• About us
  • Contact us
  • Disclaimer
Tuesday, September 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಕ್ರೇನ್‌ನಿಂದ ಬೆಂಗಳೂರು ತಲುಪಿದ ನವೀನ್‌ ಪಾರ್ಥಿವ ಶರೀರ

Coastal Times by Coastal Times
March 21, 2022
in ರಾಜ್ಯ
ಉಕ್ರೇನ್‌ನಿಂದ ಬೆಂಗಳೂರು ತಲುಪಿದ ನವೀನ್‌ ಪಾರ್ಥಿವ ಶರೀರ
23
VIEWS
WhatsappTelegramShare on FacebookShare on Twitter

ಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ಚಳಗೇರಿ ಗ್ರಾಮದ ನವೀನ್‌ ಗ್ಯಾನಗೌಡರ ಅವರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತು.

ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ನಸುಕಿನಲ್ಲಿ ಮೃತದೇಹ ತರಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತದೇಹ ಮತ್ತು ನವೀನ್‌ಗೆ ಸಂಬಂಧಿಸಿದ ದಾಖಲೆಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಪೊಲೀಸ್ ಭದ್ರತೆಯಲ್ಲಿ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿದೆ.  ‘ಕೇಂದ್ರ ಸರ್ಕಾರದ ಆಪರೇಷನ್‌ ಗಂಗಾ ಕಾರ್ಯಾಚರಣೆಯ ಮೂಲಕ ಕರ್ನಾಟಕದ 572 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತರಲಾಗಿದೆ. ನವೀನ್‌ ಮೃತ ದೇಹ ಇರಿಸಲಾಗಿದ್ದ ಶವಾಗಾರದ ಸಮೀಪದಲ್ಲೇ ದಾಳಿ ನಡೆದಿದ್ದರಿಂದ ಮೃತದೇಹ ತರುವ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು’ ಎಂದು ಮುಖ್ಯಮಂತ್ರಿ ತಿಳಿಸಿದರು.

‘ನವೀನ್‌ ಪಾರ್ಥಿವ ಶರೀರಕ್ಕೆ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುತ್ತದೆ. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ಈ ಹಿಂದೆ ತಿಳಿಸಿದ್ದರು.

ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ಸಂಭವಿಸಿದ ದಾಳಿಯಲ್ಲಿ ನವೀನ್‌ ಮೃತಪಟ್ಟಿದ್ದರು. ಮೃತ ಯುವಕ ನಾಲ್ಕನೇ ವರ್ಷದ ವೈದ್ಯಕೀಯ ಕೋರ್ಸ್‌ ಓದುತ್ತಿದ್ದರು. ಒಂದು ವಾರ ಕಾಲ ಬಂಕರ್‌ನಲ್ಲಿ ಇದ್ದ ಅವರು ಹೊರಗೆ ಬಂದಾಗ ಕ್ಷಿಪಣಿ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.

ಉಕ್ರೇನ್ ನಲ್ಲಿ ಮೃತಪಟ್ಟಿದ್ದ ರಾಣೆಬೆನ್ನೂರಿನ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಶ್ರೀ @BSBommai ಅವರು ಇಂದು ಬೆಂಗಳೂರಿನಲ್ಲಿ ಬರಮಾಡಿಕೊಂಡು ಗೌರವ ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ @mla_sudhakar, @shivkumarudasi, ಶಾಸಕ ಅರುಣಕುಮಾರ, ಸಲಿಂ ಅಹ್ಮದ್ ಹಾಗೂ ಇತರರು ಉಪಸ್ಥಿತರಿದ್ದರು. pic.twitter.com/Lc1MuctvaI

— CM of Karnataka (@CMofKarnataka) March 20, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಕ್ರೇನ್ ಗೆ ’ ಕ್ರಿಪ್ಟೊ ಕರೆನ್ಸಿ ’ ಸಹಾಯದಿಂದ ಹರಿದುಬರುತ್ತಿದೆ ನೆರವಿನ ಮಹಾಪೂರ

Next Post

ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರು ಆರೋಪಿಯ ಬಂಧನ!

Related Posts

ರಾಜ್ಯ

ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

August 14, 2025
68
ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್
ರಾಜ್ಯ

ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್

July 25, 2025
67
Next Post
ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರು ಆರೋಪಿಯ ಬಂಧನ!

ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರು ಆರೋಪಿಯ ಬಂಧನ!

Discussion about this post

Recent News

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
16
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d