• About us
  • Contact us
  • Disclaimer
Sunday, December 10, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

ಮಂಗಳೂರು ನಗರದಲ್ಲಿ ಇನ್ನುಂದೆ ಕೆಲವು ಪ್ರದೇಶದಲ್ಲಿ ಹಾರ್ನ್ ಹಾಕುವಂತಿಲ್ಲ

Coastal Times by Coastal Times
November 20, 2023
in ಕರಾವಳಿ
ಮಂಗಳೂರು ನಗರದಲ್ಲಿ ಇನ್ನುಂದೆ ಕೆಲವು ಪ್ರದೇಶದಲ್ಲಿ ಹಾರ್ನ್ ಹಾಕುವಂತಿಲ್ಲ
98
VIEWS
WhatsappTelegramShare on FacebookShare on Twitterinstagram

ಮಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚುತ್ತಿರುವ ಕಾರಣ ಕೆಲವು ಸ್ಥಳಗಳಲ್ಲಿ ಶಬ್ಧ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ “ಹಾರ್ನ್ ನಿಷೇಧಿತ ಪ್ರದೇಶ” (No Horn Zone) ಗಳನ್ನು ಮಂಗಳೂರು ಪೊಲೀಸರು ಗುರುತಿಸಿದ್ದಾರೆ.

ವಾಹನ ಹಾರ್ನ್ ಶಬ್ಧದ ಕಾರಣದಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ನಿರ್ದಿಷ್ಟ ಪ್ರದೇಶಗಳನ್ನು ಹಾರ್ನ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.

ಹಾರ್ನ್ ನಿಷೇಧಿತ ಪ್ರದೇಶಗಳು ಹೀಗಿವೆ:

1. ರಾವ್ ಆ್ಯಂಡ್ ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ.
2. ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್‌ವರೆಗೆ.
3. ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್ ವರೆಗೆ.

ಹಂಪನಕಟ್ಟೆ ಜಂಕ್ಷನ್‌ :

1. ಹಂಪನಕಟ್ಟೆ ಜಂಕ್ಷನ್‍ನಿಂದ ಮಿಲಾಗ್ರಿಸ್ ಚರ್ಚ್‌ವರೆಗಿನ ಪ್ರದೇಶ.
2. ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್‌ನಿಂದ ಮುತ್ತಪ್ಪ ಗುಡಿಯವರೆಗೆ.
3. ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನಸೌಧ ಕಟ್ಟಡದವರೆಗೆ.

ಡಾ.ಅಂಬೇಡ್ಕರ್ ವೃತ್ತದ ಸುತ್ತಲಿನ ಪ್ರದೇಶ :

1. ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50 ಮೀಟರ್ ಪ್ರದೇಶ.
2.. ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
3. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
4. ಬಾವುಟ ಗುಡ್ಡದಿಂದ ಅಂಬೇಡ್ಕರ್ ವೃತ್ತದವರೆಗೆ.
5. ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್ ತಿರುವಿನವರೆಗೆ
6. ದೇರಳಕಟ್ಟೆ ಯೇನಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್‌ ಪ್ರದೇಶ
7. ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್‌ ಪ್ರದೇಶ

ಈ ಸ್ಥಳಗಳಲ್ಲಿ ವಾಹನ ಚಾಲಕರು ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ.

ಉಲ್ಲಂಘಿಸಿದರೆ? : ಭಾರತೀಯ ಮೋಟಾರು ವಾಹನ ಅಧಿನಿಯಮ (ತಿದ್ದುಪಡಿ) 2019 ರ ಕಲಂ 194 (ಎಫ್) ರಂತೆ ಹಾರ್ನ್ ನಿಷೇಧಿಸಿದ ಸಂಚಾರ ಸೂಚನಾ ಫಲಕ ಇರುವ ಪ್ರದೇಶದಲ್ಲಿ ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ ರೂ 1000/- ದಂಡವನ್ನು ಹಾಗೂ ಎರಡನೆ ಹಾಗೂ ನಂತರದ ಪ್ರತಿ ಉಲ್ಲಂಘನೆಗೆ ರೂ 2000/- ದಂಡವನ್ನು ವಿಧಿಸಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

Previous Post

ಯಾರೋ ಮಾಡಿದ ತಪ್ಪಿಗೆ 11 ತಿಂಗಳ ಕಾಲ ಸೌದಿ ಜೈಲು ವಾಸ ಅನುಭವಿಸಿ ಅಂತೂ ತಾಯ್ನಾಡಿಗೆ ಬಂದಿಳಿದ ಕಡಬದ ಯುವಕ

Next Post

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಕರಾವಳಿ ಮಹಿಳೆ ಯಾರು?

Related Posts

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್
ಕರಾವಳಿ

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

December 9, 2023
48
ಮಂಗಳೂರಿನಲ್ಲಿ ಮತ್ತೆ ವ್ಯಾಪಾರದಲ್ಲಿ ಧರ್ಮ ದಂಗಲ್: ಕಾಂಗ್ರೆಸ್‌ ಸರ್ಕಾರ ವಿರುದ್ಧ ಮುಸ್ಲಿಂ ವ್ಯಾಪಾರಿಗಳ ಆಕ್ರೋಶ
ಕರಾವಳಿ

ಮಂಗಳೂರಿನಲ್ಲಿ ಮತ್ತೆ ವ್ಯಾಪಾರದಲ್ಲಿ ಧರ್ಮ ದಂಗಲ್: ಕಾಂಗ್ರೆಸ್‌ ಸರ್ಕಾರ ವಿರುದ್ಧ ಮುಸ್ಲಿಂ ವ್ಯಾಪಾರಿಗಳ ಆಕ್ರೋಶ

December 8, 2023
109
Next Post
ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಕರಾವಳಿ ಮಹಿಳೆ ಯಾರು?

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಕರಾವಳಿ ಮಹಿಳೆ ಯಾರು?

Discussion about this post

Recent News

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

December 10, 2023
137
ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

December 9, 2023
22
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

December 10, 2023
ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

December 9, 2023
‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

December 9, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In