದೆ. ತುಂಗಾ ನದಿ ದಂಡೆಯ ಮೇಲೆ ಯಾಸೀನ್, ಮಾಜ್ ಹಾಗೂ ಶಾರೀಕ್ ಬಾಂಬ್ ತಯಾರಿಸಿ, ಅದನ್ನು ತುಂಗಾ ನದಿಗೆ ಎಸೆಯುತ್ತಿದ್ದರು ಎಂದು ಹೇಳಲಾಗಿದೆ. ಇನ್ನಷ್ಟು ಸ್ಥಳಗಳ ಮಹಜರು ನಡೆಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರಿನಲ್ಲಿ ಮಾಜ್ ಮನೆಯನ್ನು ಶಿವಮೊಗ್ಗ ಪೊಲೀಸರು ಮಹಜರು ನಡೆಸಿದ್ದಾರೆ. ಸದ್ಯ ಈತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರ್ ರವರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.
Discover more from Coastal Times Kannada
Subscribe to get the latest posts sent to your email.
Discussion about this post