ಉಳ್ಳಾಲ: ಬೈಕ್ ನಲ್ಲಿ ಯದ್ವಾತದ್ವ ಚಲಿಸಿ ರಾಜ್ಯ ಹೆದ್ದಾರಿ ನಡುವೆ ನಿಂತು ಸಾರ್ವಜನಿಕವಾಗಿ ಶಾಂತಿಭಂಗ ನಡೆಸುತ್ತಿದ್ದ ಗಾಂಜಾ ವ್ಯಸನಿಯನ್ನು ಕೊಣಾಜೆ ಠಾಣಾ ಪೊಲೀಸರು ಚಾಣಾಕ್ಷತನದಿಂದ ಹಿಡಿದು ಬಂಧಿಸಿದ್ದಾರೆ.
ಉಳ್ಳಾಲ ಮುಕ್ಕಚ್ಚೇರಿ ಕೈಕೋ ನಿವಾಸಿ ಅಬೂಬಕರ್ ಸಿದ್ದೀಖ್( 24) ಬಂಧಿತ ಆರೋಪಿಯಾಗಿದ್ದು. ಗಾಂಜಾ ಸೇವಿಸಿ ಬೈಕಿನಲ್ಲಿ ಅಜಾಗರೂಕತೆಯಿಂದ ಬಂದಿದ್ದ ಆರೋಪಿ ಕೈಯಲ್ಲಿ ಚೂರಿ ಮತ್ತು ಕಲ್ಲು ಹಿಡಿದುಕೊಂಡು ಸಾರ್ವಜನಿಕವಾಗಿ ಆತಂಕ ಸೃಷ್ಟಿಸಿದ್ದ. ಸ್ಥಳೀಯರು ಕೊಣಾಜೆ ಠಾಣಾ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು, ಸ್ಥಳಕ್ಕಾಗಮಿಸಿದ್ದ ನಿವೃತ್ತ ಯೋಧ ಸಂತೋಷ್ ಹಿಂಬದಿಯಿಂದ ಲಾಕ್ ಮಾಡಿ ಸಿದ್ದೀಖ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಠಾಣಾ ಸಿಬ್ಬಂದಿ ಇನ್ನೋರ್ವ ನಿವೃತ್ತ ಯೋಧ ಪೂರ್ಣೇಶ್ ಹಾಗೂ ಇನ್ನೋರ್ವರು ಸಿಬ್ಬಂದಿ ಭಾಗಿಯಾಗಿದ್ದರು.
ಆರೋಪಿ ಸಿದ್ದೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು, ಅಮಲು ಪದಾರ್ಥ ಸೇವಿಸಿದ್ದು ಧೃಡಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Discussion about this post