• About us
  • Contact us
  • Disclaimer
Saturday, January 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಎಂಸಿಸಿ ಬ್ಯಾಂಕ್‌ನ ‘ಮೈಲಿಗಲ್ಲು’ ಸಂಭ್ರಮಾಚರಣೆ

Coastal Times by Coastal Times
January 21, 2024
in ಕರಾವಳಿ
ಮಂಗಳೂರು : ಎಂಸಿಸಿ ಬ್ಯಾಂಕ್‌ನ ‘ಮೈಲಿಗಲ್ಲು’ ಸಂಭ್ರಮಾಚರಣೆ
44
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು: ಕ್ರೈಸ್ತ ಸಮುದಾಯದ ಧುರೀಣ ಪಿ.ಎಫ್.ಎಕ್ಸ್ ಸಲ್ದಾನ್ಹಾ ನೇತೃತ್ವದಲ್ಲಿ 1912ರಲ್ಲಿ ಕೇವಲ 10 ಸಾವಿರ ರೂ. ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಇದೀಗ 1 ಸಾವಿರ ಕೋ.ರೂ. ವಹಿವಾಟಿನೊಂದಿಗೆ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯಾಂಕಾಗಿ ಗುರುತಿಸಲ್ಪಟ್ಟ ಹಿನ್ನೆಲೆಯಲ್ಲಿ ರವಿವಾರ ನಗರದ ಮಿಲಾಗ್ರಿಸ್ ಹಾಲ್‌ನಲ್ಲಿ ‘ಎಂಸಿಸಿ ಬ್ಯಾಂಕ್‌ನ ಸಾಧನೆಯ ‘ಮೈಲಿಗಲ್ಲು’ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರಿ ರತ್ನ ಅನಿಲ್ ಲೋಬೋ ‘ಸಮಾಜದ ಕಟ್ಟಕಡೆಯ ಜನರಿಗೂ ಬ್ಯಾಂಕ್‌ನ ಸಾಲ ಸೌಲಭ್ಯ, ಯೋಜನೆಗಳು ದೊರಕಬೇಕು ಎಂಬುದು ನಮ್ಮೆಲ್ಲರ ಕನಸಾಗಿದೆ. ಅದನ್ನು ನನಸಾಗಿಸಲು ಸರ್ವ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದೇವೆ. 2018ರಲ್ಲಿ ನಾನು ಈ ಬ್ಯಾಂಕ್‌ನ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿ ಕೊಂಡಾಗ ಕೇವಲ 503 ಕೋ.ರೂ. ವ್ಯವಹಾರವಿತ್ತು. 5 ವರ್ಷದಲ್ಲಿ ಅದು 1 ಸಾವಿರಕ್ಕೇರಿರುವುದು ಸಾಹಸವೇ ಸರಿ. ಅದನ್ನು ಯಶಸ್ವಿಗೊಳಿಸುವಲ್ಲಿ ಬ್ಯಾಂಕ್‌ನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ಗ್ರಾಹಕರು ಅಪಾರ ಶ್ರಮ ಪಟ್ಟಿದ್ದಾರೆ. ಬ್ಯಾಂಕನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ಬ್ಯಾಂಕ್‌ನ 112 ವರ್ಷಗಳ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಶೇ.1.37ಕ್ಕೆ ಎನ್‌ಪಿಎ ಇಳಿಸಿ ನಿವ್ವಳ ಲಾಭ 10.38 ಕೋ.ರೂ. ದಾಖಲಿಸಿದೆ. 2002ರಲ್ಲಿ ಅವಿಭಜಿತ ದ.ಕ.ಜಿಲ್ಲೆಯಲ್ಲಿ 16 ಶಾಖೆಗಳಿತ್ತು. ಇದೀಗ ದ.ಕ. ಮತ್ತು ಉಡುಪಿ ಜೊತೆಗೆ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗೆ ಬ್ಯಾಂಕ್‌ನ ಸೇವೆಯನ್ನು ವಿಸ್ತರಿಸ ಲಾಗಿದೆ. ಪ್ರತ್ಯೇಕ ಘಟಕ ನಿರ್ಮಾಣ, ಸಹ ಮಿಲನ, ಸಮಾವೇಶ ಮತ್ತಿತರ ವಿಶೇಷ ಕಾರ್ಯಕ್ರಮಗಳ ಮೂಲಕ ಅನಿ ವಾಸಿ ಭಾರತೀಯ ಖಾತೆಗಳಿಗೆ ಚುರುಕು ಮುಟ್ಟಿಸಲಾಗುತ್ತಿದೆ ಎಂದು ಅನಿಲ್ ಲೋಬೋ ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅನಿವಾಸಿ ಉದ್ಯಮಿ ಮೈಕಲ್ ಡಿಸೋಜ ಸಮುದಾಯದ ಹಿರಿಯರು ಕಟ್ಟಿ ಬೆಳೆಸಿದ ಈ ಬ್ಯಾಂಕನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಯಾವ ಕಾರಣಕ್ಕೂ ಈ ಬ್ಯಾಂಕನ್ನು ವಿಲೀನಗೊಳಿಸುವುದಕ್ಕೆ ಆಸ್ಪದ ನೀಡದೆ ಸದಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಭವಿಷ್ಯದ ಯೋಜನೆಗಳಾದ ಇ-ಲಾಬಿ, ಪಾಸ್ ಬುಕ್ ಕಿಯೋಸ್ಕ್, Personalized Cheque Book, ಮೈಲಿಗಲ್ಲು ಸಾಧನೆಯ ವಿಶೇಷ ಕೊಡುಗೆಗಳನ್ನು ಅನಾವರಣ ಮಾಡಲಾಯಿತು. ಬ್ಯಾಂಕ್‌ನ ಬುಲೆಟಿನ್ ನಾಲ್ಕನೇ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಅನಿಲ್ ಲೋಬೊ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ಮತ್ತು ಸಮಾಜದೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಲು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ, ಪಾಂಬೂರು, ಉಡುಪಿ, ಸುರಕ್ಷಾ ಚಾರಿಟೇಬಲ್ ಟ್ರಸ್ಟ್, ಕಾರ್ಕಳ, ಪ್ರಜ್ಞಾ ಚಿಣ್ಣರ ತಂಗುಧಾಮ ಕೇಂದ್ರ, ಕಾಪಿಕಾಡ್ ಇವರಿಗೆ ಸಹಾಯಧನ ನೀಡಿ ಗೌರವಿಸಲಾಯಿತು.

