• About us
  • Contact us
  • Disclaimer
Sunday, January 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಕುಲಶೇಖರ ಚರ್ಚ್‌ನಲ್ಲಿ 4 ದಿನ ಬೈಬಲ್ ಮಹಾ ಸಮ್ಮೇಳನಕ್ಕೆ ಚಾಲನೆ

Coastal Times by Coastal Times
March 21, 2025
in ಕರಾವಳಿ
ಮಂಗಳೂರು ಕುಲಶೇಖರ ಚರ್ಚ್‌ನಲ್ಲಿ 4 ದಿನ ಬೈಬಲ್ ಮಹಾ ಸಮ್ಮೇಳನಕ್ಕೆ ಚಾಲನೆ
19
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.20: ಮಂಗಳೂರು, ಮಾ.20: ಮಂಗಳೂರು ಕೆಥೋಲಿಕ್ ಧರ್ಮ ಕ್ಷೇತ್ರದ ಬೈಬಲ್ ಆಯೋಗ ಮತ್ತು ಕೆಥೋಲಿಕ್ ಕಾರಿಸ್ಮಾತಿಕ್ ಸೇವಾ ಸಂಚಲನ ವತಿಯಿಂದ ನಗರದ ಕುಲಶೇಖರ ಕೋರ್ಡೆಲ್ ಪವಿತ್ರ ಶಿಲುಬೆಯ ಚರ್ಚ್ ಆವರಣದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಬೈಬಲ್ ಮಹಾ ಸಮ್ಮೇಳನಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಮಂಗಳೂರು ಧರ್ಮಕ್ಷೇತ್ರದ ವಿಶ್ರಾಂತ ಧರ್ಮಾಧ್ಯಕ್ಷ ಅ.ವಂ. ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು. ಅದಕ್ಕೂ ಮೊದಲು ಚರ್ಚ್‌ನಿಂದ ಸಮ್ಮೇಳನದ ವೇದಿಕೆಗೆ ಬೈಬಲ್ ಮೆರವಣಿಗೆ ನಡೆಯಿತು. ಬೈಬಲ್‌ನಿಂದ ಆಯ್ದ ವಿಷಯಗಳ ಕುರಿತು ಪ್ರಬೋಧನೆ ನಡೆಯಿತು.

ಮಂಗಳೂರು ಕೆಥೋಲಿಕ್‌ ಧರ್ಮ ಕ್ಷೇತ್ರದ ಬೈಬಲ್‌ ಆಯೋಗ ಮತ್ತು ಕೆಥೋಲಿಕ್‌ ಕಾರಿಸ್ಮಾತಿಕ್‌ ಸೇವಾ ಸಂಚಲನ ವತಿಯಿಂದ ಮಂಗಳೂರಿನ ಕುಲಶೇಖರ ಕೋರ್ಡೆಲ್‌ ಪವಿತ್ರ ಶಿಲುಬೆಯ ಚರ್ಚ್‌ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಸಂಜೆ 4ರಿಂದ ರಾತ್ರಿ 8.30ರವರೆಗೆ ಸಮ್ಮೇಳನ ನಡೆಯಲಿದ್ದು, ಬೈಬಲ್‌ನಿಂದ ಆಯ್ದ ವಿಷಯಗಳ ಕುರಿತು ಪ್ರಬೋಧನೆ ನಡೆಯಲಿದೆ. ಧರ್ಮ ಗುರುಗಳು, ಭಗಿನಿಯರು, ಮಂಗಳೂರು ಧರ್ಮಕ್ಷೇತ್ರ ಹಾಗೂ ಸುತ್ತಮುತ್ತಲಿನ ಸುಮಾರು 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಕರ್ನಾಟಕ ಪ್ರಾಂತೀಯ ಕ್ಯಾರಿಸ್ಮಾಟಿಕ್ ಸಂಚಾಲನದ ನಿರ್ದೇಶಕ ವಂ. ಫ್ರ್ಯಾಂಕ್ಲಿನ್ ಡಿಸೋಜ, ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ. ಡಾ. ಜೆ.ಬಿ. ಸಲ್ಡಾನ್ಹಾ, ರೋಯ್ ಕ್ಯಾಸ್ತಲಿನೊ, ಕ್ಯಾರಿಸ್ಮಾಟಿಕ್ ಸಂಚಾಲನದ ಸಂಚಾಲಕ ವಂ. ಕ್ಲಿಫರ್ಡ್ ಫೆರ್ನಾಂಡಿಸ್, ಚೇರ್‌ಮೆನ್ ಕೆವಿನ್ ಡಿಸೋಜ, ಕಾರ್ಯದರ್ಶಿ ಮೊಸ್ಸಂ ರೇಗೋ, ಚರ್ಚ್‌ನ ಉಪಾಧ್ಯಕ್ಷೆ ರೂತ್ ಕ್ಯಾಸ್ತಲಿನೊ, ಕಾರ್ಯ ದರ್ಶಿ ಅನಿಲ್ ಡೆಸಾ, ಬೈಬಲ್ ಆಯೋಗದ ಸಹ ಕಾರ್ಯದರ್ಶಿ ಲೆನನ್ ಜೋನ್ ಮಸ್ಕರೇನಸ್, ಚರ್ಚ್‌ನ ಸಹಾಯಕ ಧರ್ಮಗುರುಗಳಾದ ವಂ. ವಿಜಯ್ ಮೊಂತೇರೊ, ಪಾವ್ಲ್ ಸೆಬಾಸ್ಟಿಯನ್, ನಿಶಿತ್ ಲೋಬೊ ಉಪಸ್ಥಿತರಿದ್ದರು.

