ಆನೇಕಲ್: ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಹೊಸೂರು ಮುಖ್ಯ ರಸ್ತೆಯ ಬಳಿಯ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಬಾಲಕಿಯ ಶವವೊಂದು ರುಂಡ – ಮುಂಡ ಕತ್ತರಿಸಿದ ಸ್ಥಿತಿಯಲ್ಲಿ, ಮುಚ್ಚಿದ ನೀಲಿ ಸೂಟ್ಕೇಸ್ವೊಂದರಲ್ಲಿ ಪತ್ತೆಯಾದ ಆತಂಕಕಾರಿ ಘಟನೆ ಹಳೆ ಚಂದಾಪುರ ರೈಲ್ವೇ ಹಳಿ ಬಳಿ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತದೇಹವನ್ನು ಸೂಟ್ಕೇಸ್ನಲ್ಲಿ ಬೇರೆಡೆ ತುಂಬಿಸಿ ನಂತರ ಚಲಿಸುವ ರೈಲಿನಿಂದ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಹಾಗೂ ಬಯ್ಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಾಲಕಿಗೆ ಸುಮಾರು ಒಂಬತ್ತು ವರ್ಷ ವಯಸ್ಸಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬಾಲಕಿಯ ಚಹರೆ ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನೆ ಮಾಹಿತಿ ತಿಳಿದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Discover more from Coastal Times Kannada
Subscribe to get the latest posts sent to your email.
Discussion about this post