ಕಡಬ, ಫೆ.21. ಇಲ್ಲಿನ ಮರ್ಧಾಳ ಸಮೀಪದ ನೈಲ ಸಮೀಪ ಸೋಮವಾರದಂದು ಇಬ್ಬವರನ್ನು ಬಲಿ ಪಡೆದ ಕಾಡಾನೆಯ ಸೆರೆ ಹಿಡಿಯುವ ಕಾರ್ಯಾಚರಣೆಯು ಐದು ಸಾಕಾನೆ ಹಾಗೂ ನುರಿತ ತಂಡದವರ ಉಪಸ್ಥಿತಿಯಲ್ಲಿ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಮಂಗಳವಾರದಂದು ಆರಂಭಗೊಂಡಿದೆ.ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ.ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಬಂದಿದೆ.



ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸಿ ಹಾಗು ಡ್ರೋನ್ ಬಳಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚಿ ಸಾಕಾನೆಗಳ ಸಹಕಾರದಲ್ಲಿ ಸೆರೆ ಕಾಡಾನೆಯನ್ನು ಹಿಡಿಯಲಾಗುತ್ತದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ಕಿಶೋರ್ ಕುಮಾರ್ ,ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಹಾಗು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಗರಹೊಳೆ ಹಾಗೂ ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಆಗಮಿಸಿದೆ.
Discover more from Coastal Times Kannada
Subscribe to get the latest posts sent to your email.








Discussion about this post