ಕೇರಳದ ಧರ್ಮಗುರುಗಳಿಂದ ಪ್ರಬೋಧನೆ: ಕೇರಳದ ಅನಾಕ್ಕರ ಮೇರಿಯನ್‌ ರಿಟ್ರೀಟ್‌ ಸೆಂಟರ್‌ನ ನಿರ್ದೇಶಕ, ಧರ್ಮಗುರು ವಂ| ಡೊಮಿನಿಕ್‌ ವಲಮನಲ್‌ ಅವರು ವಿಶೇಷ ಪ್ರಭೋದನೆ ನೀಡಲಿದ್ದಾರೆ. ಇಂಗ್ಲಿಷ್‌ನಲ್ಲಿ ನಡೆಯುವ ಪ್ರವಚನವನ್ನು ಕೊಂಕಣಿಗೆ ಭಾಷಾಂತರ ಮಾಡಲಾಗುತ್ತದೆ. ಉಳಿದಂತೆ ಮಂಗಳೂರಿನ ಬಿಷಪ್‌ ಅ|ವಂ|ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ, ವಿಶ್ರಾಂತ ಬಿಷಪ್‌ ಅ|ವಂ|ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ, ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಅ|ವಂ|ಡಾ| ಲೋರೆನ್ಸ್‌ ಮುಕ್ಕುಝಿ, ಗುಲ್ಬರ್ಗಾ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಅ|ವಂ|ಡಾ| ರಾಬರ್ಟ್‌ ಮಿರಾಂದ ಬಲಿಪೂಜೆ ನೆರವೇರಿಸಲಿದ್ದಾರೆ. ವಿವಿಧ ಚರ್ಚ್‌ಗಳ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಲಿದ್ದಾರೆ.

ಸಮ್ಮೇಳನ ಹೀಗೆ ನಡೆಯಲಿದೆ:
* ಪ್ರತೀ ದಿನ ಸಂಜೆ 4 ಗಂಟೆಗೆ ಸಮ್ಮೇಳನ ಆರಂಭ. ಮೊದಲು ದೇವರ ಸ್ತುತಿ ಗಾಯನ, 5 ಗಂಟೆಗೆ ಪವಿತ್ರ ಬಲಿಪೂಜೆ.
* ಸಂಜೆ 6 ಗಂಟೆಯಿಂದ ರಾತ್ರಿ 8.30ರ ವರೆಗೆ ಪ್ರಬೋಧನೆ ನಡೆಯಲಿದೆ. ಮಧ್ಯ ಮಧ್ಯ ಗಾಯನ ಕೂಡ ಇರಲಿದೆ.
* ಭಾಗವಹಿಸುವ ಭಕ್ತರಿಗೆ ನೆರವಾಗಲು ನಿತ್ಯ ನೂರರಂತೆ 400 ಮಂದಿ ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ.
* ಸುತ್ತಲೂ ಕುಡಿಯುವ ನೀರಿನ ವ್ಯವಸ್ಥೆ ಇದ್ದು, ವಾಹನ ಪಾರ್ಕಿಂಗ್‌ಗೆ ವಿಶಾಲ ಮೈದಾನದಲ್ಲಿ ವ್ಯವಸ್ಥೆ ಇದೆ.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮೀನು ಕದ್ದ ಆರೋಪ, ಮಲ್ಪೆ ಬಂದರಿನಲ್ಲಿ ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಹಲ್ಲೆ, ಮೂವರ ಬಂಧನ, ಕಾನೂನು ಕೈಗೆತ್ತಿಕೊಳ್ಳುವುದು ಸಹಿಸಲ್ಲ ಎಂದ ಸಿಎಂ ಸಿದ್ದರಾಮಯ್ಯ

Next Post

2024-25ರ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿನಿಂದ ಆರಂಭ

Related Posts

ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ
ಕರಾವಳಿ

ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

January 25, 2026
34
ಜ. 26ರಿಂದ ಉಳ್ಳಾಲದ ಸೀ ಗ್ರೌಂಡ್‌ನಲ್ಲಿ ಬೃಹತ್ ಕಮ್ಯುನಿಟಿ ಫೆಸ್ಟ್; ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ
ಕರಾವಳಿ

ಜ. 26ರಿಂದ ಉಳ್ಳಾಲದ ಸೀ ಗ್ರೌಂಡ್‌ನಲ್ಲಿ ಬೃಹತ್ ಕಮ್ಯುನಿಟಿ ಫೆಸ್ಟ್; ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ

January 25, 2026
14
Next Post
2024-25ರ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿನಿಂದ ಆರಂಭ

2024-25ರ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿನಿಂದ ಆರಂಭ

Discussion about this post

Recent News

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
4
ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

January 25, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

January 25, 2026
ಕಡಬ: ತಂದೆಗೆ ಚೂರಿ ಇರಿತ, ಮಗ ಗುಂಡೇಟಿಗೆ ಬಲಿ; ಕೌಟುಂಬಿಕ ಕಲಹ ಸಾವಿನಲ್ಲಿ ಅಂತ್ಯ

ಕಡಬ: ತಂದೆಗೆ ಚೂರಿ ಇರಿತ, ಮಗ ಗುಂಡೇಟಿಗೆ ಬಲಿ; ಕೌಟುಂಬಿಕ ಕಲಹ ಸಾವಿನಲ್ಲಿ ಅಂತ್ಯ

January 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d