• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸರ್ಕಾರಿ ಐಟಿಐನ ಉನ್ನತೀಕರಿಸಿದ ತಾಂತ್ರಿಕ ಕೈಗಾರಿಕಾ ತರಬೇತಿಗೆ ಆಧುನಿಕ ತಂತ್ರಜ್ಞಾನದ ಸ್ಪರ್ಶ

Coastal Times by Coastal Times
June 21, 2022
in ಕರಾವಳಿ
ಮಂಗಳೂರು ಸರ್ಕಾರಿ ಐಟಿಐನ ಉನ್ನತೀಕರಿಸಿದ ತಾಂತ್ರಿಕ ಕೈಗಾರಿಕಾ ತರಬೇತಿಗೆ ಆಧುನಿಕ ತಂತ್ರಜ್ಞಾನದ ಸ್ಪರ್ಶ
27
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಹಾಗೂ ಸರ್ಕಾರಿ ಪುರುಷರ ಐಟಿಐಗಳನ್ನು ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗಿದ್ದು, ಇಲ್ಲಿ ಆರಂಭಿಸಲಾದ ‘ಉದ್ಯೋಗ’ ಯೋಜನೆಯನ್ನು ಸೋಮವಾರ ಶಾಸಕ ಡಿ.ವೇದವ್ಯಾಸ ಕಾಮತ್‌ ಉದ್ಘಾಟಿಸಿದರು. ಕೈಗಾರಿಕಾ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಇತ್ತೀಚಿನ ಬೆಳವಣಿಗೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನ ತರಬೇತಿ ಒದಗಿಸಲು ಈ ಎರಡು ಐಟಿಐಗಳನ್ನು ಸಜ್ಜುಗೊಳಿಸಲಾಗಿದೆ. ‌‌ಇದಕ್ಕಾಗಿಯೇ ಕಾರ್ಯಾಗಾರಗಳನ್ನು ನಿರ್ಮಿಸಲಾಗಿದ್ದು, ತರಬೇತಿ ನೀಡಲು ಅಗತ್ಯವಿರುವ ಸುಸಜ್ಜಿತ ಉಪಕರಣಗಳನ್ನು ಟಾಟಾ ಟೆಕ್ನಾಲಜೀಸ್‌ ಸಂಸ್ಥೆಯು ಒದಗಿಸಿದೆ. ದೀರ್ಘಾವಧಿ ಕೋರ್ಸ್‌ಗಳ ಮೂಲಕ ರಾಜ್ಯದಾದ್ಯಂತ 1.5 ಲಕ್ಷ ನುರಿತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರವು ಟಾಟಾ ಟೆಕ್ನಾಲಜೀಸ್‌ ಮತ್ತು ಇತರ ಸಂಸ್ಥೆಗಳ ಜೊತೆ ಸೇರಿ ‘ಉದ್ಯೋಗ’ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗೆ ತಗಲುವ ಒಟ್ಟು ಮೊತ್ತದಲ್ಲಿ ಶೇ 12ರಷ್ಟನ್ನು ರಾಜ್ಯ ಸರ್ಕಾರ ಒದಗಿಸುತ್ತಿದೆ. ಉಳಿದ ವೆಚ್ಚವನ್ನು ಟಾಟಾ ಟೆಕ್ನಾಲಜೀಸ್‌ ಹಾಗೂ ಇತರ ಸಂಸ್ಥೆಗಳು ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಭರಿಸುತ್ತಿವೆ.