ಹಿರಿಯ ಲೆಕ್ಕ ಪರಿಷೋಧಕ ರುಡೋಲ್ಫ್ ರೊಡ್ರಿಗಸ್ ದಿಕ್ಸೂಚಿ ಭಾಷಣಗೈದರು. ಮಿಲಾಗ್ರಿಸ್ ಚರ್ಚನ ಪ್ರಧಾನ ಗುರು ವಂ. ಬೊನವೆಂಚರ್ ನಜ್ರೆತ್, ಮಾಜಿ ಶಾಸಕರಾದ ಜೆ.ಆರ್.ಲೋಬೊ ಮತ್ತು ಐವನ್ ಡಿಸೋಜ, ಉದ್ಯಮಿ ರೋಹನ್ ಮೊಂತೇರೊ, ಸಮುದಾಯದ ನಾಯಕ ಪಿಯುಸ್ ಎಲ್.ರಾಡ್ರಿಗಸ್ ಶುಭ ಹಾರೈಸಿದರು.

ಬ್ಯಾಂಕ್‌ನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಸುನಿಲ್ ಮೆನೆಜಸ್ ಉಪಸ್ಥಿತರಿದ್ದರು. ಆಲ್ವಿನ್ ದಾಂತಿ ಕಾರ್ಯಕ್ರಮ ನಿರೂಪಿಸಿದರು.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು 12 ವರ್ಷದ ಹಿಂದೆ ಆಸಿಡ್‌ ಎರಚಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

Next Post

ಮಂದಿರ್ ವಹೀ ಬನಾಯೇಂಗೆ, 33 ವರ್ಷಗಳ ಬಿಜೆಪಿ ಭರವಸೆ ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ

Related Posts

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ
ಕರಾವಳಿ

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

January 22, 2026
53
ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ
ಕರಾವಳಿ

ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ

January 22, 2026
25
Next Post
ಮಂದಿರ್ ವಹೀ ಬನಾಯೇಂಗೆ, 33 ವರ್ಷಗಳ ಬಿಜೆಪಿ ಭರವಸೆ ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ

ಮಂದಿರ್ ವಹೀ ಬನಾಯೇಂಗೆ, 33 ವರ್ಷಗಳ ಬಿಜೆಪಿ ಭರವಸೆ ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ

Discussion about this post

Recent News

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
86
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
104
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

January 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d