ಮಂಗಳೂರು, ಮಾ 20 : ಬಿಜೆಪಿ ಸರಕಾರ ಜನಸಾಮನ್ಯರ ವಿರುದ್ಧ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಈ ಸರಕಾರವನ್ನು ಸಾಮರ್ಥ್ಯವಿರುವ ಸರ್ಕಾರ ಎಂದು ಹೇಳಲು ಸಾಧ್ಯವಿಲ್ಲ. ಸರಕಾರ ಪೌರ ಕಾರ್ಮಿಕರ ಬೇಡಿಕೆಯನ್ನು ಕಡೆಗಣಿಸಿದೆ. ಹಲವು ದಿನಗಳಿಂದ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರಕಾರ ಇವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರ ಪ್ರತಿಭಟನೆಯಿಂದ ಕಸ ವಿಲೇವಾರಿಯಾಗುತ್ತಿಲ್ಲ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಮೊದಲೇ ಕರ್ನಾಟಕದ ಜನ ಭ್ರಷ್ಟಾಚಾರದ ವಾಸನೆಯಿಂದ ರೋಸಿ ಹೋಗಿದ್ದಾರೆ. ಇದೀಗ ಕಸದ ವಾಸನೆಯಿಂದಲೂ ಜನರಿಗೆ ಸಮಸ್ಯೆಯಾಗಿದೆ. ಈ ಸರ್ಕಾರ ಬಂದ ಮೇಲೆ ವಿವಿಧ ಸರಕಾರಿ ನೌಕರರಿಂದ ಪ್ರತಿಭಟನೆಯಾಗುತ್ತಿದೆ. ಪ್ರತಿಭಟನೆಯ ಮೂಲಕವೇ ಸರ್ಕಾರಿ ನೌಕರರು ತಮ್ಮ ಹಕ್ಕನ್ನು ಪಡೆಯುವ ದುಸ್ಥಿತಿ ಎದುರಾಗಿದೆ. ಬೇಡಿಕೆ ನೀಡಿದರು ಈ ಸರಕಾರ ಇವರನ್ನು ಸತಾಯಿಸುತ್ತದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸರಕಾರ ಇದ್ದಾಗ ಯಾಕೆ ಯಾವುದೇ ಪ್ರತಿಭಟನೆ ನಡೆಯುತ್ತಿರಲಿಲ್ಲ ಎಂದು ಪ್ರಶ್ನಿಸಿದ ಅವರು ನಾನು ಆರೋಗ್ಯ ಸಚಿವನಾಗಿದ್ದ ವೇಳೆ ಆರೋಗ್ಯ ಸಿಬ್ಬಂದಿ, ಪೌರ ಕಾರ್ಮಿಕರ ಬೇಡಿಕೆಗಳನ್ನು ಆಯಾಯ ಕಾಲಕ್ಕೆ ಮಾಡುತ್ತಿದ್ದೆವು.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಮಂಗಳೂರು ವಿವಿಯ ಪದವಿ ತರಗತಿಗಳ ಫಲಿತಾಂಶ ಬಾರದೆ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಆರ್ಟಿಓ ಕಚೇರಿಗೆ ಹೋದರೆ ಅಲ್ಲಿ ಆರ್ಸಿ ಪ್ರಿಂಟ್ ಮಾಡುವ ಕಾರ್ಡ್ ಗೂ ಗತಿಯಿಲ್ಲ. ಬಿಜೆಪಿ ಸರಕಾರ ನಡೆಸುವ ಮಂದಿ ನಲ್ವತ್ತು ಪರ್ಸೆಂಟಿನ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತರಾಗಿದ್ದಾರೆ ಎಂದು ಯು.ಟಿ.ಖಾದರ್ ಹೇಳಿದರು.
ಉರಿಗೌಡ ನಂಜೇಗೌಡರ ಕುರಿತ ಪ್ರಶ್ನೆಗೆ, ಅವರು ಯಾರು ಅಂತಲೇ ಗೊತ್ತಿಲ್ಲ ಎಂದರು. ಟಿಪ್ಪು ಕುರಿತ ಪಠ್ಯದಲ್ಲಿ ಆತನನ್ನು ಬ್ರಿಟಿಷರು ಕೊಂದಿದ್ದು ಅಂತ ಇದೆ. ಅದು ಬಿಟ್ಟರೆ ಬೇರೆ ಯಾವುದೇ ಇತಿಹಾಸ ಓದಿಲ್ಲ ಎಂದರು. ಕಳ್ಳಿಗೆ ತಾರನಾಥ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post