ವೇದವ್ಯಾಸ ಕಾಮತ್‌, ‘ರಾಜ್ಯದಾದ್ಯಂತ 150 ಐಟಿಐಗಳಲ್ಲಿ ಹಾಗೂ ನಾನು ಪ್ರತಿನಿಧಿಸುತ್ತಿರುವ ಕ್ಷೇತ್ರದ ಎರಡು ಐಟಿಐಗಳು ಸೇರಿ, ಜಿಲ್ಲೆಯ ಐದು ಐಟಿಐಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿದೆ. ವಿದ್ಯುನ್ಮಾನ ವಾಹನಗಳು ಹಾಗೂ ಲೇಸರ್‌ ಕಟ್ಟಿಂಗ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳ ತರಬೇತಿಯನ್ನೂ ಈಗ ಐಟಿಐಗಳಲ್ಲಿ ಪಡೆಯಲು ಸಾಧ್ಯ. ವಿದ್ಯಾರ್ಥಿಗಳು ಕೈಗಾರಿಕೆಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶ ಗಿಟ್ಟಿಸಲು ಈ ಕಾರ್ಯಕ್ರಮ ನೆರವಾಗಲಿದೆ’ ಎಂದು ತಿಳಿಸಿದರು.

ಐಟಿಐ ಪ್ರಾಂಶುಪಾಲ ಎ.ಬಾಲಕೃಷ್ಣ, ‘ಉದ್ಯೋಗ ಕಾರ್ಯಕ್ರಮದಡಿ ಟೆಕ್ನಾಲಜಿ ಲ್ಯಾಬ್‌ಗಳನ್ನು ಆರಂಭಿಸಲಾಗಿದೆ. ಎರಡೂ ಐಟಿಐಗಳಿಗೂ ತಲಾ 60 ಕಂಪ್ಯೂಟರ್‌ಗಳನ್ನು ಪೂರೈಸಲಾಗಿದೆ. ವಿ–ಸ್ಯಾಟ್ ಉಪಗ್ರಹ ಆಧಾರಿತ ತರಗತಿಗಳ ಮೂಲಕ ರಾಜ್ಯದಾದ್ಯಂತ ತಜ್ಞರು ಏಕಕಾಲದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಾರೆ’ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಉನ್ನತೀಕರಣಗೊಂಡಿರುವ 150 ಐಟಿಐಗಳನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ರೂಪದಲ್ಲಿ ಉದ್ಘಾಟಿಸಿದರು. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ವಿಟ್ಲ ಐಟಿಐಗಳಲ್ಲೂ ಉದ್ಯೋಗ ಯೋಜನೆ ಅನುಷ್ಠಾನಗೊಳ್ಳುತ್ತಿದೆ.‌

ಪಾಲಿಕೆ ಸದಸ್ಯೆ ಶಕೀಲಾ ಕಾವ, ಸೀಡೆಕ್‌ ಜಂಟಿ ನಿರ್ದೇಶಕ ಅರವಿಂದ ಡಿ.ಬಾಳೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ವಿವೇಕಾನಂದ, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಹೇಮಚಂದ್ರ, ಪುರುಷರ ಐಟಿಐನ ಐಎಂಸಿ ಜೀವನ್‌ ಸಲ್ಡಾನ ಹಾಗೂ ಮಹಿಳೆಯರ ಐಟಿಐನ ಐಎಂಸಿ ಪೀಟರ್‌ ನಿರ್ಮಲ್‌ ಉಪಸ್ಥಿತರಿದ್ದರು.

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಂತರರಾಷ್ಟ್ರೀಯ ಯೋಗ ದಿನ: ಮೈಸೂರಿನಲ್ಲಿ ಪ್ರಧಾನಿ ಮೋದಿ

Next Post

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಸಿರಿಯಾ ದೇಶದ ಹಡಗಿನಲ್ಲಿ ದೋಷ, 15 ಸಿಬ್ಬಂದಿ ರಕ್ಷಣೆ

Related Posts

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್
ಕರಾವಳಿ

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
42
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ
ಕರಾವಳಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
138
Next Post
ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಸಿರಿಯಾ ದೇಶದ ಹಡಗಿನಲ್ಲಿ ದೋಷ, 15 ಸಿಬ್ಬಂದಿ ರಕ್ಷಣೆ

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಸಿರಿಯಾ ದೇಶದ ಹಡಗಿನಲ್ಲಿ ದೋಷ, 15 ಸಿಬ್ಬಂದಿ ರಕ್ಷಣೆ

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
42
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
138
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d