ಪುತ್ತೂರು ಫೆ.21: ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತಿಕಾರ ತಿರಿಸಿಕೊಳ್ಳುವ ಸಲುಹುವಾಗಿ ಪ್ಲ್ಯಾನ್ ಮಾಡಿದ್ದ ನಾಲ್ವರನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ (36), ಪುತ್ತೂರಿನ ಮನೋಜ್ (23), ಆಶಿಕ್ (28) ಹಾಗೂ ಸನತ್ ಕುಮಾರ್ (24) ಎಂಬುವವರು ಬಂಧಿತರು. ಅಕ್ಷಯ್ ಕಲ್ಲೆಗ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸದ್ಯ ಜೈಲಿನಲ್ಲಿರುವ ಮನೀಶ್ ಎಂಬಾತನ ಸಹೋದರ ಮನೋಜ್ ಮೇಲೆ ಸೇಡು ತೀರಿಸಲು ಸ್ಕೆಚ್ ಹಾಕಿದ್ದರು. ಇದಕ್ಕೂ ಮೊದಲು ಮನೋಜ್ ಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಗಳು, ನಿನ್ನ ತಮ್ಮ ಮನೀಶ್ ಹಾಗೂ ಉಳಿದ ಆರೋಪಿಗಳು ಜೈಲಿನಲ್ಲಿದ್ದಾರೆ, ಅವರನ್ನೂ ಬಿಡೋದಿಲ್ಲ. ಆದ್ರೆ ನಿನ್ನನ್ನ ಜೀವ ಸಹಿತ ಬಿಡಲ್ಲ ಎಂದು ಬೆದರಿಕೆ ಹಾಕಿದ್ದರು. ಈ ಹಿನ್ನಲೆ ಮನೋಜ್ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು.
ಈ ನಡುವೆ ಮನೋಜ್ ಚಲನವಲನ ಗಮನಿಸುತ್ತಿದ್ದ ದುಷ್ಕರ್ಮಿಗಳ ತಂಡ, ಪುತ್ತೂರಿನ ಮುಕ್ರಂಪಾಡಿಯಲ್ಲಿ ಹೊಂಚು ಹಾಕಿತ್ತು. ಅದರಂತೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ಕಾರಿನಲ್ಲಿ ನಾಲ್ವರು ದುಷ್ಕರ್ಮಿಗಳ ತಂಡ ಕಾರಿನಲ್ಲಿ ತಲ್ವಾರ್ ಇಟ್ಟುಕೊಂಡು ಮನೋಜ್ ಮೇಲೆ ರಿವೇಂಜ್ ತೀರಿಸಿಕೊಳ್ಳಲು ರೆಡಿಯಾಗಿದ್ದರು. ಇದೇ ವೇಳೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post