• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಮಾದಕ ವಸ್ತು, ಪಿಸ್ತೂಲ್ ಹೊಂದಿದ್ದ ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ

Coastal Times by Coastal Times
July 21, 2023
in ಕ್ರೈಮ್ ನ್ಯೂಸ್
ಮಂಗಳೂರು: ಮಾದಕ ವಸ್ತು, ಪಿಸ್ತೂಲ್ ಹೊಂದಿದ್ದ ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ
267
VIEWS
WhatsappTelegramShare on FacebookShare on Twitter

ಮಂಗಳೂರು, ಜು. 21: ಡ್ರಗ್ಸ್ ಮುಕ್ತ ಮಂಗಳೂರು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು ನಗರದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಪಿಸ್ತೂಲ್ ಹಾಗೂ ಡ್ರಗ್ ಸಹಿತ ದಸ್ತಗಿರಿ ಮಾಡಿರುವ ಬಗ್ಗೆ ವರದಿಯಾಗಿದೆ.

ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್, ಉಳ್ಳಾಲದ ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಘಟಕದ ಎಸಿಪಿ, ಪಿಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಬಂಟ್ವಾಳ ಫರಂಗಿಪೇಟೆಯ ಮುಹಮ್ಮದ್ ನಿಯಾಝ್ (28), ತಲಪಾಡಿ ಕೆ.ಸಿ ರೋಡ್ ನ ನಿಶಾದ್ (31), ಕಣ್ಣೂರಿನ ಮಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು.

ಆರೋಪಿಗಳು ಕಾರಿನಲ್ಲಿ ಬಂದು ಉಳ್ಳಾಲ ತಾಲ್ಲೂಕು ತಲಪಾಡಿ ಗ್ರಾಮದ ಪಿಲಿಕೂರಿನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಂಗಳೂರು ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಒಟ್ಟು 180 ಗ್ರಾಂ ತೂಕದ ರೂ.9ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ ಕುಮಾರ್ ಜೈನ್ ತಿಳಿಸಿದರು.

ಬಂಧಿತರಿಂದ ಎರಡು ಸ್ವಿಫ್ಟ್ ಕಾರು, ನಾಲ್ಕು ಮೊಬೈಲ್, ರೂ.22,050 ನಗದು, ಒಂದು ಪಿಸ್ತೂಲ್, ಒಂದು ಸಜೀವ ಗುಂಡು, ಎರಡು ಡ್ರಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದೆ ಎಂದರು. ಮುಂಬೈ ಗೋವಾದಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು ಎಂಬ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ. ಇನ್ನಷ್ಟು ಹೆಚ್ಚಿನ ತನಿಖೆ ನಡೆಸಬೇಕಾಗಿದೆ ಎಂದು ಅವರು ಹೇಳಿದರು.

ಆರೋಪಿ ನಿಯಾಝ್ ಎಂಬಾತನ ವಿರುದ್ಧ ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಎಎಸ್ಐಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಗೆ ಹಲ್ಲೆ ಪ್ರಕರಣ, ಸುರತ್ಕಲ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸೆನ್ ಕೆರೈ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ 2 ಪ್ರಕರಣ, ಉಡುಪಿಯ ಗಂಗೊಳ್ಳಿ ಠಾಣೆಯಲ್ಲಿ 2 ದರೋಡೆ ಪ್ರಕರಣ, ಕಂಕನಾಡಿ ನಗರ, ಕೊಣಾಜೆ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ 2 ಪ್ರಕರಣಗಳು ಸೇರಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಈತ ನ್ಯಾಯಾಲಯದಿಂದ ಜಾಮೀನು ಪಡೆದು ನ್ಯಾಯಾಲಯದ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಾರಣ ವಾರೆಂಟ್ ಜಾರಿಯಾಗಿರುತ್ತದೆ ಎಂದು ಪೊಲೀಸ್ ಆಯುಕ್ತರು ವಿವರಿಸಿದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು| ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶ

Next Post

ಮಂಗಳೂರು: ಅನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

Related Posts

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು
ಕ್ರೈಮ್ ನ್ಯೂಸ್

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ
ಕ್ರೈಮ್ ನ್ಯೂಸ್

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
79
Next Post
ಮಂಗಳೂರು: ಅನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಮಂಗಳೂರು: ಅನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
144
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d